7:57 PM Wednesday17 - June 2026
ಬ್ರೇಕಿಂಗ್ ನ್ಯೂಸ್
ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3… ವಿರಾಜಪೇಟೆ ಸಮೀಪದ ರೆಸಾರ್ಟ್ ಈಜುಕೋಳದಲ್ಲಿ ಬಿದ್ದು ಗೋವಾದ ಪ್ರವಾಸಿಗ ಸಾವು ಇಂದಿರಾ ಲಂಕೇಶ್ ನಿಧನ: ಮಾಜಿ ಸಿಎಂ ಸಿದ್ಧರಾಮಯ್ಯ, ಖ್ಯಾತ ನಟ ಪ್ರಕಾಶ್ ರೈ… ಮೈಸೂರು ಪಬ್‌ನಲ್ಲಿ ಭೀಕರ ಅಗ್ನಿ ದುರಂತ: ಇಬ್ಬರು ಸಜೀವ ದಹನ; ಹಲವರ ಸ್ಥಿತಿ… ಶಬರಿಮಲೆ ಮಣಿಕಂಠನ ದರ್ಶನಕ್ಕಾಗಿ ಇರುಮುಡಿ ಹೊತ್ತು ಶಬರಿಮಲೆಗೆ ಹೊರಟ ಕೇಂದ್ರ ಸಚಿವ ಕುಮಾರಸ್ವಾಮಿ

ಇತ್ತೀಚಿನ ಸುದ್ದಿ

ನಂಜನಗೂಡು: ಬಿಸಿಲಿನ ಬೇಗೆ ತಾಳಲಾರದೆ ಮೈ ತಣಿಸಲು ಕಪಿಲಾ ನದಿಗಿಳಿದ 3 ಮಂದಿ ಕಾರ್ಮಿಕರು ನೀರುಪಾಲು

26/03/2024, 15:21

*ನಂಜನಗೂಡಿನ ಗೊದ್ದನಪುರ ಬಳಿ ಇರುವ ಕಪಿಲಾ ನದಿಯಲ್ಲಿ ನಡೆದಿರುವ ಅವಘಡ*

*ಮೂವರು ಕಾರ್ಮಿಕರು ನೀರುಪಲಾಗಿ ಜೀವ ಕಳೆದುಕೊಂಡರೂ ಸ್ಥಳಕ್ಕಾಗಮಿಸದ ಕಾರ್ಮಿಕ ಇಲಾಖೆಯ ಅಧಿಕಾರಿಗಳು*

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ಬೇಸಿಗೆಯ ಬಿಸಿಲಿನ ತಾಪ ತಾಳಲಾರದೆ ತಾಪ ನೀಗಿಸಿಕೊಳ್ಳುವ ಸಲುವಾಗಿ ಕಪಿಲಾ ನದಿಯಲ್ಲಿ ಈಜಲು ತೆರಳಿದ ಮೂವರು ಯುವಕರು ಸುಳಿಗೆ ಸಿಲುಕಿ ಸಾವನ್ನಪ್ಪಿರುವ ದಾರುಣ ಘಟನೆ
ನಂಜನಗೂಡು ತಾಲ್ಲೂಕಿನ ಗೊದ್ದನಪುರ ಗ್ರಾಮದ ಕಪಿಲಾ ನದಿಯ ಬಳಿ ನಡೆದಿದೆ.


ಬಿಹಾರ ಮೂಲದ ಮೃತ ಕಾರ್ಮಿಕರಾದ ಮಿಲನ್ (25) ವರ್ಷ ಮೋಹನ್ (19) ವರ್ಷ ಹಾಗೂ ತರುಣ್ (19) ವರ್ಷ ಎಂಬುವರು ನಂಜನಗೂಡು ಕೈಗಾರಿಕಾ ಪ್ರದೇಶದಲ್ಲಿರುವ ನೆಸ್ಲೆ ಕಾರ್ಖಾನೆಯಲ್ಲಿ ಕೆಲಸ ಮುಗಿಸಿ ಬಿಸಿಲಿನ ಬೇಗೆ ತಾಳಲಾರದೆ ಸಮೀಪದ ಗೊದ್ದನಪುರ ಗ್ರಾಮದ ಕಪಿಲಾ ನದಿಗೆ ಈಜಲು ತೆರಳಿದ್ದಾರೆ.
ಈ ಸಂದರ್ಭ ಮೂವರು ಯುವಕರು ನದಿಯ ಸುಳಿಗೆ ಸಿಲುಕಿದ ಕಾರಣ ಸುಳಿಯಿಂದ ತಪ್ಪಿಸಿಕೊಳ್ಳಲಾಗದೆ ಮೂವರೂ ಜೀವಕಳೆದುಕೊಂಡಿದ್ದಾರೆ.
ವಿಷಯ ತಿಳಿದ ನಂಜನಗೂಡು ಗ್ರಾಮಾಂತರ ಪೊಲೀಸರು ಅಗ್ನಿಶಾಮಕ ಠಾಣೆಯ ಅಧಿಕಾರಿಗಳಿಗೆ ವಿಚಾರ ಮುಟ್ಟಿಸಿ ಶೋಧ ಕಾರ್ಯಕ್ಕೆ ಮುಂದಾಗಿದ್ದಾರೆ. ಶೋಧ ಕಾರ್ಯದಲ್ಲಿ ಮಿಲನ್ ಎಂಬು ಯುವಕನ ಮೃತ ದೇಹ ಪತ್ತೆಯಾಗಿದೆ. ಇನ್ನುಳಿದ ಇಬ್ಬರು ಯುವಕರ ಶವಕ್ಕಾಗಿ ಹುಡುಕಾಟ ನಡೆಸಲಾಗುತ್ತಿದೆ.
ನಾಲ್ಕೈದು ವರ್ಷಗಳಿಂದಲೂ ಕೂಡ ಗುತ್ತಿಗೆ ಆಧಾರದ ಮೇಲೆ ನೆಸ್ಲೆ ಕಾರ್ಖಾನೆಯಲ್ಲಿ ಕೆಲಸ ಮಾಡಿಕೊಂಡಿದ್ದ ಯುವಕರು.
ಇದೀಗ ನಂಜನಗೂಡು ಗ್ರಾಮಾಂತರ ಠಾಣೆಯ ಪೊಲೀಸರು ಪ್ರಕರಣವನ್ನು ದಾಖಲಿಸಿಕೊಂಡಿದ್ದು.
ಅಗ್ನಿಶಾಮಕ ದಳದ ಸಿಬ್ಬಂದಿಗಳು ಕಪಿಲಾ ನದಿಯಲ್ಲಿ ಶವಗಳಿಗಾಗಿ ಶೋಧ ಕಾರ್ಯ ನಡೆಸುತ್ತಿದ್ದಾರೆ. ಕಾರ್ಮಿಕ ಇಲಾಖೆ ಅಧಿಕಾರಿಗಳು ಮತ್ತು ನೆಸ್ಲೆ ಕಾರ್ಖಾನೆಯ ಯಾವುದೇ ಸಿಬ್ಬಂದಿಗಳು ಸ್ಥಳದಲ್ಲಿ ಹಾಜರಿರದ ಕಾರಣ ಸಾರ್ವಜನಿಕರು ಆಕ್ರೋಶವನ್ನು ವ್ಯಕ್ತಪಡಿಸಿದ ಘಟನೆ ನಡೆಯಿತು.

ಇತ್ತೀಚಿನ ಸುದ್ದಿ

ಜಾಹೀರಾತು