2:39 PM Monday22 - September 2025
ಬ್ರೇಕಿಂಗ್ ನ್ಯೂಸ್
ಅಂತಾರಾಷ್ಟ್ರೀಯ ಬಾಲ್ಯ ಕ್ಯಾನ್ಸರ್ ಜಾಗೃತಿ: ಬೆಂಗಳೂರು ಇಸ್ಕಾನ್ ದೇವಾಲಯಕ್ಕೆ ಚಿನ್ನದ ಬಣ್ಣದ ಬೆಳಕು ನವೆಂಬರ್ ನಿಂದ ಮಾಹಿತಿ ಹಕ್ಕು ಅದಾಲತ್: ಮಾಹಿತಿ ಹಕ್ಕು ಅರ್ಜಿಗಳನ್ನು ಶೂನ್ಯಕ್ಕಿಳಿಸಲು ಗುರಿ ಪಿಡಿಒ ಜೇಷ್ಠಾತಾ ಪಟ್ಟಿ ನ್ಯಾಯಸಮ್ಮತವಾಗಿ ಅಂತಿಮಗೊಳಿಸಲು ಸೂಕ್ತ ಕ್ರಮ: ಸಚಿವ ಪ್ರಿಯಾಂಕ್‌ ಖರ್ಗೆ ಮಂಗಳೂರಿನಲ್ಲಿ ಧರ್ಮದ ಹೆಸರಲ್ಲಿ ಜೈಲಿಗೆ ಹೋದವರು, ಕೊಲೆ ಆದವರೆಲ್ಲಾ ಹಿಂದುಳಿದವರೇ ಆಗಿದ್ದಾರೆ: ಸಿಎಂ… ವಿರಾಜಪೇಟೆ ಆರೆಂಜ್ ಸ್ಪಾ -ಬ್ಯೂಟಿ ಪಾರ್ಲರ್ ದಾಳಿ ಪ್ರಕರಣ: ನಾಲ್ವರು ಪ್ರಮುಖ ಆರೋಪಿಗಳ… Kodagu | ಕುಶಾಲನಗರ: ಕಾವೇರಿ ನದಿಯಲ್ಲಿ ಮುಳುಗಿ ಕಾಡಾನೆ ದಾರುಣ ಸಾವು ಮಡಿಕೇರಿ ನಗರಸಭೆಯ ಮೇಲೆ ಲೋಕಾಯುಕ್ತ ದಿಢೀರ್ ದಾಳಿ: ಸಾರ್ವಜನಿಕರ ದೂರಿಗೆ ಸ್ಪಂದನೆ ಮೈಸೂರು ದಸರಾ ಉದ್ಘಾಟನೆಗೆ ಬಾನು ಮುಸ್ತಾಕ್: ತಡೆ ಕೋರಿ ಸಲ್ಲಿಸಿದ ಅರ್ಜಿ ಸುಪ್ರೀಂಕೋರ್ಟ್… ಪಂಚ ಗ್ಯಾರಂಟಿ ಯೋಜನೆಗಳಿಗೆ 98 ಸಾವಿರ ಕೋಟಿ; ಅಭಿವೃದ್ಧಿಗೆ 8 ಸಾವಿರ ಕೋಟಿ:… New Delhi | ಕಾಂಗ್ರೆಸ್ ಸರಕಾರದ ಪಂಚೇಂದ್ರಿಯಗಳು ನಿಷ್ಕ್ರಿಯವಾಗಿವೆ: ಕೇಂದ್ರ ಸಚಿವ ಕುಮಾರಸ್ವಾಮಿ…

ಇತ್ತೀಚಿನ ಸುದ್ದಿ

ನಂಜನಗೂಡು: ಬಿಸಿಲಿನ ಬೇಗೆ ತಾಳಲಾರದೆ ಮೈ ತಣಿಸಲು ಕಪಿಲಾ ನದಿಗಿಳಿದ 3 ಮಂದಿ ಕಾರ್ಮಿಕರು ನೀರುಪಾಲು

26/03/2024, 15:21

*ನಂಜನಗೂಡಿನ ಗೊದ್ದನಪುರ ಬಳಿ ಇರುವ ಕಪಿಲಾ ನದಿಯಲ್ಲಿ ನಡೆದಿರುವ ಅವಘಡ*

*ಮೂವರು ಕಾರ್ಮಿಕರು ನೀರುಪಲಾಗಿ ಜೀವ ಕಳೆದುಕೊಂಡರೂ ಸ್ಥಳಕ್ಕಾಗಮಿಸದ ಕಾರ್ಮಿಕ ಇಲಾಖೆಯ ಅಧಿಕಾರಿಗಳು*

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ಬೇಸಿಗೆಯ ಬಿಸಿಲಿನ ತಾಪ ತಾಳಲಾರದೆ ತಾಪ ನೀಗಿಸಿಕೊಳ್ಳುವ ಸಲುವಾಗಿ ಕಪಿಲಾ ನದಿಯಲ್ಲಿ ಈಜಲು ತೆರಳಿದ ಮೂವರು ಯುವಕರು ಸುಳಿಗೆ ಸಿಲುಕಿ ಸಾವನ್ನಪ್ಪಿರುವ ದಾರುಣ ಘಟನೆ
ನಂಜನಗೂಡು ತಾಲ್ಲೂಕಿನ ಗೊದ್ದನಪುರ ಗ್ರಾಮದ ಕಪಿಲಾ ನದಿಯ ಬಳಿ ನಡೆದಿದೆ.


ಬಿಹಾರ ಮೂಲದ ಮೃತ ಕಾರ್ಮಿಕರಾದ ಮಿಲನ್ (25) ವರ್ಷ ಮೋಹನ್ (19) ವರ್ಷ ಹಾಗೂ ತರುಣ್ (19) ವರ್ಷ ಎಂಬುವರು ನಂಜನಗೂಡು ಕೈಗಾರಿಕಾ ಪ್ರದೇಶದಲ್ಲಿರುವ ನೆಸ್ಲೆ ಕಾರ್ಖಾನೆಯಲ್ಲಿ ಕೆಲಸ ಮುಗಿಸಿ ಬಿಸಿಲಿನ ಬೇಗೆ ತಾಳಲಾರದೆ ಸಮೀಪದ ಗೊದ್ದನಪುರ ಗ್ರಾಮದ ಕಪಿಲಾ ನದಿಗೆ ಈಜಲು ತೆರಳಿದ್ದಾರೆ.
ಈ ಸಂದರ್ಭ ಮೂವರು ಯುವಕರು ನದಿಯ ಸುಳಿಗೆ ಸಿಲುಕಿದ ಕಾರಣ ಸುಳಿಯಿಂದ ತಪ್ಪಿಸಿಕೊಳ್ಳಲಾಗದೆ ಮೂವರೂ ಜೀವಕಳೆದುಕೊಂಡಿದ್ದಾರೆ.
ವಿಷಯ ತಿಳಿದ ನಂಜನಗೂಡು ಗ್ರಾಮಾಂತರ ಪೊಲೀಸರು ಅಗ್ನಿಶಾಮಕ ಠಾಣೆಯ ಅಧಿಕಾರಿಗಳಿಗೆ ವಿಚಾರ ಮುಟ್ಟಿಸಿ ಶೋಧ ಕಾರ್ಯಕ್ಕೆ ಮುಂದಾಗಿದ್ದಾರೆ. ಶೋಧ ಕಾರ್ಯದಲ್ಲಿ ಮಿಲನ್ ಎಂಬು ಯುವಕನ ಮೃತ ದೇಹ ಪತ್ತೆಯಾಗಿದೆ. ಇನ್ನುಳಿದ ಇಬ್ಬರು ಯುವಕರ ಶವಕ್ಕಾಗಿ ಹುಡುಕಾಟ ನಡೆಸಲಾಗುತ್ತಿದೆ.
ನಾಲ್ಕೈದು ವರ್ಷಗಳಿಂದಲೂ ಕೂಡ ಗುತ್ತಿಗೆ ಆಧಾರದ ಮೇಲೆ ನೆಸ್ಲೆ ಕಾರ್ಖಾನೆಯಲ್ಲಿ ಕೆಲಸ ಮಾಡಿಕೊಂಡಿದ್ದ ಯುವಕರು.
ಇದೀಗ ನಂಜನಗೂಡು ಗ್ರಾಮಾಂತರ ಠಾಣೆಯ ಪೊಲೀಸರು ಪ್ರಕರಣವನ್ನು ದಾಖಲಿಸಿಕೊಂಡಿದ್ದು.
ಅಗ್ನಿಶಾಮಕ ದಳದ ಸಿಬ್ಬಂದಿಗಳು ಕಪಿಲಾ ನದಿಯಲ್ಲಿ ಶವಗಳಿಗಾಗಿ ಶೋಧ ಕಾರ್ಯ ನಡೆಸುತ್ತಿದ್ದಾರೆ. ಕಾರ್ಮಿಕ ಇಲಾಖೆ ಅಧಿಕಾರಿಗಳು ಮತ್ತು ನೆಸ್ಲೆ ಕಾರ್ಖಾನೆಯ ಯಾವುದೇ ಸಿಬ್ಬಂದಿಗಳು ಸ್ಥಳದಲ್ಲಿ ಹಾಜರಿರದ ಕಾರಣ ಸಾರ್ವಜನಿಕರು ಆಕ್ರೋಶವನ್ನು ವ್ಯಕ್ತಪಡಿಸಿದ ಘಟನೆ ನಡೆಯಿತು.

ಇತ್ತೀಚಿನ ಸುದ್ದಿ

ಜಾಹೀರಾತು