12:05 AM Thursday3 - July 2025
ಬ್ರೇಕಿಂಗ್ ನ್ಯೂಸ್
ಕಡೂರು: 6 ದಿನಗಳ ಹುಡುಕಾಟದ ನಂತರವೂ ಸಿಗದ ಫಾರೆಸ್ಟ್ ಗಾರ್ಡ್ ಶರತ್‌ ಸುಳಿವು ಸೋರುತ್ತಿದೆ ಸೂರು; ಕೊಠಡಿ ತುಂಬಾ ನೀರು: ರಾಷ್ಟ್ರಕವಿ ಕುವೆಂಪು ಓದಿದೆ ಶಾಲೆಯ ಕೇಳುವವರೇ… ಮಲೆನಾಡಲ್ಲಿ ಮುಂದುವರಿದ ಮಳೆ: ಶೃಂಗೇರಿಯ ಗಾಂಧಿ ಮೈದಾನದ ರಸ್ತೆಗೆ ನುಗ್ಗಿ ನೆರೆ ನೀರು;… ಮುಖ್ಯಮಂತ್ರಿ ಸ್ಥಾನಕ್ಕೆ ಯಾವುದೇ ಪೈಪೋಟಿಯಿಲ್ಲ: ಸಿಎಂ ಕಾನೂನು ಸಲಹೆಗಾರ ಪೊನ್ನಣ್ಣ Accident | ಸುರತ್ಕಲ್ ಬಳಿ ಎರಡು ಖಾಸಗಿ ಬಸ್ಸುಗಳು ಮುಖಾಮುಖಿ ಡಿಕ್ಕಿ: 28… Chikkaballapura | ರಾಜ್ಯ ಸಚಿವ ಸಂಪುಟ ಸಭೆ: ಮುಖ್ಯಮಂತ್ರಿ ಘೋಷಿಸಿದ ಯೋಜನೆ, ತೀರ್ಮಾನಗಳೇನು? JDS Protest | ರಾಜ್ಯದಲ್ಲಿ ಆರ್ಥಿಕ ಅರಾಜಕತೆ: ಬೆಂಗಳೂರು ಪ್ರತಿಭಟನೆಯಲ್ಲಿ ಜೆಡಿಎಸ್ ಆರೋಪ Dharwad | ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ: ಕಾರ್ಮಿಕ… ಬೆಂಗಳೂರು ಕಾಲ್ತುಳಿತದ ಪ್ರಕರಣ; ಸಿಎಟಿ ಆದೇಶ ವಿರುದ್ಧ ಮೇಲ್ಮನವಿ ಸಲ್ಲಿಸಲು ಅವಕಾಶವಿದೆ: ಮುಖ್ಯಮಂತ್ರಿ Karnataka CM | ಮಾಧ್ಯಮಗಳು ನನ್ನನ್ನೂ ಸೇರಿ ಅಧಿಕಾರಸ್ಥರ ಓಲೈಕೆ ಮಾಡಬಾರದು: ಮುಖ್ಯಮಂತ್ರಿ…

ಇತ್ತೀಚಿನ ಸುದ್ದಿ

ಕುಲಶೇಖರದ ಹೋಲಿ ಕ್ರಾಸ್ ಚರ್ಚಿನಲ್ಲಿ ‘ಶಿಲುಬೆಯ ಹಾದಿ’ ಸಂಪನ್ನ: 12 ಚರ್ಚುಗಳ ಸಹಭಾಗಿತ್ವ

27/03/2024, 16:13

ಮಂಗಳೂರು(reporterkarnataka.com): ನಗರದ ಕುಲಶೇಖರದ ಹೋಲಿ ಕ್ರಾಸ್ ಚರ್ಚಿನಲ್ಲಿ ನಗರದ ಸಿಟಿ ವಲಯದ 12 ಚರ್ಚುಗಳ ಸುಮಾರು 200ಕ್ಕೂ ಮಿಕ್ಕಿ ಕಲಾವಿದರು ಹಾಗೂ ನಿರೂಪಕರಿಂದ “ಶಿಲುಬೆಯ ಹಾದಿ” (ಖುರ್ಸಾಚಿ ವಾಟ್) ಮಾರ್ಚ್ 25ರಂದು ನಡೆಸಲಾಯಿತು.
ಕಾರ್ಡೆಲ್ ಚರ್ಚಿನ ವಠಾರದಲ್ಲಿ ಈ ಕಾರ್ಯಕ್ರಮ ನಡೆಸಲಾಯಿತು. ನಗರದ ಕುಲಶೇಖರ (ಕಾರ್ಡೆಲ್), ವಾಮಂಜೂರು, ಪಾಲ್ದಾನೆ, ಬೊಂದೇಲ್, ದೇರೇಬೈಲು, ನೀರುಮಾರ್ಗ, ಕೆಲರೈ, ಬಜ್ಜೊಡಿ, ಕಪಿತಾನಿಯೋ, ಬಜಾಲ್, ಪೆರ್ಮಾಯಿ, ಶಕ್ತಿನಗರ ಚರ್ಚುಗಳ ಕಲಾವಿದರು ಹಾಗೂ ಪ್ರತಿ ಚರ್ಚಿನಿಂದ ಪ್ರತಿ ನಿಲ್ದಾಣಕ್ಕೆ (ಸ್ಟೇಶನ್) 3 ಜನ ನಿರೂಪಕರು ಈ ಶಿಲುಬೆಯ ಹಾದಿಯನ್ನು ನಡೆಸಿದರು. 12 ಚರ್ಚುಗಳ ಎಲ್ಲಾ ಭಕ್ತವೃಂದದವರು ಶಿಲುಬೆಯ ಹಾದಿಯಲ್ಲಿ ಭಾಗವಹಿಸಿದರು. ಸುಮಾರು 7 ಸಾವಿರ ಜನರು ಭಾಗವಹಿಸಿದ್ದರು.

ಕಾರ್ಡೆಲ್ ಚರ್ಚಿನ ಪ್ರಧಾನ ಧರ್ಮಗುರುಗಳಾದ ವಂ| ಫಾ| ಕ್ಲಿಫರ್ಡ್ ಫೆರ್ನಾಂಡಿಸ್ ಸೇರಿದಂತೆ ಗಣ್ಯರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು