5:48 AM Sunday15 - March 2026
ಬ್ರೇಕಿಂಗ್ ನ್ಯೂಸ್
ಕಲಬುರಗಿ; ಟ್ಯಾಂಕರ್ ಮೂಲಕ ನೀರು ಪೂರೈಕೆಗೆ ಕ್ರಮ: ವಿಧಾನಸಭೆಯಲ್ಲಿ ಸಚಿವ ಬೈರತಿ ಸುರೇಶ್… ವಿವಿಧ ಬೇಡಿಕೆ ಆಗ್ರಹಿಸಿ ರಾಜ್ಯ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಫ್ರೀಡಂ… ರಾಯಚೂರು | ಒಳ ಮೀಸಲಾತಿ ಹೋರಾಟ: ಪೆಟ್ರೋಲ್ ಸುರಿದುಕೊಂಡು ಯುವಕ ಆತ್ಮಹತ್ಯೆಗೆ ಯತ್ನ ಮಲೆಮಹದೇಶ್ವರ ಬೆಟ್ಟದ ರಸ್ತೆಯಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ: ಭಕ್ತರಲ್ಲಿ ಹೆಚ್ಚಿದ ಆತಂಕ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್‌: ಮೌಲ್ಯ 10 ಪಟ್ಟು ಹೆಚ್ಚು,… ಪೆಟಾ ಮೇಲ್ಮನವಿ ವಜಾ: ರಾಜ್ಯದೆಲ್ಲೆಡೆ ಕಂಬಳ ಆಯೋಜನೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್ ನಿಗಮಗಳಿಗೆ ಅನುದಾನ ಕಡಿತ, ಆಸ್ಪತ್ರೆಗಳಲ್ಲಿ ಔಷಧಿ ಇಲ್ಲ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಟೀಕೆ ಚಿಕ್ಕಮಗಳೂರು: ಹಸುವನ್ನು ತುಳಿದು ಕೊಂದ ಕಾಡಾನೆ; ಮಾಣಿಮಕ್ಕಿ ಗ್ರಾಮಸ್ಥರಲ್ಲಿ ಆತಂಕ ತೀರ್ಥಹಳ್ಳಿ: ಕುವೆಂಪು ಜೈವಿಕ ಅರಣ್ಯದಲ್ಲಿ ಹತ್ತಿಕೊಂಡ ಬೆಂಕಿ; ಅರಣ್ಯಾಧಿಕಾರಿಗಳ ದೌಡು ಝೂ ಅಭಿ ಇನ್ನಿಲ್ಲ: ಕಾಲು ನೋವಿನಿಂದ ಬಳಲುತ್ತಿದ್ದ ಮತ್ತಿಗೋಡು ಶಿಬಿರದ ಸಾಕಾನೆ

ಇತ್ತೀಚಿನ ಸುದ್ದಿ

ನಾಟಕ ಸ್ಪರ್ಧೆ: ಮಂಗಳೂರು ವಿಭಾಗದ ಸರಕಾರಿ ನೌಕರರ ಸಂಘದ ‘ನಾಗಮಂಡಲ’ ರಾಜ್ಯಮಟ್ಟಕ್ಕೆ ಆಯ್ಕೆ

27/03/2024, 22:26

ಮಂಗಳೂರು(reporterkarnataka.com): ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ವತಿಯಿಂದ ನಡೆದ ನಾಟಕ ಸ್ಪರ್ಧೆಯಲ್ಲಿ ಗಿರೀಶ್ ಕಾರ್ನಾಡ ಅವರ ‘ನಾಗ ಮಂಡಲ’ (ಸ್ವತಂತ್ರ ರಂಗಾವಿಷ್ಕಾರ) ನಾಟಕ ಪ್ರಥಮ ಸ್ಥಾನದೊಂದಿಗೆ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದೆ.
ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಕ್ರೀಡಾ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳು ಮಾ. 19 ಮತ್ತು 20ರಂದು ಮಂಗಳೂರು ಮಿನಿ ವಿಧಾನಸೌಧದ ಬಳಿ ಇರುವ ಸರಕಾರಿ ನೌಕರರ ಸಂಘದ ಸಭಾಂಗಣದಲ್ಲಿ ನಡೆದಿತ್ತು.

ನಾಟಕ ಸ್ಪರ್ಧೆಯ ವಿಭಾಗದಲ್ಲಿ ‘ನಾಗ ಮಂಡಲ’ ನಾಟಕ ಪ್ರಥಮ ಸ್ಥಾನ ಪಡೆದಿದೆ.
ವಿನೂತನ ರಂಗ ಕಲ್ಪನೆಯೊಂದಿಗೆ ನಾಗಮಂಡಲ ನಾಟಕವನ್ನು ಮಂಗಳೂರು ವಿಭಾಗದ ಸರಕಾರಿ ನೌಕರರ ಸಂಘದ ಸದಸ್ಯರು ಮನೋಜ್ಞವಾಗಿ ಅಭಿನಯಿಸಿದ್ದರು. ಹಣ, ಮದ್ಯ, ಮಾದಕತೆ ಅಧಿಕಾರಗಳ ಹಿಂದೆ ಓಡುವ ಯುವ ಸಮಾಜ, ಶಿಥಿಲಗೊಳ್ಳುತ್ತಿರುವ ಕೌಟುಂಬಿಕ ಜೀವನದ ಕೈ ಕನ್ನಡಿಯಾಗಿ ನಾಗಮಂಡಲ ನಾಟಕವನ್ನು ಕಾಸರಗೋಡಿನ ಯುವ ರಂಗ ನಿರ್ದೇಶಕ ಸದಾಶಿವ ಬಾಲಮಿತ್ರ ಅವರು ವಿಭಿನ್ನವಾಗಿ ನಿರ್ದೇಶಿಸಿದ್ದು, ಹರೀಶ್ ಕುಮಾರ್ ತಲಪಾಡಿ ಅವರ ನೇತೃತ್ವದ ಅಭಿನಯ ತಂಡದಲ್ಲಿ ವಸಂತ ರೈ ಬಿ.ಕೆ., ಪ್ರತಿಮಾ ಹೆಬ್ಬಾರ್, ಜಯಲಕ್ಷ್ಮಿ ಜಿ.ಕುಂಪಲ ಕಲ್ಲರಕೋಡಿ, ಯಶೋದಾ ಪಿ., ಮಹಾಲಕ್ಷ್ಮಿ, ಇಂದಿರಾ ಜಿ. ಸುಜಾತ ಬೋಳಾರ, ರಾಮಕೃಷ್ಣ ಕಟ್ಟಿಮನಿ, ಯು.ಆರ್. ಶೆಟ್ಟಿ, ಮೊದಲಾದವರು ಮನೋಜ್ಞ ಅಭಿನಯ ನೀಡಿದ್ದರು. ಮೆಲ್ವಿನ್ ಪೆರ್ಮುದೆ ಸಂಗೀತ ಸಂಯೋಜನೆ ನೀಡಿದ್ದು, ಮೋಹನ್ ಸಿರಿರ್ಲಾಲ್, ಬಾಬು ಮಾಸ್ಟರ್, ಶಿವಪ್ರಸಾದ್ ಚೆರುಗೋಳಿ, ವಸಂತ ಮಾಸ್ಟರ್ ಮೂಡಂಬೈಲು, ದಿವಾಕರ ಬಲ್ಲಾಲ್, ಎಸ್.ಪಿ. ರಾವ್, ಅಶೋಕ್ ಕುಮಾರ್, ಬಾಲಕೃಷ್ಣ ಗಾಳಿಯಡ್ಕ ಮೊದಲಾದವರು ರಂಗಪರಿಕರಗಳಲ್ಲಿ ಸಹಕರಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು