12:07 PM Wednesday28 - January 2026
ಬ್ರೇಕಿಂಗ್ ನ್ಯೂಸ್
ಸುನಿಲ್ ಕುಮಾರ್ ಪರಶುರಾಮನ ಮೂರ್ತಿಯ ಫೈಬರ್ ನಲ್ಲಿ ಮಾಡಿಸಿ ಕಂಚಿನದ್ದು ಎಂದು ನಂಬಿಸಿದ್ದರು:… ಸೋಮವಾರಪೇಟೆ ಕಾಜೂರಿನಲ್ಲಿ ಭಾರೀ ಬೆಂಕಿ ಅವಘಡ: ಮನೆಯೊಳಗೆ ನಿದ್ರಿಸುತ್ತಿದ್ದ ಬಾಲಕ ಬಚಾವ್ ಮಾಡಿದ… ಕೊಡಗಿನ ಅಭಿವೃದ್ಧಿಗೆ ಕಾಂಗ್ರೆಸ್ ಸರ್ಕಾರ ಬದ್ಧ: ಉಸ್ತುವಾರಿ ಸಚಿವ ಬೋಸರಾಜ್ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕಾರ್ಯಾಲದಲ್ಲಿ ಗಣರಾಜ್ಯೋತ್ಸವ: 130ಕ್ಕೂ ಅಧಿಕ ವಾಹನ ಚಾಲಕಿಯರಿಗೆ… ರಾಜ್ಯದಲ್ಲಿದ್ದಾರೆ ಒಟ್ಟು 10,365 ಟ್ರಾನ್ಸ್ ಜೆಂಡರ್: ಸಮೀಕ್ಷೆಯಲ್ಲಿ ಲಿಂಗತ್ವ ಅಲ್ಪಸಂಖ್ಯಾತರ ಸ್ಥಿತಿಗತಿ ಬಗ್ಗೆ… ಹುಬ್ಬಳ್ಳಿ | ಕೊಳೆಗೇರಿ ನಿವಾಸಿಗಳ ಮುಖ್ಯವಾಹಿನಿಗೆ ತರಲು ಬೃಹತ್ ಪ್ರಮಾಣದಲ್ಲಿ ಮನೆ ವಿತರಣೆ:… ಪ್ರೀತಿಯಲ್ಲಿ ಒಂದಾದ ಭಾರತ- ಚೀನಾ!: ಚೈನಾದ ಬೆಡಗಿಯ ಕೈ ಹಿಡಿದ ಕಾಫಿನಾಡ ಯುವಕ ಗೋಣಿಕೊಪ್ಪ- ತಿತಿಮತಿ ಮುಖ್ಯ ರಸ್ತೆಯಲ್ಲಿ‌ ರಾತ್ರಿ ವ್ಯಾಘ್ರನ ದರ್ಶನ; ಭಯಭೀತರಾದ ಗ್ರಾಮಸ್ಥರು ಸದನದ ಪಾವಿತ್ರ್ಯತೆ ಹಾಳು ಮಾಡುವ ಕೆಲಸ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಟೀಕೆ ನರೇಗಾ ಉಳಿಸಲು ಕಾಂಗ್ರೆಸ್ ಉಪವಾಸ ಸತ್ಯಾಗ್ರಹ

ಇತ್ತೀಚಿನ ಸುದ್ದಿ

ನಾಟಕ ಸ್ಪರ್ಧೆ: ಮಂಗಳೂರು ವಿಭಾಗದ ಸರಕಾರಿ ನೌಕರರ ಸಂಘದ ‘ನಾಗಮಂಡಲ’ ರಾಜ್ಯಮಟ್ಟಕ್ಕೆ ಆಯ್ಕೆ

27/03/2024, 22:26

ಮಂಗಳೂರು(reporterkarnataka.com): ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ವತಿಯಿಂದ ನಡೆದ ನಾಟಕ ಸ್ಪರ್ಧೆಯಲ್ಲಿ ಗಿರೀಶ್ ಕಾರ್ನಾಡ ಅವರ ‘ನಾಗ ಮಂಡಲ’ (ಸ್ವತಂತ್ರ ರಂಗಾವಿಷ್ಕಾರ) ನಾಟಕ ಪ್ರಥಮ ಸ್ಥಾನದೊಂದಿಗೆ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದೆ.
ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಕ್ರೀಡಾ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳು ಮಾ. 19 ಮತ್ತು 20ರಂದು ಮಂಗಳೂರು ಮಿನಿ ವಿಧಾನಸೌಧದ ಬಳಿ ಇರುವ ಸರಕಾರಿ ನೌಕರರ ಸಂಘದ ಸಭಾಂಗಣದಲ್ಲಿ ನಡೆದಿತ್ತು.

ನಾಟಕ ಸ್ಪರ್ಧೆಯ ವಿಭಾಗದಲ್ಲಿ ‘ನಾಗ ಮಂಡಲ’ ನಾಟಕ ಪ್ರಥಮ ಸ್ಥಾನ ಪಡೆದಿದೆ.
ವಿನೂತನ ರಂಗ ಕಲ್ಪನೆಯೊಂದಿಗೆ ನಾಗಮಂಡಲ ನಾಟಕವನ್ನು ಮಂಗಳೂರು ವಿಭಾಗದ ಸರಕಾರಿ ನೌಕರರ ಸಂಘದ ಸದಸ್ಯರು ಮನೋಜ್ಞವಾಗಿ ಅಭಿನಯಿಸಿದ್ದರು. ಹಣ, ಮದ್ಯ, ಮಾದಕತೆ ಅಧಿಕಾರಗಳ ಹಿಂದೆ ಓಡುವ ಯುವ ಸಮಾಜ, ಶಿಥಿಲಗೊಳ್ಳುತ್ತಿರುವ ಕೌಟುಂಬಿಕ ಜೀವನದ ಕೈ ಕನ್ನಡಿಯಾಗಿ ನಾಗಮಂಡಲ ನಾಟಕವನ್ನು ಕಾಸರಗೋಡಿನ ಯುವ ರಂಗ ನಿರ್ದೇಶಕ ಸದಾಶಿವ ಬಾಲಮಿತ್ರ ಅವರು ವಿಭಿನ್ನವಾಗಿ ನಿರ್ದೇಶಿಸಿದ್ದು, ಹರೀಶ್ ಕುಮಾರ್ ತಲಪಾಡಿ ಅವರ ನೇತೃತ್ವದ ಅಭಿನಯ ತಂಡದಲ್ಲಿ ವಸಂತ ರೈ ಬಿ.ಕೆ., ಪ್ರತಿಮಾ ಹೆಬ್ಬಾರ್, ಜಯಲಕ್ಷ್ಮಿ ಜಿ.ಕುಂಪಲ ಕಲ್ಲರಕೋಡಿ, ಯಶೋದಾ ಪಿ., ಮಹಾಲಕ್ಷ್ಮಿ, ಇಂದಿರಾ ಜಿ. ಸುಜಾತ ಬೋಳಾರ, ರಾಮಕೃಷ್ಣ ಕಟ್ಟಿಮನಿ, ಯು.ಆರ್. ಶೆಟ್ಟಿ, ಮೊದಲಾದವರು ಮನೋಜ್ಞ ಅಭಿನಯ ನೀಡಿದ್ದರು. ಮೆಲ್ವಿನ್ ಪೆರ್ಮುದೆ ಸಂಗೀತ ಸಂಯೋಜನೆ ನೀಡಿದ್ದು, ಮೋಹನ್ ಸಿರಿರ್ಲಾಲ್, ಬಾಬು ಮಾಸ್ಟರ್, ಶಿವಪ್ರಸಾದ್ ಚೆರುಗೋಳಿ, ವಸಂತ ಮಾಸ್ಟರ್ ಮೂಡಂಬೈಲು, ದಿವಾಕರ ಬಲ್ಲಾಲ್, ಎಸ್.ಪಿ. ರಾವ್, ಅಶೋಕ್ ಕುಮಾರ್, ಬಾಲಕೃಷ್ಣ ಗಾಳಿಯಡ್ಕ ಮೊದಲಾದವರು ರಂಗಪರಿಕರಗಳಲ್ಲಿ ಸಹಕರಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು