4:01 PM Wednesday16 - September 2026
ಬ್ರೇಕಿಂಗ್ ನ್ಯೂಸ್
‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ

ಇತ್ತೀಚಿನ ಸುದ್ದಿ

ಚಳ್ಳಕೆರೆ ತಾಲೂಕು ಕುಡಿಯುವ ನೀರಿನ ಸಮಸ್ಯೆ: 40 ಗ್ರಾಪಂ ಪಿಡಿಒಗಳ ತುರ್ತು ಸಭೆ; 21 ರೀಬೋರ್ ಮಾಡಿಸಲು ಸೂಚನೆ

27/03/2024, 22:37

ಮುರುಡೇಗೌಡ ಚಳ್ಳಕೆರೆ ಚಿತ್ರದುರ್ಗ

info.reporterkarnataka@gmail.com

ಕುಡಿಯುವ ನೀರು ನಿರ್ವಹಣೆ ಕುರಿತಾದ ತುರ್ತು ಸಭೆ ಚಳ್ಳಕೆರೆ ತಾಲ್ಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಅಧ್ಯಕ್ಷತೆಯಲ್ಲಿ ತಾಪಂ ಸಭಾಂಗಣದಲ್ಲಿ ನಡೆಯಿತು.

ಬೆಸ್ಕಾಂ ಸಹಾಯಕ ಕಾರ್ಯಪಾಲಕ ಅಭಿಯಂತರರು, ಗ್ರಾಮೀಣ ಕುಡಿಯುವ ನೀರು-ನೈರ್ಮಲ್ಯ ಇಲಾಖೆ ಹಾಗೂ ಸಹಾಯಕ ಕಾರ್ಯಪಾಲಕ ಅಭಿಯಂತರರು ಹಾಗೂ ತಾಲ್ಲೂಕಿನ 40 ಗ್ರಾಪಂಗಳ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಭಾಗವಹಿಸಿದ್ದರು. ಒಟ್ಟು 7 ಗ್ರಾಮಗಳಲ್ಲಿ ಖಾಸಗಿ ಜಮೀನಿನಿಂದ ಕೊಳವೆ ಬಾವಿಗಳನ್ನು ಬಾಡಿಗೆಗೆ ಪಡೆದು ನೀರನ್ನು ಪೂರೈಸಲಾಗುತ್ತಿದೆ. ವಿವಿಧ ಗ್ರಾಮಗಳಲ್ಲಿ ಒಟ್ಟು 6500 ಮೀಟರ್ ಹೊಸ ಪೈಪ್ ಲೈನ್ ನಿರ್ಮಿಸುವ ಅಗತ್ಯವಿದೆಯೆಂದು ಪಂ.ಅ.ಅಧಿಕಾರಿಗಳು ಮಾಹಿತಿ ನೀಡಿದರು.
ಒಟ್ಟು 21 ರೀಬೋರ್ ಮಾಡಿಸುವ ಅಗತ್ಯವಿದೆಯೆಂದು ಪಂ.ಅ.ಅಧಿಕಾರಿಗಳು ಮಾಹಿತಿ ನೀಡಿದಾಗ, ಸದರಿ ಬೋರ್ ವೆಲ್ ಗಳನ್ನು ರೀ ಬೋರ್ ಮಾಡುವಂತೆ ಸಹಾಯಕ ಕಾರ್ಯಪಾಲಕ ಅಭಿಯಂತರರು, ಗ್ರಾಮೀಣ ಕುಡಿಯುವ ನೀರು-ನೈರ್ಮಲ್ಯ ಇಲಾಖೆರವರಿಗೆ ಸೂಚಿಸಲಾಯಿತು.
ಕೂಲಿಕಾರರು ಕೆಲಸಕ್ಕಾಗಿ ಬೇಡಿಕೆ ಸಲ್ಲಿಸಿದಲ್ಲಿ ತಕ್ಷಣ ಕೆಲಸ ನೀಡಬೇಕೆಂದು ಪಂ.ಅ.ಅಧಿಕಾರಿಗಳಿಗೆ ಸೂಚಿಸಲಾಯಿತು.

ಇತ್ತೀಚಿನ ಸುದ್ದಿ

ಜಾಹೀರಾತು