9:57 PM Sunday8 - February 2026
ಬ್ರೇಕಿಂಗ್ ನ್ಯೂಸ್
ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ… ರಾಜ್ಯ ಸರ್ಕಾರ ಎಲ್ಲ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಮಾಜಿ… NDPS ಕಾಯ್ದೆ: ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದ 5.71 ಕೋಟಿ ಮೌಲ್ಯದ ಮಾದಕ ವಸ್ತುಗಳು… Mangaluru | ಮೆಟ್ರೋ ದರ ಏರಿಕೆ ಬಗ್ಗೆ ಕೇಂದ್ರ ನಮ್ಮ ಅಭಿಪ್ರಾಯ ಕೇಳಿಲ್ಲ:… ಕಾಂಗ್ರೆಸ್‌ನ ಲೂಟಿ ನೋಡಿ ಗಾಂಧೀಜಿಯ ಕೈಗೆ ಕೋಲು ಬಂದಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ರಾಜ್ಯ ಆಹಾರ ಆಯೋಗದ ಅಧ್ಯಕ್ಷರ ತಂಡದಿಂದ ವಿವಿಧೆಡೆ ದಿಢೀರ್ ಭೇಟಿ: ಪರಿಶೀಲನೆ *ಕರಾವಳಿವರೆಗೆ ವಂದೇ ಭಾರತ್ ವಿಸ್ತರಿಸುವಂತೆ ರೈಲ್ವೆ ಸಚಿವರಿಗೆ ಸಂಸದ ಶ್ರೀನಿವಾಸ ಪೂಜಾರಿ ಮನವಿ*

ಇತ್ತೀಚಿನ ಸುದ್ದಿ

ಸ್ನೇಹಿತರ ಜತೆ ಈಜಲು ತೆರಳಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿ ನೀರುಪಾಲು: ರಜೆ ಸವಿಯುವ ವೇಳೆ ದುರಂತ

28/03/2024, 14:16

*ನೀರಾವರಿ ಇಲಾಖೆ ಅಧಿಕಾರಿಗಳೇ ಕೆರೆ, ಕಟ್ಟೆ, ನದಿ ಪಾತ್ರಗಳಲ್ಲಿ ಅಪಾಯದ ಸ್ಥಳಗಳನ್ನು ಗುರುತಿಸಿ ನಾಮಫಲಕ ಅಳವಡಿಸಿ ಯುವಕರ ಜೀವ ರಕ್ಷಿಸಿ*

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com
ರಜೆ ಕಳೆಯಲು ಸ್ನೇಹಿತರ ಜೊತೆ ಬಂದು ಈಜಲು ತೆರಳಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿ ನೀರುಪಾಲಾದ ಘಟನೆ ನಂಜನಗೂಡು ತಾಲೂಕಿನ ಹುಲ್ಲಹಳ್ಳಿ ಬಳಿ ಇರುವ ಹುಲ್ಲಹಳ್ಳಿ ಅಣೆಕಟ್ಟೆಯಲ್ಲಿ ನಡೆದಿದೆ.
ನಂಜನಗೂಡಿನ ಎಂಐಟಿ ಕಾಲೇಜು ವಿಧ್ಯಾರ್ಥಿ ಅಭಿಷೇಕ್(23) ಮೃತ ದುರ್ದೈವಿ. ಕಾಲೇಜು ರಜೆ ಇದ್ದ ಕಾರಣ ಅಭಿಷೇಕ್ ತನ್ನ ಸ್ನೇಹಿತರಾದ ಸಮರ್ಥ್ ಹಾಗೂ ಪ್ರೀತಂ ಜೊತೆ ಹುಲ್ಲಹಳ್ಳಿಯ ಸಮೀಪವಿರುವ ಅಣೆ ಕಟ್ಟೆಯಲ್ಲಿ ಈಜಲು ತೆರಳಿದ್ದಾನೆ.
ಸ್ನೇಹಿತರ ಜೊತೆಗೆ ನೀರಿಗೆ ಧುಮುಕಿ ಈಜುತ್ತಾ ಮುಂದೆ ಸಾಗಿದ ಅಭಿಷೇಕ್ ಹಿಂದಕ್ಕೆ ಬರಲು ಸಾಧ್ಯವಾಗದೆ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾನೆ. ಹುಲ್ಲಹಳ್ಳಿ ಪೊಲೀಸರ ನೆರವಿನಿಂದ ಅಭಿಷೇಕ್ ಮೃತದೇಹ ಹೊರತೆಗೆಯಲಾಗಿದೆ.ಈ ಸಂಬಂಧ ಹುಲ್ಲಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


15 ದಿನಗಳ ಹಿಂದೆ ಇದೇ ಸ್ಥಳದಲ್ಲಿ ಮೈಸೂರಿನ ಯುವಕ ಸ್ನೇಹಿತರ ಜೊತೆ ಈಜಲು ತೆರಳಿ ನೀರುಪಾಲಾಗಿದ್ದ. ನಂತರ ಎರಡು ದಿನಗಳ ಹಿಂದೆ ನಂಜನಗೂಡಿನ ಗೊದ್ದನಪುರ ಗ್ರಾಮದ ಕಪಿಲಾ ನದಿಯಲ್ಲಿ ಈಜಲು ಮೂವರು ಹೊರ ರಾಜ್ಯದ ಕಾರ್ಮಿಕರು ಮುಳುಗಿ ಸಾವನ್ನಪ್ಪಿದ್ದರು.ಈ ಘಟನೆ ಮಾಸುವ ಮುನ್ನವೇ ಈ ಸ್ಥಳದಲ್ಲಿ ಮತ್ತೊಂದು ದುರಂತ ನಡೆದಿದೆ.
ನೀರಾವರಿ ಇಲಾಖೆ ಅಧಿಕಾರಿಗಳು ಎಚ್ಚೆತ್ತುಕೊಂಡು ನದಿ ಪಾತ್ರದಲ್ಲಿ ಹಾಗೂ ಕೆರೆಕಟ್ಟೆಗಳ ಬಳಿ ಮುನ್ನೆಚ್ಚರಿಕೆ ಫಲಕಗಳನ್ನ ಅಳವಡಿಸಿ ಯುವಕರ ಜೀವ ಬದುಕಿಸಲು ಮುಂದಾಗ ಬೇಕಿದೆ.
ಘಟನಾ ಸ್ಥಳಕ್ಕೆ ಹುಲ್ಲಹಳ್ಳಿ ಪೊಲೀಸ್ ಠಾಣೆಯ ಪಿಎಸ್ಐ ಚೇತನ್ ಕುಮಾರ್, ದೊಡ್ಡಯ್ಯ, ರಸುಲ್ ಸಾಗವಾಲೆ, ಮೂರ್ತಿ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ

ಇತ್ತೀಚಿನ ಸುದ್ದಿ

ಜಾಹೀರಾತು