3:22 PM Thursday9 - May 2024
ಬ್ರೇಕಿಂಗ್ ನ್ಯೂಸ್
ಏರ್ ಇಂಡಿಯಾ ಎಕ್ಸ್‌ಪ್ರೆಸ್ ನೌಕರರ ಮಿಂಚಿನ ಮುಷ್ಕರ: ದೇಶದಲ್ಲಿ ಹಲವು ವಿಮಾನಗಳ ಹಾರಾಟ… ಲೈಂಗಿಕ ದೌರ್ಜನ್ಯ, ಮಹಿಳೆಯ ಅಪಹರಣ ಪ್ರಕರಣ: ಮಾಜಿ ಸಚಿವ ಎಚ್.ಡಿ. ರೇವಣ್ಣಗೆ ಮೇ… ಹಾಸನ: ಮಹಿಳೆಯರ ಮೇಲೆ ನಡೆದಿರುವ ಲೈಂಗಿಕ ದೌರ್ಜನ್ಯ ಸಂತ್ರಸ್ತರು ಹಾಗೂ ಮಾಹಿತಿದಾರರಿಗೆ ಸಹಾಯವಾಣಿ… ರಾಜ್ಯದ 2ನೇ ಹಂತದ ಚುನಾವಣೆಯ ಬಹಿರಂಗ ಪ್ರಚಾರ ಅಂತ್ಯ; ಇಬ್ಬರು ಮಾಜಿ ಸಿಎಂ,… ಮಾಜಿ ಪ್ರಧಾನಿ ದೇವೇಗೌಡರಿಗೆ ನೀಡಿದ್ದ, ಸಂಸದ ಪ್ರಜ್ವಲ್ ರೇವಣ್ಣ ಬಳಸುತ್ತಿದ್ದ ಹಾಸನದ ಸರಕಾರಿ… ಎಸ್ಐಟಿ ತಂಡಕ್ಕೆ ಸ್ವತಃ ತಾನೇ ಗೇಟ್ ತೆರೆದ ಎಚ್.ಡಿ. ರೇವಣ್ಣ!: ಪುತ್ರನ ಬಂಧನದ… ಸೂರ್ಯಾಘಾತ: ವಿಟ್ಲ ಸಮೀಪ ಬಸ್ಸಿನ ಗ್ಲಾಸ್ ಒಡೆದು ಬಾಲಕ ಸಹಿತ 3 ಮಂದಿಗೆ… ಸುಬ್ರಹ್ಮಣ್ಯ: ನವ ವಿವಾಹಿತ ಸಿಡಿಲು ಬಡಿದು ದಾರುಣ ಸಾವು; 15 ದಿನಗಳ ಹಿಂದೆಯಷ್ಟೇ… ತುಂಬೆ ವೆಂಟೆಡ್ ಡ್ಯಾಮ್ ನಲ್ಲಿ ನೀರಿನ ಒಳಹರಿವು ಸ್ಥಗಿತ: ಮೇ 5ರಿಂದ ಪಾಲಿಕೆ… ಮುಳ್ಳೇರಿಯ: ಇತ್ತ ಮಗಳ ಮದುವೆಯ ಮದರಂಗಿ ಶಾಸ್ತ್ರ ನಡೆಯುತ್ತಿದ್ದಂತೆ ಅತ್ತ ಅಪ್ಪ ಆತ್ಮಹತ್ಯೆ

ಇತ್ತೀಚಿನ ಸುದ್ದಿ

ಸ್ನೇಹಿತರ ಜತೆ ಈಜಲು ತೆರಳಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿ ನೀರುಪಾಲು: ರಜೆ ಸವಿಯುವ ವೇಳೆ ದುರಂತ

28/03/2024, 14:16

*ನೀರಾವರಿ ಇಲಾಖೆ ಅಧಿಕಾರಿಗಳೇ ಕೆರೆ, ಕಟ್ಟೆ, ನದಿ ಪಾತ್ರಗಳಲ್ಲಿ ಅಪಾಯದ ಸ್ಥಳಗಳನ್ನು ಗುರುತಿಸಿ ನಾಮಫಲಕ ಅಳವಡಿಸಿ ಯುವಕರ ಜೀವ ರಕ್ಷಿಸಿ*

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com
ರಜೆ ಕಳೆಯಲು ಸ್ನೇಹಿತರ ಜೊತೆ ಬಂದು ಈಜಲು ತೆರಳಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿ ನೀರುಪಾಲಾದ ಘಟನೆ ನಂಜನಗೂಡು ತಾಲೂಕಿನ ಹುಲ್ಲಹಳ್ಳಿ ಬಳಿ ಇರುವ ಹುಲ್ಲಹಳ್ಳಿ ಅಣೆಕಟ್ಟೆಯಲ್ಲಿ ನಡೆದಿದೆ.
ನಂಜನಗೂಡಿನ ಎಂಐಟಿ ಕಾಲೇಜು ವಿಧ್ಯಾರ್ಥಿ ಅಭಿಷೇಕ್(23) ಮೃತ ದುರ್ದೈವಿ. ಕಾಲೇಜು ರಜೆ ಇದ್ದ ಕಾರಣ ಅಭಿಷೇಕ್ ತನ್ನ ಸ್ನೇಹಿತರಾದ ಸಮರ್ಥ್ ಹಾಗೂ ಪ್ರೀತಂ ಜೊತೆ ಹುಲ್ಲಹಳ್ಳಿಯ ಸಮೀಪವಿರುವ ಅಣೆ ಕಟ್ಟೆಯಲ್ಲಿ ಈಜಲು ತೆರಳಿದ್ದಾನೆ.
ಸ್ನೇಹಿತರ ಜೊತೆಗೆ ನೀರಿಗೆ ಧುಮುಕಿ ಈಜುತ್ತಾ ಮುಂದೆ ಸಾಗಿದ ಅಭಿಷೇಕ್ ಹಿಂದಕ್ಕೆ ಬರಲು ಸಾಧ್ಯವಾಗದೆ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾನೆ. ಹುಲ್ಲಹಳ್ಳಿ ಪೊಲೀಸರ ನೆರವಿನಿಂದ ಅಭಿಷೇಕ್ ಮೃತದೇಹ ಹೊರತೆಗೆಯಲಾಗಿದೆ.ಈ ಸಂಬಂಧ ಹುಲ್ಲಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


15 ದಿನಗಳ ಹಿಂದೆ ಇದೇ ಸ್ಥಳದಲ್ಲಿ ಮೈಸೂರಿನ ಯುವಕ ಸ್ನೇಹಿತರ ಜೊತೆ ಈಜಲು ತೆರಳಿ ನೀರುಪಾಲಾಗಿದ್ದ. ನಂತರ ಎರಡು ದಿನಗಳ ಹಿಂದೆ ನಂಜನಗೂಡಿನ ಗೊದ್ದನಪುರ ಗ್ರಾಮದ ಕಪಿಲಾ ನದಿಯಲ್ಲಿ ಈಜಲು ಮೂವರು ಹೊರ ರಾಜ್ಯದ ಕಾರ್ಮಿಕರು ಮುಳುಗಿ ಸಾವನ್ನಪ್ಪಿದ್ದರು.ಈ ಘಟನೆ ಮಾಸುವ ಮುನ್ನವೇ ಈ ಸ್ಥಳದಲ್ಲಿ ಮತ್ತೊಂದು ದುರಂತ ನಡೆದಿದೆ.
ನೀರಾವರಿ ಇಲಾಖೆ ಅಧಿಕಾರಿಗಳು ಎಚ್ಚೆತ್ತುಕೊಂಡು ನದಿ ಪಾತ್ರದಲ್ಲಿ ಹಾಗೂ ಕೆರೆಕಟ್ಟೆಗಳ ಬಳಿ ಮುನ್ನೆಚ್ಚರಿಕೆ ಫಲಕಗಳನ್ನ ಅಳವಡಿಸಿ ಯುವಕರ ಜೀವ ಬದುಕಿಸಲು ಮುಂದಾಗ ಬೇಕಿದೆ.
ಘಟನಾ ಸ್ಥಳಕ್ಕೆ ಹುಲ್ಲಹಳ್ಳಿ ಪೊಲೀಸ್ ಠಾಣೆಯ ಪಿಎಸ್ಐ ಚೇತನ್ ಕುಮಾರ್, ದೊಡ್ಡಯ್ಯ, ರಸುಲ್ ಸಾಗವಾಲೆ, ಮೂರ್ತಿ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ

ಇತ್ತೀಚಿನ ಸುದ್ದಿ

ಜಾಹೀರಾತು