3:15 PM Friday6 - February 2026
ಬ್ರೇಕಿಂಗ್ ನ್ಯೂಸ್
ರಾಜ್ಯ ಆಹಾರ ಆಯೋಗದ ಅಧ್ಯಕ್ಷರ ತಂಡದಿಂದ ವಿವಿಧೆಡೆ ದಿಢೀರ್ ಭೇಟಿ: ಪರಿಶೀಲನೆ *ಕರಾವಳಿವರೆಗೆ ವಂದೇ ಭಾರತ್ ವಿಸ್ತರಿಸುವಂತೆ ರೈಲ್ವೆ ಸಚಿವರಿಗೆ ಸಂಸದ ಶ್ರೀನಿವಾಸ ಪೂಜಾರಿ ಮನವಿ* ಅನೈತಿಕ ಸಂಬಂಧ ಕೊಲೆಗೆ ಕಾರಣ?: ಖ್ಯಾತ ಜ್ಯೋತಿಷಿ ಕಮಲಾಕರ್ ಭಟ್ ಸೇರಿ 7… ಎಸಿ ಕೋರ್ಟ್ ಕೇಸ್: ಎರಡೂವರೆ ವರ್ಷದಲ್ಲಿ ಅಸಾಧ್ಯವಾದದ್ದನ್ನು ಸಾಧ್ಯವಾಗಿಸಿದ್ದೇವೆ: ಸಚಿವ ಕೃಷ್ಣ ಬೈರೇಗೌಡರು… ತೀರ್ಥಹಳ್ಳಿ ಸಮೀಪದ ಮೇಗರವಳ್ಳಿಯಲ್ಲಿ ಭೀಕರ ಅಪಘಾತ: ಗಾಯಾಳು ಮಹಿಳೆ ಸಾವು Madikeri | ಕುಶಾಲನಗರ ಬಳಿ ಬೈಕ್ ಡಿಕ್ಕಿ: ಪಾದಚಾರಿ ಯುವಕ ದಾರುಣ ಸಾವು ಪೊಲೀಸರಿಗೆ ತಲೆನೋವಾದ ಕೇರಳದ ‘ಮಲ್ಲು’ ಗ್ಯಾಂಗ್: ಚಿನ್ನದ ಉದ್ಯಮಿಗಳೇ ಇವರ ಟಾರ್ಗೆಟ್ ಉದ್ಯಮಿ ಸಿ.ಜೆ. ರಾಯ್ ಆತ್ಮಹತ್ಯೆ ಪ್ರಕರಣ: ಕೇಂದ್ರ ವಿತ್ತ ಸಚಿವೆಗೆ ಕೇರಳ ಸಿಎಂ… ವರನಿಗೆ ಚಾಕು ಇರಿದ ಕೇಸ್‌ಗೆ ಬಿಗ್ ಟ್ವಿಸ್ಟ್ : ಸ್ಕೆಚ್ ಹಾಕಿದ್ದು ಅವರಲ್ಲ,… ಕಂಬನಿ ನಡುವೆ ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿ.ಜೆ ರಾಯ್‌ ಅಂತಿಮವಿಧಿ: ಬನ್ನೇರುಘಟ್ಟದ ಕಾಸಾಗ್ರೌಂಡ್…

ಇತ್ತೀಚಿನ ಸುದ್ದಿ

ಬಟ್ಟೆ, ರೆಡಿಮೇಡ್, ಚಪ್ಪಲಿಯನ್ನು ಅಗತ್ಯ ವಸ್ತುಗಳ ಸಾಲಿಗೆ ಸೇರಿಸಿ: ರಾಜ್ಯ ಸರಕಾರಕ್ಕೆ ವ್ಯಾಪಾರಿಗಳ ಮನವಿ

13/08/2021, 17:52

ಮಂಗಳೂರು(reporterkarnataka.com):ಇತರ ಅಗತ್ಯ ವಸ್ತುಗಳಂತೆ ಬಟ್ಟೆ , ರೆಡಿಮೇಡ್ ಚಪ್ಪಲಿಗಳನ್ನು ಪರಿಗಣಿಸಬೇಕೆಂದು ರಾಜ್ಯ ಸರಕಾರಕ್ಕೆ ಮನವಿ ಮಾಡಲಾಗಿದೆ ಎಂದು ವ್ಯಾಪಾರಿಗಳ ಸಂಘಟನೆಯ ನಿರ್ದೇಶಕಿ ಸುಲೋಚನಾ ಭಟ್ ಹೇಳಿದರು.

ನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಲಾಕ್ ಡೌನ್  ಅವಧಿಯಲ್ಲಿ ಬಟ್ಟೆ, ರೆಡಿಮೇಡ್ , ಚಪ್ಪಲಿ ಅಂಗಡಿದಾರರು ಕೋವಿದ್ ನಿಯಮ ಪ್ರಕಾರ ವ್ಯಾಪಾರ ಮಾಡಲು ಸರಕಾರ ಅವಕಾಶ ನೀಡದೆ ವ್ಯಾಪಾರಸ್ಥರು ಮಾತ್ರವಲ್ಲದೆ ಅವರ ಅಧೀನದಲ್ಲಿ ಕೆಲಸ ನಿರ್ವಹಿಸುವ ಸಾವಿರಾರು ಕುಟುಂಬಗಳು ನಿರ್ಗತಿಕರಾಗಿದ್ದಾರೆ ಎಂದರು.

ಸಂಘದ ಅಧ್ಯಕ್ಷ ಸಂತೋಷ್ ಕಾಮತ್ ಮಾತನಾಡಿ, ಸರಕಾರವು ನಮ್ಮ ಬೇಡಿಕೆಗಳನ್ನು ಈಡೇರಿಸಬೇಕು ಅಥವಾ ಪರ್ಯಾಯ ದಿನಗಳಲ್ಲಿ ವ್ಯಾಪಾರಕ್ಕೆ ಅವಕಾಶ ಒದಗಿಸಬೇಕು. ಇಲ್ಲವೇ ಮೆಡಿಕಲ್, ಹಾಲು, ಆಸ್ಪತ್ರೆ, ಪತ್ರಿಕೆ ಇವುಗಳಿಗೆ ಮಾತ್ರ ಅನುಮತಿಸಿ, ಉಳಿದ ಎಲ್ಲಾ ವ್ಯಾಪಾರ ಗಳನ್ನು ಮಾಡದಂತೆ ಸಂಪೂರ್ಣ ಎರಡು ವಾರಗಳ ಕಾಲ ಲಾಕ್ ಡೌನ್ ಹೇರಿ ಕೊವಿಡ್  ಸಂಪೂರ್ಣ ನಿಯಂತ್ರಣಕ್ಕೆ ಬರುವಂತೆ ಸರ್ಕಾರ ಪ್ರಯತ್ನಿಸಬೇಕು ಎಂದು ಒತ್ತಾಯಿಸಿದರು.


ಸಂತೋಷ್  ಕಾಮತ್, ಎಂ. ಪಿ. ದಿನೇಶ್, ಪ್ರಸಾದ್  ನೈರ್,  ಸಂತೋಷ್ ಶೆಟ್ಟಿ, ಜನಾಬ್ ಸಯೀದ್,  ಇಸ್ಮಾಯಿಲ್, ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು