2:14 PM Saturday19 - July 2025
ಬ್ರೇಕಿಂಗ್ ನ್ಯೂಸ್
ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳಾಗಿ ಜಸ್ಟಿಸ್ ವಿಭು ಬಖ್ರು ಅಧಿಕಾರ ಸ್ವೀಕಾರ: ರಾಜ್ಯಪಾಲ… Kodagu |ಪೊನ್ನಂಪೇಟೆ: ವ್ಯಾಘ್ರನ ಸೆರೆಗೆ 75 ಮಂದಿ ಅರಣ್ಯ ಸಿಬ್ಬಂದಿಗಳ ಕೂಂಬಿಂಗ್ ಕಾರ್ಯಾಚರಣೆ… ಮಂಗಳೂರು – ಬೆಂಗಳೂರು 4 ತಾಸಿನ ಆಂಬುಲೆನ್ಸ್ ಪ್ರಯಾಣ!: ಹೃದಯ ಕಾಯಿಲೆಯ 14… ವಿದ್ಯುತ್ ಶಾಕ್: ಲೈನ್ ಮ್ಯಾನ್ ದಾರುಣ ಸಾವು; ಒಂದೂವರೆ ತಿಂಗಳ ಹಿಂದೆಯಷ್ಟೇ ವಿವಾಹವಾಗಿದ್ದ… ರಾಹುಲ್ ಗಾಂಧಿಯ ಗೊತ್ತಿಲ್ಲದ ಸಾಧನೆಗೆ ಗೊತ್ತಿಲ್ಲದ ಪ್ರಶಸ್ತಿ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ… ಬಿರುಸುಗೊಂಡ ಕಾಡಾನೆಗಳ ಅರಣ್ಯಕ್ಕೆ ಅಟ್ಟುವ ಕಾರ್ಯ: ನಾಡಿನಿಂದ ಕಾಡಿನತ್ತ ಆನೆಗಳ ಮತ್ತೊಂದು ಹಿಂಡು ಭಾರೀ ಮಳೆ: ಕೊಡಗು ಜಿಲ್ಲೆಯಾದ್ಯಂತ ರೆಡ್ ಅಲರ್ಟ್ ಘೋಷಣೆ: ಶಾಲೆ- ಕಾಲೇಜುಗಳಿಗೆ ನಾಳೆಯೂ… ಎಐಸಿಸಿ ಅಖಿಲ ಭಾರತ ಹಿಂದುಳಿದ ವರ್ಗಗಳ ಸಲಹಾ ಸಮಿತಿಯ ಮೊದಲ ಸಭೆ ಅತ್ಯಂತ… ಭಾರೀ ಮಳೆ: ಕೊಡಗು ಜಿಲ್ಲೆಯ ಎಲ್ಲ ಅಂಗನವಾಡಿ, ಶಾಲೆ ಹಾಗೂ ಪಿಯು ಕಾಲೇಜಿಗೆ… ಕರ್ಣಾಟಕ ಬ್ಯಾಂಕ್ ವಿಲೀನಗೊಳಿಸುವ ಯಾವುದೇ ಪ್ರಸ್ತಾಪ ಇಲ್ಲ: ಬ್ಯಾಂಕಿನ ನೂತನ ವ್ಯವಸ್ಥಾಪಕ ನಿರ್ದೇಶಕ,…

ಇತ್ತೀಚಿನ ಸುದ್ದಿ

ಬಟ್ಟೆ, ರೆಡಿಮೇಡ್, ಚಪ್ಪಲಿಯನ್ನು ಅಗತ್ಯ ವಸ್ತುಗಳ ಸಾಲಿಗೆ ಸೇರಿಸಿ: ರಾಜ್ಯ ಸರಕಾರಕ್ಕೆ ವ್ಯಾಪಾರಿಗಳ ಮನವಿ

13/08/2021, 17:52

ಮಂಗಳೂರು(reporterkarnataka.com):ಇತರ ಅಗತ್ಯ ವಸ್ತುಗಳಂತೆ ಬಟ್ಟೆ , ರೆಡಿಮೇಡ್ ಚಪ್ಪಲಿಗಳನ್ನು ಪರಿಗಣಿಸಬೇಕೆಂದು ರಾಜ್ಯ ಸರಕಾರಕ್ಕೆ ಮನವಿ ಮಾಡಲಾಗಿದೆ ಎಂದು ವ್ಯಾಪಾರಿಗಳ ಸಂಘಟನೆಯ ನಿರ್ದೇಶಕಿ ಸುಲೋಚನಾ ಭಟ್ ಹೇಳಿದರು.

ನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಲಾಕ್ ಡೌನ್  ಅವಧಿಯಲ್ಲಿ ಬಟ್ಟೆ, ರೆಡಿಮೇಡ್ , ಚಪ್ಪಲಿ ಅಂಗಡಿದಾರರು ಕೋವಿದ್ ನಿಯಮ ಪ್ರಕಾರ ವ್ಯಾಪಾರ ಮಾಡಲು ಸರಕಾರ ಅವಕಾಶ ನೀಡದೆ ವ್ಯಾಪಾರಸ್ಥರು ಮಾತ್ರವಲ್ಲದೆ ಅವರ ಅಧೀನದಲ್ಲಿ ಕೆಲಸ ನಿರ್ವಹಿಸುವ ಸಾವಿರಾರು ಕುಟುಂಬಗಳು ನಿರ್ಗತಿಕರಾಗಿದ್ದಾರೆ ಎಂದರು.

ಸಂಘದ ಅಧ್ಯಕ್ಷ ಸಂತೋಷ್ ಕಾಮತ್ ಮಾತನಾಡಿ, ಸರಕಾರವು ನಮ್ಮ ಬೇಡಿಕೆಗಳನ್ನು ಈಡೇರಿಸಬೇಕು ಅಥವಾ ಪರ್ಯಾಯ ದಿನಗಳಲ್ಲಿ ವ್ಯಾಪಾರಕ್ಕೆ ಅವಕಾಶ ಒದಗಿಸಬೇಕು. ಇಲ್ಲವೇ ಮೆಡಿಕಲ್, ಹಾಲು, ಆಸ್ಪತ್ರೆ, ಪತ್ರಿಕೆ ಇವುಗಳಿಗೆ ಮಾತ್ರ ಅನುಮತಿಸಿ, ಉಳಿದ ಎಲ್ಲಾ ವ್ಯಾಪಾರ ಗಳನ್ನು ಮಾಡದಂತೆ ಸಂಪೂರ್ಣ ಎರಡು ವಾರಗಳ ಕಾಲ ಲಾಕ್ ಡೌನ್ ಹೇರಿ ಕೊವಿಡ್  ಸಂಪೂರ್ಣ ನಿಯಂತ್ರಣಕ್ಕೆ ಬರುವಂತೆ ಸರ್ಕಾರ ಪ್ರಯತ್ನಿಸಬೇಕು ಎಂದು ಒತ್ತಾಯಿಸಿದರು.


ಸಂತೋಷ್  ಕಾಮತ್, ಎಂ. ಪಿ. ದಿನೇಶ್, ಪ್ರಸಾದ್  ನೈರ್,  ಸಂತೋಷ್ ಶೆಟ್ಟಿ, ಜನಾಬ್ ಸಯೀದ್,  ಇಸ್ಮಾಯಿಲ್, ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು