2:29 PM Saturday28 - March 2026
ಬ್ರೇಕಿಂಗ್ ನ್ಯೂಸ್
ಕೇಂದ್ರ ಸರಕಾರವನ್ನು ಟೀಕೆ ಮಾಡುವುದರಲ್ಲೇ 3 ವರ್ಷಗಳ ಕಾಲಹರಣ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ… ಕೈ ನಾಯಕರ ಸಂಧಾನ ಯಶಸ್ವಿ: ದಾವಣಗೆರೆ ದಕ್ಷಿಣ ಬಂಡಾಯ ಅಭ್ಯರ್ಥಿ ಪೈಲ್ವಾನ್ ಸ್ಪರ್ಧೆಯಿಂದ… ಚಿಕ್ಕಮಗಳೂರು: ಬಿಸಿಲ ಧಗೆಗೆ ಹೊತ್ತಿ ಉರಿಯುತ್ತಿರುವ ಮೀಸಲು ಅರಣ್ಯ; ಅಪಾಯದಲ್ಲಿ ಜೀವ ಸಂಕುಲ 1ನೇ ತರಗತಿ ದಾಖಲಾತಿ ವಯೋಮಿತಿಯಲ್ಲಿ 60 ದಿನಗಳ ಸಡಿಲಿಕೆ: ಸಚಿವ ಮಧು ಬಂಗಾರಪ್ಪ… ತುಮಕೂರು | ಮಧ್ಯರಾತ್ರಿ ಕುಡುಕ ಪುಂಡರ ಅಟ್ಟಹಾಸ: 10ಕ್ಕೂ ಅಧಿಕ ವಾಹನಗಳ ಗ್ಲಾಸ್… ರಾಜ್ಯ ಸರ್ಕಾರಕ್ಕೆ ಪ್ರತಿಷ್ಠೆಯಾದ ಉಪ ಚುನಾವಣೆ: ಪೈಲ್ವಾನ್ ಮನವೊಲಿಸಲು ಜಮೀರ್‌ಗೆ ಮುಖ್ಯಮಂತ್ರಿ ಸೂಚನೆ ಮಾಜಿ ಶಾಸಕರ ಪುತ್ರನ ಕೊಲೆ ಪ್ರಕರಣ: ಮಹಿಳೆ ಸೇರಿ ಮೂವರು ಪೊಲೀಸ್ ವಶಕ್ಕೆ ಹೈಕಮಾಂಡ್ ಹೇಳಿದಾಗ ಡಿಕೆಶಿ ಸಿಎಂ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ ಕಾಂಗ್ರೆಸ್ ಮೋಸ ಮಾಡಿದೆ; ನಾಮಪತ್ರ ಹಿಂತೆಗೆಯುವ ಮಾತೇ ಇಲ್ಲ: ತೊಡೆ ತಟ್ಟಿದ ಪೈಲ್ವಾನ್‌ ದಾವಣಗೆರೆ ದಕ್ಷಿಣ: ಬಿಜೆಪಿ ಅಭ್ಯರ್ಥಿಯ ಪತ್ನಿಗೆ ಮುಸ್ಲಿಂ ಮಹಿಳೆಯರಿಂದ ಭವ್ಯ ಸ್ವಾಗತ, ಉಡಿ…

ಇತ್ತೀಚಿನ ಸುದ್ದಿ

ನಂಜನಗೂಡು: ಕಳಲೆ ಜಾತ್ರಾ ಮಹೋತ್ಸವದಲ್ಲಿ ನಡೆದ ಅದ್ದೂರಿ ತೇರಡಿ ಉತ್ಸವ

29/03/2024, 12:31

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ನಂಜನಗೂಡು ತಾಲೂಕಿನ ಕಳಲೆ ಗ್ರಾಮದ ಪುರಾಣ ಪ್ರಸಿದ್ಧ ಶ್ರೀ ಲಕ್ಷ್ಮಿಕಾಂತ ಸ್ವಾಮಿ ದೇವಾಲಯದಲ್ಲಿ ನಡೆದ ಜಾತ್ರಾ ಮಹೋತ್ಸವದ ಅಂಗವಾಗಿ ಗುರುವಾರ ರಾತ್ರಿ ಪುಷ್ಪಾಲಂಕಾರ ತೇರಡಿ ಹಾಗೂ ಶಾಂತ್ಯುತ್ಸವವು ಬಹಳ ವಿಜೃಂಭಣೆ ಹಾಗೂ ಶ್ರದ್ಧಾ ಭಕ್ತಿಯಿಂದ ನೆರವೇರಿತು.


ಬೆಳಗ್ಗೆ ರಥಾರೋಹಣ ನಡೆದ ಮೇಲೆ ರಾತ್ರಿ ವೇಳೆಗೆ ರಥದಲ್ಲಿ ಪ್ರತಿಷ್ಠಾಪಿಸಲಾಗಿದ್ದ ಶ್ರೀ ಆಂಡಾಳಮ್ಮ ಹಾಗೂ ಶ್ರೀ ಅರವಿಂದ ನಾಯಕಿ ಅಮ್ಮನವರ ಸಮೇತ ಶ್ರೀ ಲಕ್ಷ್ಮಿಕಾಂತ ಸ್ವಾಮಿ ಅವರ ಉತ್ಸವ ಮೂರ್ತಿಗಳನ್ನು ಹೊರ ತೆಗೆದು ಬಳಿಕ ಮೇಲುಕೋಟೆ ಶ್ರೀ ವೈರಮುಡಿ ಉತ್ಸವದ ಮಾದರಿಯಲ್ಲಿ ವಿಶೇಷವಾಗಿ ಹೂಗಳಿಂದ ಅಲಂಕರಿಸಲಾದ ಉತ್ಸವ ಮೂರ್ತಿಗಳನ್ನು ಶುಕ್ರವಾರದ ಬೆಳಗಿನ ಜಾವದವರೆಗೂ ಗ್ರಾಮದಲ್ಲಿ ಉತ್ಸವ ನಡೆಸಲಾಗುತ್ತದೆ. ವಿದ್ಯುತ್ ದೀಪಗಳಿಂದ ವಿಶೇಷವಾಗಿ ಮಂಟಪದ ರೀತಿಯಲ್ಲಿ ಅಲಂಕರಿಸಿದ ನಡು ಚಪ್ಪರದಲ್ಲಿ ಅಲಂಕೃತ ಉತ್ಸವ ಮೂರ್ತಿಗಳನ್ನು ಗ್ರಾಮಸ್ಥರು ಹೆಗಲ ಮೇಲೆ ಹೊತ್ತು ನಡೆಸುವ ಉತ್ಸವವನ್ನು ಭಕ್ತರು ಕಣ್ತುಂಬಿಕೊಂಡು ದೇವರಿಗೆ ಪೂಜೆ ಸಲ್ಲಿಸುವ ಮೂಲಕ ತಮ್ಮ ಭಕ್ತಿ ಭಾವ ಮೆರೆದರು.
ತೇರಡಿ ಉತ್ಸವದ ಅಂಗವಾಗಿ ಗ್ರಾಮದ ಎಲ್ಲ ದೇವಾಲಯಗಳು ಸೇರಿದಂತೆ ರಥ ಬೀದಿಗಳನ್ನು ಬಣ್ಣ ಬಣ್ಣದ ವಿದ್ಯುತ್ ದೀಪಗಳಿಂದ ಅಲಂಕರಿಸಲಾಗಿತ್ತು. ಅಹೋರಾತ್ರಿ ಮಂಗಳವಾದ್ಯ ಗೋಷ್ಠಿಗಳು ನಡೆದವು.
ತಿಂಡಿ ತಿನಿಸು, ಪೂಜಾ ಸಾಮಗ್ರಿಗಳು, ಸ್ಟೇಷನರಿ, ತಂಪು ಪಾನೀಯ ಸೇರಿದಂತೆ ವಿವಿಧ ಬಗೆಯ ಅಂಗಡಿ ಮುಂಗಟ್ಟುಗಳನ್ನು ತೆರೆದಿದ್ದು ವ್ಯಾಪಾರ ವಹಿವಾಟುಗಳು ಜೋರಾಗಿಯೇ ನಡೆದವು.
ಗ್ರಾಮವು ಸೇರಿದಂತೆ ಅಕ್ಕಪಕ್ಕದ ಗ್ರಾಮಗಳ ಸಾವಿರಾರು ಭಕ್ತರು ತೇರಡಿ ಉತ್ಸವದಲ್ಲಿ ಪಾಲ್ಗೊಂಡು ಸಂಭ್ರಮಿಸಿದರು.
ದೇವಾಲಯದ ಪಾರುಪತೆಗಾರ ಜಯರಾಮ್ ಹಾಗೂ ಗ್ರಾಮಸ್ಥರ ನೇತೃತ್ವದಲ್ಲಿ ತೇರಡಿ ಉತ್ಸವವು ಅದ್ದೂರಿಯಾಗಿ ನಡೆಯಿತು. ಆಗಮಿಕರಾದ ವಿನಯ್ ಭಟ್ ಮಾತನಾಡಿ ಉತ್ಸವದ ಬಗ್ಗೆ ವಿವರಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು