5:50 PM Friday27 - March 2026
ಬ್ರೇಕಿಂಗ್ ನ್ಯೂಸ್
1ನೇ ತರಗತಿ ದಾಖಲಾತಿ ವಯೋಮಿತಿಯಲ್ಲಿ 60 ದಿನಗಳ ಸಡಿಲಿಕೆ: ಸಚಿವ ಮಧು ಬಂಗಾರಪ್ಪ… ತುಮಕೂರು | ಮಧ್ಯರಾತ್ರಿ ಕುಡುಕ ಪುಂಡರ ಅಟ್ಟಹಾಸ: 10ಕ್ಕೂ ಅಧಿಕ ವಾಹನಗಳ ಗ್ಲಾಸ್… ರಾಜ್ಯ ಸರ್ಕಾರಕ್ಕೆ ಪ್ರತಿಷ್ಠೆಯಾದ ಉಪ ಚುನಾವಣೆ: ಪೈಲ್ವಾನ್ ಮನವೊಲಿಸಲು ಜಮೀರ್‌ಗೆ ಮುಖ್ಯಮಂತ್ರಿ ಸೂಚನೆ ಮಾಜಿ ಶಾಸಕರ ಪುತ್ರನ ಕೊಲೆ ಪ್ರಕರಣ: ಮಹಿಳೆ ಸೇರಿ ಮೂವರು ಪೊಲೀಸ್ ವಶಕ್ಕೆ ಹೈಕಮಾಂಡ್ ಹೇಳಿದಾಗ ಡಿಕೆಶಿ ಸಿಎಂ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ ಕಾಂಗ್ರೆಸ್ ಮೋಸ ಮಾಡಿದೆ; ನಾಮಪತ್ರ ಹಿಂತೆಗೆಯುವ ಮಾತೇ ಇಲ್ಲ: ತೊಡೆ ತಟ್ಟಿದ ಪೈಲ್ವಾನ್‌ ದಾವಣಗೆರೆ ದಕ್ಷಿಣ: ಬಿಜೆಪಿ ಅಭ್ಯರ್ಥಿಯ ಪತ್ನಿಗೆ ಮುಸ್ಲಿಂ ಮಹಿಳೆಯರಿಂದ ಭವ್ಯ ಸ್ವಾಗತ, ಉಡಿ… ಲ್ಯಾಂಬೊರ್ಗಿನಿ ಕಾರು ಗಿರಿಗಿಟ್ಲೆ ಹೊಡೆಸಿದ ಪ್ರಕರಣ: ಮುತ್ತಪ್ಪ ರೈ ಪುತ್ರ ರಿಕ್ಕಿ ರೈ,… ಮತ್ತೆ ಬಾಬಾ ಬುಡನ್ ಗಿರಿ ದತ್ತಪೀಠ ವಿವಾದ: ಪೂಜಾ-ವಿಧಿ ವಿಧಾನದ ವಿಚಾರದಲ್ಲಿ ಮುಸ್ಲಿಮರ… ದಾವಣಗೆರೆ ದಕ್ಷಿಣ ಬಿಜೆಪಿ ಅಭ್ಯರ್ಥಿ ನಾಮಪತ್ರ ಸಲ್ಲಿಕೆ: ಯಡಿಯೂರಪ್ಪ ನೇತೃತ್ವದಲ್ಲಿ ಬೃಹತ್‌ ರೋಡ್‌…

ಇತ್ತೀಚಿನ ಸುದ್ದಿ

ಬೆಳ್ತಂಗಡಿ: ತುಮಕೂರಿನಲ್ಲಿ ಕೊಲೆಗೀಡಾದ ಮೂವರ ಮೃತದೇಹ ಹುಟ್ಟೂರಿಗೆ: 7 ದಿನಗಳ ಬಳಿಕ ಅಂತ್ಯ ಸಂಸ್ಕಾರ

29/03/2024, 17:50

ಬೆಳ್ತಂಗಡಿ(reporterkarnataka.com): ತುಮಕೂರಿನಲ್ಲಿ ಇತ್ತೀಚೆಗೆ ಕಾರಿನೊಳಗೆ ಕೂಡಿ ಹಾಕಲ್ಪಟ್ಟು ಅಮಾನುಷವಾಗಿ ಹತ್ಯೆಗೀಡಾದ ಬೆಳ್ತಂಗಡಿಯ ಮೂವರ ಅಂತ್ಯಕ್ರಿಯೆ ಶುಕ್ರವಾರ ನೆರವೇರಿಸಲಾಯಿತು.
ಕೊಲೆಯಾದವರ ಪಾರ್ಥಿವ ಶರೀರ ಇಂದು ಬೆಳಗ್ಗೆ ಬೆಳ್ತಂಗಡಿಯ ಮನೆಗಳಿಗೆ ತಲುಪಿದ್ದು, ಕುಟುಂಬಸ್ಥರ ಹಾಗೂ ಬಂಧು- ಬಳಗದವರ ಆಕ್ರಂಧನದ ನಡುವೆ ಮಧ್ಯಾಹ್ನದ ವೇಳೆ ಅಂತಿಮ ಸಂಸ್ಕಾರ ನಡೆಸಲಾಯಿತು.
ಬೆಳ್ತಂಗಡಿಯ ನಡ ಗ್ರಾಮದ ಟಿ.ಬಿ. ಕ್ರಾಸ್ ನಿವಾಸಿ ಆಟೋ ಚಾಲಕ ಶಾಹುಲ್ ಹಮೀದ್, ಕುವೆಟ್ಟು ಗ್ರಾಮದ ಮದಡ್ಕ ನಿವಾಸಿ ಇಸಾಕ್ ಮತ್ತು ಶಿರ್ಲಾಲು ಗ್ರಾಮದ ಸಿದ್ದೀಕ್ ಯಾನೆ ಇಮ್ತಿಯಾಝ್ ಎಂಬವರನ್ನು ಕೊಲೆ ಮಾಡಲಾಗಿತ್ತು. ಕಾರು ಸಹಿತ ಸುಟ್ಟು ಹಾಕಿದ ಸ್ಥಿತಿಯಲ್ಲಿ ಅವರ ಮೃತದೇಹ ಮಾ.22ರಂದು ತುಮಕೂರಿನ ಕುಚ್ಚಂಗಿ ಕೆರೆಯ ಸಮೀಪ ಪತ್ತೆಯಾಗಿದ್ದವು. ಮೃತದೇಹಗಳು ಸಂಪೂರ್ಣ ಸುಟ್ಟು ಕರಕಲಾಗಿದ್ದರಿಂದ ಗುರುತು ಪತ್ತೆ ಸಾಧ್ಯವಾಗಿರಲಿಲ್ಲ. ಈ ಹಿನ್ನೆಲೆಯಲ್ಲಿ ಡಿಎನ್‌ಎ ಪರೀಕ್ಷೆಗೆ ಒಳಪಡಿಸಲಾಗಿತ್ತು. ಅದರ ವರದಿ ಬಂದಿರುವ ಕಾರಣ ಇದೀಗ ಮೂವರ ಮೃತದೇಹಗಳನ್ನು ಹಸ್ತಾಂತರಿಸಲಾಗಿದ್ದು, ಕೃತ್ಯ ಬೆಳಕಿಗೆ ಬಂದ 7 ದಿನಗಳ ಬಳಿಕ ಅಂತ್ಯ ಸಂಸ್ಕಾರ ನಡೆಸಲಾಯಿತು.
ಶಾಹುಲ್ ಹಮೀದ್ ಹಾಗೂ ಇಸಾಕ್ ಅವರ ಮೃತದೇಹಗಳನ್ನು ಹಳೆಪೇಟೆ ಮುಹಿಯುದ್ದೀನ್ ಜುಮಾ ಮಸೀದಿಗೆ ಹಾಗೂ ಸಿದ್ದೀಕ್ ಅವರ ಮೃತದೇಹವನ್ನು ಶಿರ್ಲಾಲು ಮಸೀದಿಗೆ ತಂದು ಅಲ್ಲಿ ಅಂತಿಮ ದರ್ಶನ ಹಾಗೂ ಧಾರ್ಮಿಕ ವಿಧಿವಿಧಾನಗಳನ್ನು ನೆರವೇರಿಸಲಾಯಿತು.

ಇತ್ತೀಚಿನ ಸುದ್ದಿ

ಜಾಹೀರಾತು