6:50 AM Monday6 - May 2024
ಬ್ರೇಕಿಂಗ್ ನ್ಯೂಸ್
ರಾಜ್ಯದ 2ನೇ ಹಂತದ ಚುನಾವಣೆಯ ಬಹಿರಂಗ ಪ್ರಚಾರ ಅಂತ್ಯ; ಇಬ್ಬರು ಮಾಜಿ ಸಿಎಂ,… ಮಾಜಿ ಪ್ರಧಾನಿ ದೇವೇಗೌಡರಿಗೆ ನೀಡಿದ್ದ, ಸಂಸದ ಪ್ರಜ್ವಲ್ ರೇವಣ್ಣ ಬಳಸುತ್ತಿದ್ದ ಹಾಸನದ ಸರಕಾರಿ… ಎಸ್ಐಟಿ ತಂಡಕ್ಕೆ ಸ್ವತಃ ತಾನೇ ಗೇಟ್ ತೆರೆದ ಎಚ್.ಡಿ. ರೇವಣ್ಣ!: ಪುತ್ರನ ಬಂಧನದ… ಸೂರ್ಯಾಘಾತ: ವಿಟ್ಲ ಸಮೀಪ ಬಸ್ಸಿನ ಗ್ಲಾಸ್ ಒಡೆದು ಬಾಲಕ ಸಹಿತ 3 ಮಂದಿಗೆ… ಸುಬ್ರಹ್ಮಣ್ಯ: ನವ ವಿವಾಹಿತ ಸಿಡಿಲು ಬಡಿದು ದಾರುಣ ಸಾವು; 15 ದಿನಗಳ ಹಿಂದೆಯಷ್ಟೇ… ತುಂಬೆ ವೆಂಟೆಡ್ ಡ್ಯಾಮ್ ನಲ್ಲಿ ನೀರಿನ ಒಳಹರಿವು ಸ್ಥಗಿತ: ಮೇ 5ರಿಂದ ಪಾಲಿಕೆ… ಮುಳ್ಳೇರಿಯ: ಇತ್ತ ಮಗಳ ಮದುವೆಯ ಮದರಂಗಿ ಶಾಸ್ತ್ರ ನಡೆಯುತ್ತಿದ್ದಂತೆ ಅತ್ತ ಅಪ್ಪ ಆತ್ಮಹತ್ಯೆ ಕೊರೊನಾ ಲಸಿಕೆ ಕೋವಿಶೀಲ್ಡ್‌ ಅಡ್ಡ ಪರಿಣಾಮಗಳು: ಅಧ್ಯಯನ ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ… ಸೆಕ್ಸ್ ವೀಡಿಯೊ ಪ್ರಕರಣ: ಜೆಡಿಎಸ್ ನಾಯಕ ರೇವಣ್ಣಗೆ ಬಂಧನ ಭೀತಿ: ನಿರೀಕ್ಷಣಾ ಜಾಮೀನು… ಪ್ರಜ್ವಲ್ ರೇವಣ್ಣ ಪರ ಮತಯಾಚಿಸಿದ ಪ್ರಧಾನಿ ಮೋದಿ ಕ್ಷಮೆ ಕೇಳಲಿ: ಕಾಂಗ್ರೆಸ್ ನಾಯಕ…

ಇತ್ತೀಚಿನ ಸುದ್ದಿ

ಕೊರೊನಾ ವಾರಿರ್ಯರ್ಸ್ ತಾರತಮ್ಯ ಬೇಡಃ ರಮಾನಾಥ ರೈ

19/05/2021, 11:08

ಮಂಗಳೂರು(reporterkaranatakanews): ಶಿಕ್ಷಕರು, ಪಂಚಾಯತ್ ಪಿಡಿಓ, ಕಾರ್ಮಿಕ ಇಲಾಖೆಯ ಸಿಬಬಂದಿಯನ್ನು ಕೊರೊನಾ ವಾರಿಯರ್ಸ್ ಪಟ್ಟಿಯಿಂದ ಹೊರಗಿಟ್ಟಿರುವುದು ಸರಿಯಲ್ಲ. ಕೊರೊನಾ ನಿಯಂತ್ರಣ ಕಾರ್ಯದಲ್ಲಿ ದುಡಿಯುತ್ತಿರುವ ಎಲ್ಲರನ್ನು ಕೊರೊನಾ ವಾರಿಯರ್ಸ್ ಎಂದು ಪರಿಗಣಿಸಿ ಸರಕಾರದ ಎಲ್ಲ ವಿಶೇಷ ಸೌಲಭ್ಯ ನೀಡಬೇಕು ಎಂದು ಮಾಜಿ ಸಚಿವ ಬಿ.ರಮಾನಾಥ ರೈ ಹೇಳಿದ್ದಾರೆ.

ಗ್ರಾಮ ಪಂಚಾಯತು ಮಟ್ಟದಲ್ಲಿ ಕೊರೊನಾ ಸೋಂಕು ನಿಯಂತ್ರಣ ಕಾರ್ಯದಲ್ಲಿ ಶಾಲಾ ಶಿಕ್ಷಕರು ಮತ್ತು ಗ್ರಾಮ ಪಂಚಾಯತುಗಳ ಪಂಚಾಯತು ಅಭಿವೃದ್ಧಿ ಅಧಿಕಾರಿ (ಪಿಡಿಓ) ಪಾತ್ರ ಮಹತ್ವದಾಗಿದ್ದು, ಇವರನ್ನು ಕೂಡ ಕೊರೊನಾ ವಾರಿಯರ್ಸ್ ಎಂದು ಸರಕಾರ ಕೂಡಲೇ ಪರಿಗಣಿಸಬೇಕು ಎಂದು ರಮಾನಾಥ ರೈ ಒತ್ತಾಯಿಸಿದ್ದಾರೆ.

ಇದೇ ರೀತಿಯಲ್ಲಿ ವಲಸೆ ಕಾರ್ಮಿಕರು ಸೇರಿದಂತೆ ಇನ್ನಿತರ ಕಾರ್ಮಿಕರೊಂದಿಗೆ ಸಂಪರ್ಖ ಹೊಂದಿರುವ ಮತ್ತು ಕೊರೊನಾ ನಿಯಂತ್ರಣ ಕಾರ್ಯದಲ್ಲಿ ತೊಡಗಿರುವ ಕಾರ್ಮಿಕ ಇಲಾಖೆಯ ನೌಕರರಿಗೆ ಕೂಡ ಕೊರೊನಾ ವಾರಿಯರ್ಸ್ ಗಳಿಗ ನೀಡಲಾಗುವ ಸೌಲಭ್ಯಗಳನ್ನು ನೀಡಬೇಕು ಎಂದವರು ಪತ್ರಿಕಾ ಹೇಳಿಕೆಯ ಮೂಲಕ ಸರಕಾರವನ್ನು ಒತ್ತಾಯಿಸಿದ್ದಾರೆ.

ಈಗಾಗಲೇ ನಮ್ಮ ರಾಜ್ಯದಲ್ಲಿ ಹಲವು ಮಂದಿ ಶಿಕ್ಷಕರು, ಶಿಕ್ಷಣ ಇಲಾಖೆ ಸಿಬ್ಬಂದಿ ಕೋವಿಡ್‌ ಸೋಂಕಿನಿಂದಾಗಿ ಸಾವಿಗೀಡಾಗಿದ್ದಾರೆ. ಶಿಕ್ಷಕರು, ಉಪನ್ಯಾಸಕರು, ಪ್ರಾಧ್ಯಾಪಕರು ಹಾಗೂ ಬೋಧಕೇತರ ಸಿಬ್ಬಂದಿಯನ್ನು ಕೋವಿಡ್‌ ಕಾರ್ಯಕ್ಕಾಗಿ ತೊಡಗಿಸಿಕೊಳ್ಳಲಾಗಿದೆ. ಇವರೆಲ್ಲರನ್ನು ಕೊರೊನಾ ವಾರಿಯರ್ಸ್‌ ಎಂದು ಪರಿಗಣಿಸುವುದು ಅಗತ್ಯವಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು