1:23 PM Sunday21 - June 2026
ಬ್ರೇಕಿಂಗ್ ನ್ಯೂಸ್
ಮಸ್ಕಿ: ರಾಯಚೂರಿಗೆ AIIMS ಮಂಜೂರಾತಿಗಾಗಿ 1500 ದಿನಗಳ ಧರಣಿ ಸತ್ಯಾಗ್ರಹ: ಕಲ್ಯಾಣ ಕರ್ನಾಟಕದಾದ್ಯಂತ… Chitradurga | ಪರಶುರಾಂಪುರ: ಕಂದಾಯ ಇಲಾಖೆ ರಾಜಸ್ವ ನಿರೀಕ್ಷಕ ಎಸ್. ಆರ್. ರಾಜೇಶ್… ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ…

ಇತ್ತೀಚಿನ ಸುದ್ದಿ

ಲೋಕಸಭೆ ಚುನಾವಣೆ: ಬಿಜೆಪಿ ಕಾಗವಾಡ ಮಂಡಲದ ಪದಾಧಿಕಾರಿಗಳ, ಬೂತ್ ಅಧ್ಯಕ್ಷರ ಚುನಾವಣೆ ಪೂರ್ವ ತಯಾರಿ ಸಭೆ

30/03/2024, 16:38

ಶಿವರಾಯ ಲಕ್ಷ್ಮಣ ಕರ್ಕರಮುಂಡಿ ಬೆಳಗಾವಿ

info.reporterkarnataka@gmail.com

ಚಿಕ್ಕೋಡಿ ಲೋಕಸಭಾ ವ್ಯಾಪ್ತಿಯ ಕಾಗವಾಡ ಮತಕ್ಷೇತ್ರದ ಕೆಂಪವಾಡ ಗ್ರಾಮದಲ್ಲಿ ಬಿಜೆಪಿ ಕಾಗವಾಡ ಮಂಡಲದ ಪದಾಧಿಕಾರಿಗಳು ಬೂತ್ ಅಧ್ಯಕ್ಷರು, ಬಿಎಲ್‌ಎ – 2 ಗಳ ಸಭೆ‌ ಹಾಗೂ ಚುನಾವಣೆ ಪೂರ್ವತಯಾರಿ ಕುರಿತು ಬಿಜೆಪಿ
ಅಭ್ಯರ್ಥಿ ಅಣ್ಣಾಸಾಹೇಬ ಜೊಲ್ಲೆ ನೇತೃತ್ವದಲ್ಲಿ ಸಭೆ ನಡೆಯಿತು.

ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಭಾರತೀಯ ಜನತಾ ಪಕ್ಷದ ಜನಪರ ಆಡಳಿತಕ್ಕೆ ಜನಮನ್ನಣೆ ಈಗಾಗಲೇ ಸಿಕ್ಕಿದ್ದು, ಕರ್ನಾಟಕದಲ್ಲೂ ಈ ಬಾರಿ ಕಮಲ‌ ಪಡೆ ಐತಿಹಾಸಿಕ ಗೆಲುವು ಸಾಧಿಸುವ ವಿಶ್ವಾಸವಿದೆ. ಕೇಂದ್ರ ಸರಕಾರದ ಜನಪರ ಯೋಜನೆಗಳು ಮತ್ತು ನಮ್ಮ ಪಕ್ಷದ ಕಾರ್ಯಕರ್ತರ ಸಂಘಟನಾತ್ಮಕ ಶಕ್ತಿಯೇ ನಮಗೆ ಶ್ರೀರಕ್ಷೆಯಾಗಲಿದೆ ಎಂದು ಅಣ್ಣಾ ಸಾಹೇಬ್ ಜೊಲ್ಲೆ ನುಡಿದರು.
ಈ ಸಂದರ್ಭದಲ್ಲಿ ಮಾಜಿ ಶಾಸಕ ಶ್ರೀಮಂತ ಪಾಟೀಲ, ಚಿಕ್ಕೋಡಿ ಲೋಕಸಭಾ ಕ್ಷೇತ್ರದ ಪ್ರಭಾರಿಗಳು ಹಾಗೂ ಬೆಳಗಾವಿ ದಕ್ಷಿಣ ಶಾಸಕ ಅಭಯ ಪಾಟೀಲ, ಜಿಲ್ಲಾಧ್ಯಕ್ಷ ಸತೀಶ ಅಪ್ಪಾಜಿಗೋಳ, ಮಾಜಿ ಜಿಲ್ಲಾಧ್ಯಕ್ಷ ಡಾ.ರಾಜೇಶ ನೇರ್ಲಿ, ಕಾಗವಾಡ ಮಂಡಲದ ಅಧ್ಯಕ್ಷ ತಮ್ಮಣ್ಣಾ ಪಾರಶೆಟ್ಟಿ, ವಿಭಾಗಿಯ ಪ್ರಭಾರಿಗಳಾದ ಚಂದ್ರಶೇಖರ ಕವಟಗಿ, ಮಂಡಲ ಉಸ್ತುವಾರಿಗಳಾದ ಅಮೃತ ಕುಲಕರ್ಣಿ, ಚಿಕ್ಕೋಡಿ ಜಿಲ್ಲಾ ಪ್ರಭಾರಿಗಳಾದ ಉಜ್ವಲಾ ಬಡವನಾಚೆ, ಅಭಯ ಅರೊಕೆ ವಕೀಲರು,‌ಕಾಗವಾಡ ಬಿಜೆಪಿ ಮುಖಂಡರಾದ ಶಿವಾನಂದ ಪಾಟೀಲ ನಿಂಗಪ್ಪಾ ಖೋಕಲೆ ವಕೀಲರು, ಪ್ರಭಾಕರ ಚವ್ಹಾಣ, ಪಕ್ಷದ ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು‌.

ಇತ್ತೀಚಿನ ಸುದ್ದಿ

ಜಾಹೀರಾತು