2:24 PM Thursday30 - April 2026
ಬ್ರೇಕಿಂಗ್ ನ್ಯೂಸ್
ಉದ್ಯೋಗ ಖಾತ್ರಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿ ಸಾವು: ಬಿಸಿಲಿನ ತಾಪಮಾನಕ್ಕೆ… ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ತರಲು ಯತ್ನ: ಸಂಡೂರಿನಲ್ಲಿ ಕಾರ್ಮಿಕ ಸಚಿವ… ಬಿಜೆಪಿ ಪಕ್ಷದಿಂದಲೇ ಮಹಿಳೆಯರಿಗೆ ಶೇ. 30ರಷ್ಟು ಮೀಸಲಾತಿ ಪ್ರಕಟಿಸಲಿ: ಸಚಿವ ಸಂತೋಷ್ ಲಾಡ್… Mangaluru | ಕುಕ್ಕರ್‌ ಬಾಂಬ್‌ ಸ್ಫೋಟದ ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಬೇಕಿತ್ತು: ಸಂತ್ರಸ್ತ… ಗಾದಿ ಪೈಪೋಟಿ | ದೆಹಲಿಗೆ ಹೋಗಲು 50 ಶಾಸಕರ ಟಿಕೆಟ್‌ ಬುಕ್ಕಿಂಗ್‌: ಕೇಂದ್ರ… Koppala | ಕುಷ್ಟಗಿಯಲ್ಲಿ ಗುಡುಗು ಸಹಿತ ಮಳೆ: ಸಿಡಿಲು ಬಡಿದು ವ್ಯಕ್ತಿ ಬಲಿ ಕೊಡಗು-ಮೈಸೂರು ರಾಜ್ಯ ಹೆದ್ದಾರಿ ಬಳಿ ಹುಲಿ ದಾಳಿಗೆ ಹಸು ಬಲಿ: ರೊಚ್ಚಿಗೆದ್ದ ಗ್ರಾಮಸ್ಥರಿಂದ… New Delhi | 228 ಪ್ರಯಾಣಿಕರಿದ್ದ ವಿಮಾನದಲ್ಲಿ ಬೆಂಕಿ: ಸ್ವಲ್ಪದರಲ್ಲೇ ತಪ್ಪಿತು ಮತ್ತೊಂದು… ಶಿಕ್ಷಕರೇ ಇಲ್ಲದ ಶಾಲೆಗಳಿಗೆ ಶೇ. 94 ಬಂದಿದ್ದು ಹೇಗೆ? ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ದೊಡ್ಡ… ತಂದೆ ಬೈದ ಕ್ಷುಲ್ಲಕ ಕಾರಣಕ್ಕೆ ಯುವತಿ ಆತ್ಮಹತ್ಯೆಗೆ ಶರಣು

ಇತ್ತೀಚಿನ ಸುದ್ದಿ

ಕೆಂಜಾರು ಗೋಶಾಲೆಗೆ ಕಾಂಗ್ರೆಸ್ ಅಭ್ಯರ್ಥಿ ಭೇಟಿ: ಗೋವುಗಳ ನೋವಿಗೆ ಮರುಗಿದ ಪದ್ಮರಾಜ್ ಆರ್.

30/03/2024, 20:48

ಮಂಗಳೂರು(reporterkarnataka.com):500ಕ್ಕೂ ಅಧಿಕ ಗೋವುಗಳು… ಆಳುದ್ದದ ಹಟ್ಟಿಯಲ್ಲಿ ಸಾವಕಾಶವಾಗಿ ನಿಲ್ಲಲು ಜಾಗವೇ ಇಲ್ಲ. ಇನ್ನು, ಮೇವು ಮೇಯಲು ಜಾಗವೆಲ್ಲಿ?, ಆರೋಗ್ಯಪೂರ್ಣವಾಗಿ ದಿನ ನಿರ್ವಹಣೆಯ ಮಾತೆಲ್ಲಿ?, ತಳಿ ಅಭಿವೃದ್ಧಿ ಮಾಡಲು ಕೇಂದ್ರವೆಲ್ಲಿ…?
ಇದು ಮಂಗಳೂರಿನ ಬಜಪೆ ಕೆಂಜಾರು ಕಪಿಲಾ ಪಾರ್ಕ್ ಗೋಶಾಲೆಯ ಕಥೆ – ವ್ಯಥೆ.


ಲೋಕಸಭಾ ಚುನಾವಣೆಯ ದ.ಕ. ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಅವರು ಶುಕ್ರವಾರ ಸಂಜೆ ಕಪಿಲಾ ಪಾರ್ಕ್ ಗೋಶಾಲೆಗೆ ಭೇಟಿ ನೀಡಿದರು. ನಿಲ್ಲಲು ಜಾಗವಿಲ್ಲದೇ ಒಂದರ ತಲೆ ಇನ್ನೊಂದು ಗೋವಿನ ಮೇಲೆ ಇರುವಂತೆ ಆಹಾರ ಮೇಯುತ್ತಿದ್ದ ಸ್ಥಿತಿ ಕಂಡು ಮರುಕ ವ್ಯಕ್ತಪಡಿಸಿದರು. ಚುನಾವಣಾ ನೀತಿ ಸಂಹಿತೆ ಮುಗಿದ ಬಳಿಕ ಸಂಬಂಧಪಟ್ಟ ಅಧಿಕಾರಿ ಹಾಗೂ ಮುಖ್ಯಮಂತ್ರಿಗಳ ಜೊತೆ ಮಾತನಾಡಿ ಅಗತ್ಯ ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು.
ಒಟ್ಟು 36 ಸೆಂಟ್ಸ್ ಜಾಗದಲ್ಲಿ 500ಕ್ಕೂ ಅಧಿಕ ಗೋವುಗಳು ನಿಲ್ಲಲಾಗದೇ ಹೊರಗೋಡಿ ಬರಲು ತವಕಿಸುತ್ತಿದ್ದವು. ಹಟ್ಟಿಯ ಹೊರಗಡೆ ಎಳೆ ಕರುಗಳು ದಿಕ್ಕು ಕಾಣದೆ ನಿಂತಿದ್ದವು.
ಗೋಶಾಲೆಯ ಪ್ರಕಾಶ್ ಅವರು ಗೋಶಾಲೆಯ ದೈನವೀ ಪರಿಸ್ಥಿತಿಯನ್ನು ವಿವರಿಸಿದರು. ಹಿಂದೂ ಪ್ರತಿಪಾದಕರು ಎಂದು ಹೇಳಿಕೊಂಡವರು ಭರವಸೆ ನೀಡಿದ್ದು ಬಿಟ್ಟರೆ, ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಅಳಲು ತೋಡಿಕೊಂಡರು.

ಇತ್ತೀಚಿನ ಸುದ್ದಿ

ಜಾಹೀರಾತು