1:21 AM Sunday21 - September 2025
ಬ್ರೇಕಿಂಗ್ ನ್ಯೂಸ್
ಅಂತಾರಾಷ್ಟ್ರೀಯ ಬಾಲ್ಯ ಕ್ಯಾನ್ಸರ್ ಜಾಗೃತಿ: ಬೆಂಗಳೂರು ಇಸ್ಕಾನ್ ದೇವಾಲಯಕ್ಕೆ ಚಿನ್ನದ ಬಣ್ಣದ ಬೆಳಕು ನವೆಂಬರ್ ನಿಂದ ಮಾಹಿತಿ ಹಕ್ಕು ಅದಾಲತ್: ಮಾಹಿತಿ ಹಕ್ಕು ಅರ್ಜಿಗಳನ್ನು ಶೂನ್ಯಕ್ಕಿಳಿಸಲು ಗುರಿ ಪಿಡಿಒ ಜೇಷ್ಠಾತಾ ಪಟ್ಟಿ ನ್ಯಾಯಸಮ್ಮತವಾಗಿ ಅಂತಿಮಗೊಳಿಸಲು ಸೂಕ್ತ ಕ್ರಮ: ಸಚಿವ ಪ್ರಿಯಾಂಕ್‌ ಖರ್ಗೆ ಮಂಗಳೂರಿನಲ್ಲಿ ಧರ್ಮದ ಹೆಸರಲ್ಲಿ ಜೈಲಿಗೆ ಹೋದವರು, ಕೊಲೆ ಆದವರೆಲ್ಲಾ ಹಿಂದುಳಿದವರೇ ಆಗಿದ್ದಾರೆ: ಸಿಎಂ… ವಿರಾಜಪೇಟೆ ಆರೆಂಜ್ ಸ್ಪಾ -ಬ್ಯೂಟಿ ಪಾರ್ಲರ್ ದಾಳಿ ಪ್ರಕರಣ: ನಾಲ್ವರು ಪ್ರಮುಖ ಆರೋಪಿಗಳ… Kodagu | ಕುಶಾಲನಗರ: ಕಾವೇರಿ ನದಿಯಲ್ಲಿ ಮುಳುಗಿ ಕಾಡಾನೆ ದಾರುಣ ಸಾವು ಮಡಿಕೇರಿ ನಗರಸಭೆಯ ಮೇಲೆ ಲೋಕಾಯುಕ್ತ ದಿಢೀರ್ ದಾಳಿ: ಸಾರ್ವಜನಿಕರ ದೂರಿಗೆ ಸ್ಪಂದನೆ ಮೈಸೂರು ದಸರಾ ಉದ್ಘಾಟನೆಗೆ ಬಾನು ಮುಸ್ತಾಕ್: ತಡೆ ಕೋರಿ ಸಲ್ಲಿಸಿದ ಅರ್ಜಿ ಸುಪ್ರೀಂಕೋರ್ಟ್… ಪಂಚ ಗ್ಯಾರಂಟಿ ಯೋಜನೆಗಳಿಗೆ 98 ಸಾವಿರ ಕೋಟಿ; ಅಭಿವೃದ್ಧಿಗೆ 8 ಸಾವಿರ ಕೋಟಿ:… New Delhi | ಕಾಂಗ್ರೆಸ್ ಸರಕಾರದ ಪಂಚೇಂದ್ರಿಯಗಳು ನಿಷ್ಕ್ರಿಯವಾಗಿವೆ: ಕೇಂದ್ರ ಸಚಿವ ಕುಮಾರಸ್ವಾಮಿ…

ಇತ್ತೀಚಿನ ಸುದ್ದಿ

ದ.ಕ. ಲೋಕಸಭೆ ಕ್ಷೇತ್ರದಿಂದ ಪದ್ಮರಾಜ್ ಆರ್., ಉಡುಪಿಯಿಂದ ಕೋಟ, ಶಿವಮೊಗ್ಗದಿಂದ ಗೀತಾ ಶಿವರಾಜಕುಮಾರ್ ಗೆಲ್ಲಿಸಿ: ಸತ್ಯಜಿತ್ ಸುರತ್ಕಲ್

01/04/2024, 16:10

ಮಂಗಳೂರು(reporterkarnataka.com):ರಾಜಕೀಯವನ್ನು ಬದಿಗೆ ಸರಿಸಿ ದ.ಕ. ಲೋಕಸಭೆ ಕ್ಷೇತ್ರದಿಂದ ಪದ್ಮರಾಜ್ ಆರ್., ಉಡುಪಿಯಿಂದ ಕೋಟ ಶ್ರೀನಿವಾಸ ಪೂಜಾರಿ ಹಾಗೂ ಶಿವಮೊಗ್ಗದಿಂದ ಗೀತಾ ಶಿವರಾಜಕುಮಾರ್ ಅವರನ್ನು ಗೆಲ್ಲಿಸುವ ಮೂಲಕ ಬಿಲ್ಲವ ಸಮುದಾಯಕ್ಕೆ ಬಲ ನೀಡುವಂತೆ ಬ್ರಹ್ಮಶ್ರೀ ನಾರಾಯಣ ಗುರು ವೇದಿಕೆ ಅಧ್ಯಕ್ಷ ಸತ್ಯಜಿತ್ ಸುರತ್ಕಲ್ ಹೇಳಿದರು.

ನಗರದ ಪ್ರೆಸ್ ಕ್ಲಬ್ ನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಲೋಕಸಭೆಗೆ ಬಿಜೆಪಿ ಟಿಕೆಟ್ ತಪ್ಪಿದ ಬಗ್ಗೆ ಅಸಮಾಧಾನ ಹೊರ ಹಾಕಿದರು.
ರಾಜ್ಯದಲ್ಲಿ ಬಿಜೆಪಿ ಇಲ್ಲ, ಬಿ.ಎಲ್. ಸಂತೋಷರ ಪಾರ್ಟಿ ಇತ್ತು. ಈಗ ಇಲ್ಲ. ಈಗ ಯಡಿಯೂರಪ್ಪರ ಪಾರ್ಟಿ ಇರೋದು. ಅವರ ಹಿಂದೆ ಯಾರು ಜೈಕಾರ ಹಾಕುತ್ತಾರೋ, ಅವರಿಗೆ ಬಕೆಟ್ ಹಿಡಿಯುತ್ತಾರೋ ಅವರಿಗೆ ಮಾತ್ರ ಅವಕಾಶ ಎಂದು
ಸತ್ಯಜಿತ್ ಸುರತ್ಕಲ್ ಆಕ್ರೋಶ ವ್ಯಕ್ತಪಡಿಸಿದರು.
ನಾನು ಹುಟ್ಟಿದ ಜಾತಿ, ಊರು ಸರಿಯಿಲ್ಲ. ಅದಕ್ಕಾಗಿ ಟಿಕೆಟ್ ತಪ್ಪಿದೆ. ಬ್ರಾಹ್ಮಣ, ಲಿಂಗಾಯತ, ಒಕ್ಕಲಿಗ, ಬಂಟ ಸಮುದಾಯದಲ್ಲಿ ಹುಟ್ಟಿದರೆ ನನಗೂ ಟಿಕೆಟ್ ಸಿಕುತ್ತಿತ್ತು. ಶೂದ್ರ ಸಮಾಜದಲ್ಲಿ ಹುಟ್ಟಿದ್ದರಿಂದ ನನಗೆ ಸೇವೆ ಮಾಡಲು ಮಾತ್ರ ಅವಕಾಶ. ಶೂದ್ರರು ತಾವಾಗಿ ಸ್ಥಾನ ಕೇಳಲು ಹೋಗಬಾರದು. ನಾಯಕರು ಹೇಳಿದಂತೆ, ಅವರಿಗೆ ಬಕೆಟ್ ಹಿಡಿದರೆ ಅವಕಾಶಗಳು ಸಿಗುತ್ತದೆ. ವೈಯಕ್ತಿಕ ಶಕ್ತಿ- ಸಾಮರ್ಥ್ಯ ಇರೋರಿಗೆ ಅವಕಾಶ ಇಲ್ಲ ಎಂದು ಅವರು ಬೇಸರ ವ್ಯಕ್ತಪಡಿಸಿದರು.
ಉಡುಪಿಯಲ್ಲಿ ಕೋಟ ಶ್ರೀನಿವಾಸ ಪೂಜಾರಿ ಅವರಿಗೆ ಟಿಕೆಟ್ ನೀಡಿ ಬಿಲ್ಲವರಿಗೆ ಅನ್ಯಾಯ ಮಾಡಿದೆ. ಕೋಟರು ಎಂಎಲ್ಸಿ, ವಿಧಾನ ಪರಿಷತ್ ಪ್ರತಿಪಕ್ಷದ ನಾಯಕ. ಇಂತಹ ಸ್ಥಾನ ನಮ್ಮ ಸಮಾಜಕ್ಕೆ ಮತ್ತೆ ಸಿಗಲು ಸಾಧ್ಯವಿಲ್ಲ. ಉಡುಪಿ ಯಲ್ಲಿ ಪ್ರಾಮಾಣಿಕ ಸೇವೆ ಮಾಡಿದ ಬೇರೆಯವರು ಇದ್ದರು. ಅವರಿಗೆ ನೀಡುತ್ತಿದರೆ ಬಿಲ್ಲವ ಸಮಾಜಕ್ಕೆ ನ್ಯಾಯ ಸಿಗುತ್ತಿತ್ತು.ಈಗ ಬಿಜೆಪಿಯಿಂದ ಬಿಲ್ಲವ ಸಮಾಜಕ್ಕೆ ಅನ್ಯಾಯವಾಗಿದೆ ಎಂದು ಅವರು ನುಡಿದರು.
ಅನೇಕ ವರ್ಷಗಳ ಬಳಿಕ ಬಿಲ್ಲವ ಸಮಾಜಕ್ಕೆ ಕರಾವಳಿಯಲ್ಲಿ ಮೂವರಿಗೆ ಟಿಕೆಟ್ ಸಿಕ್ಕಿದೆ. ಕಾಂಗ್ರೆಸ್ ಮತ್ತು ಬಿಜೆಪಿಯಲ್ಲಿ ಸಿಕ್ಕಿದೆ.
ದ.ಕ. ದಲ್ಲಿ ಪದ್ಮರಾಜ್, ಉಡುಪಿ ಕೋಟ ಶ್ರೀನಿವಾಸ ಪೂಜಾರಿ ಹಾಗೂ ಶಿವಮೊಗ್ಗದಲ್ಲಿ ಗೀತಾ ಶಿವರಾಜಕುಮಾರ್ ಅವರನ್ನು ಚುನಾವಣೆಯಲ್ಲಿ ಗೆಲ್ಲಿಸುವ ಮೂಲಕ ಬಿಲ್ಲವ ಸಮುದಾಯಕ್ಕೆ ಬಲ ನೀಡಬೇಕು. ಬಿಲ್ಲವ ಬಾಂಧವರು ಪಕ್ಷ ಬದಿಗೊತ್ತಿ ಈ ಮೂವರು ಅಭ್ಯರ್ಥಿಗಳನ್ನು ಗೆಲ್ಲಿಸಬೇಕೆಂದು ಸತ್ಯಜಿತ್ ಸುರತ್ಕಲ್ ಕರೆ ಕೊಟ್ಟರು.

ಇತ್ತೀಚಿನ ಸುದ್ದಿ

ಜಾಹೀರಾತು