5:06 AM Friday6 - March 2026
ಬ್ರೇಕಿಂಗ್ ನ್ಯೂಸ್
ರಾಜ್ಯದ 17ನೇ ಬಜೆಟ್: ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಪ್ರಮುಖ ಘೋಷಣೆ; ಡಾ. ಯು.… ಮತ್ತೆ ಮರಳಲಿದೆ ಕ್ಯಾಂಪಸ್ ಪಾಲಿಟಿಕ್ಸ್: ರಾಜ್ಯದ ಎಲ್ಲಾ ಕಾಲೇಜು, ವಿವಿಗಳಲ್ಲಿ ವಿದ್ಯಾರ್ಥಿ ಸಂಘಗಳ… ಮಂಗಳೂರು ಮೀನುಗಾರಿಕೆ ಮಹಾವಿದ್ಯಾಲಯ ಸ್ಥಾಪನೆ: ರಾಜ್ಯ ಬಜೆಟ್ ನಲ್ಲಿ‌ ಘೋಷಣೆ ಎಣ್ಣೆಪ್ರಿಯರಿಗೆ ಶಾಕ್ ನೀಡಿದ ಬಜೆಟ್‌: ಮದ್ಯದ ಮೇಲೆ ಹೊಸ ರೂಪದ ತೆರಿಗೆ ಕೋರ್ಟು ಅಲೆದಾಟ ತಪ್ಪಿಸಲು 10 ಕೋಟಿ ವೆಚ್ಚದಲ್ಲಿ ಇ ಕೋರ್ಟ್‌ ಸ್ಥಾಪನೆ 1,000 ಕೋಟಿ ವೆಚ್ಚದ ‘ಕಲ್ಯಾಣ ಪಥ’ ಯೋಜನೆಡಿ ರಸ್ತೆ ಅಭಿವೃದ್ಧಿ:ಮುಖ್ಯಮಂತ್ರಿ ರಾಜ್ಯ ಬಜೆಟ್ | ಮೈಸೂರು ರಾಜ್ಯದ 2ನೇ ಐಟಿ ಸಿಟಿಯಾಗಿ ರೂಪಿಸುವ ಯೋಜನೆ ರಾಜ್ಯದಲ್ಲಿ ‘ವಿದ್ಯಾರ್ಥಿ ಇಂದಿರಾ ಕ್ಯಾಂಟೀನ್’ ಆರಂಭ : ಬಜೆಟ್ ನಲ್ಲಿ ಘೋಷಣೆ ಜಿಎಸ್​ಟಿ ತರ್ಕಬದ್ಧಗೊಳಿಸಿದ್ದರಿಂದ ರಾಜ್ಯಕ್ಕೆ ರಾಜಸ್ವ ಸಂಗ್ರಹಣೆ ಕಡಿಮೆ: ಸಿಎಂ ಸಿದ್ದರಾಮಯ್ಯ ರಾಜ್ಯ ಬಜೆಟ್ | ದಕ್ಷಿಣ ಕನ್ನಡದ ಮಾಣಿ ಹಾಗೂ ಸಜಿಪನಡು ಸೇರಿದಂತೆ ರಾಜ್ಯದ…

ಇತ್ತೀಚಿನ ಸುದ್ದಿ

ಬಡವರ ಸಮಸ್ಯೆಗಳಿಗೆ ಸ್ಪಂದನೆ ನೀಡುವ ಬಡವರ ಬಂಧು ಪದ್ಮರಾಜ್ ಆರ್: ಪುತ್ತೂರು ಶಾಸಕ ಅಶೋಕ್ ರೈ ಶ್ಲಾಘನೆ

01/04/2024, 17:59

ಪುತ್ತೂರು(reporterkarnataka.com): ಪುತ್ತೂರು ಬದ್ರಿಯಾ ಜುಮ್ಮಾ ಮಸೀದಿಗೆ ಲೋಕಸಭಾ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಭೇಟಿ ನೀಡಿದರು.


ಅಬ್ಬಾಸ್ ಫೈಝಿ ಪುತ್ತಿಗೆ ಪ್ರಾರ್ಥನೆ ನೆರವೇರಿಸಿ, ಪದ್ಮರಾಜ್ ಗೆಲುವಿಗೆ ಶುಭಹಾರೈಸಿದರು.
ಶಾಸಕ ಅಶೋಕ್ ಕುಮಾರ್ ರೈ ಮಾತನಾಡಿ, ನಮ್ಮ ಅಭ್ಯರ್ಥಿ ಪೇಟೆಯಲ್ಲಿ ಬೆಳೆದವರಲ್ಲ. ಹಳ್ಳಿಯ ಜೀವನ ಕಂಡವರು. ಕಷ್ಟ, ಬಡತನದಲ್ಲೇ ಬೆಳೆದು ಬಂದಿದ್ದಾರೆ. ಆದ್ದರಿಂದ ಜನರ ಸಮಸ್ಯೆಗಳಿಗೆ ಸರಿಯಾದ ಸ್ಪಂದನೆ ಮಾಡುವವರು. ಆದ್ದರಿಂದ ಅವರನ್ನು ಗೆಲ್ಲಿಸಿಕೊಡಬೇಕು. ಇದಕ್ಕಾಗಿ ಗ್ಯಾರೆಂಟಿ ಯೋಜನೆಗಳನ್ನು ಜನರ ಮನೆ ಬಾಗಿಲಿಗೆ ತಲುಪಿಸಿ. ನೀವೆಲ್ಲಾ ಜನರ ಮನೆಗೆ ಹೋಗಿ, ಮತ ಕೇಳಿದ ಕಾರಣ ನಾನು ಶಾಸಕನಾಗುವಂತಾಯಿತು. ಅದೇ ರೀತಿ ಪದ್ಮರಾಜ್ ಅವರನ್ನು ಅತ್ಯಧಿಕ ಮತದಿಂದ ಗೆಲ್ಲಿಸಿಕೊಡಬೇಕು ಎಂದು ಹೇಳಿದರು.
ಅಭ್ಯರ್ಥಿ ಪದ್ಮರಾಜ್ ಆರ್. ಮಾತನಾಡಿ, ಚುನಾವಣೆ ಎಂದ ಮಾತ್ರಕ್ಕಷ್ಟೇ ಎಲ್ಲಾ ಪ್ರಾರ್ಥನಾಲಯಗಳಿಗೆ ತೆರಳುತ್ತಿಲ್ಲ. ಇತರ ಸಮಯದಲ್ಲೂ ಎಲ್ಲಾ ಪ್ರಾರ್ಥನಾ ಕೇಂದ್ರಗಳಿಗೆ ತೆರಳುವ ಸಂಪ್ರದಾಯ ಬೆಳೆಸಿಕೊಂಡವನು ನಾನು. ಈ ಚುನಾವಣೆಯ ಮೂಲಕ ಎಲ್ಲಾ ಜನರ ಸೇವೆ ಮಾಡುವ ಭಾಗ್ಯ ಸಿಗುವಂತಾಗಲಿ ಎಂದರು.
ಮಸೀದಿ ಸಮಿತಿ ಅಧ್ಯಕ್ಷ ಎಲ್.ಟಿ. ರಝಾಕ್ ಹಾಜಿ ಮಾತನಾಡಿ, ಉತ್ತಮ ಅಭ್ಯರ್ಥಿ ನಮಗೆ ಲಭಿಸಿದ್ದಾರೆ. ಜಾತಿ, ಮತ, ಬೇಧ ನೋಡದೇ ಅವರನ್ನು ಗೆಲ್ಲಿಸಿಕೊಡಬೇಕು ಎಂದರು.
ಚುನಾವಣಾ ಪ್ರಚಾರ ಸಮಿತಿ ಅಧ್ಯಕ್ಷ ಕಾವು ಹೇಮನಾಥ ಶೆಟ್ಟಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಎಂ.ಬಿ. ವಿಶ್ವನಾಥ ರೈ, ಡಾ. ರಾಜಾರಾಮ್, ಕಾರ್ಯದರ್ಶಿ ಯಕೂಬ್ ಖಾನ್, ನೂರುದ್ದೀನ್ ಸಾಲ್ಮಾರ, ಹಸನ್ ಹಾಜಿ, ಶಕೂರ್ ಹಾಜಿ, ಎಂ.ಎಸ್. ಮಹಮ್ಮದ್ ಮೊದಲಾದವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು