6:15 AM Friday18 - September 2026
ಬ್ರೇಕಿಂಗ್ ನ್ಯೂಸ್
ಶಾರ್ಜಾದ ‘ಸ್ಟ್ರಿಂಗ್ ಟ್ರಾನ್ಸ್‌ಪೋರ್ಟ್’ ವ್ಯವಸ್ಥೆ: ಟೂರಿಸಂ ಸಚಿವ ಕೆ.ಜೆ. ಜಾರ್ಜ್ ನೇತೃತ್ವದ ನಿಯೋಗ… ರಾಜ್ಯ ಸಚಿವ ಸಂಪುಟ ಸಭೆ | ಸಂಚಾರ ವ್ಯತ್ಯಯ; ಬದಲಿ ಮಾರ್ಗ ವ್ಯವಸ್ಥೆ ಹ್ಯಾಂಡ್ಪಿಕ್ಡ್: ಬೆಂಗಳೂರಿನಲ್ಲಿ ತಾಜಾ ಹಿಟ್ಟು, ಮಸಾಲೆ ಹಾಗೂ ಎಣ್ಣೆ ಉತ್ಪನ್ನ ಮಾರಾಟ ಆರಂಭ ‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:…

ಇತ್ತೀಚಿನ ಸುದ್ದಿ

ಬಡವರ ಸಮಸ್ಯೆಗಳಿಗೆ ಸ್ಪಂದನೆ ನೀಡುವ ಬಡವರ ಬಂಧು ಪದ್ಮರಾಜ್ ಆರ್: ಪುತ್ತೂರು ಶಾಸಕ ಅಶೋಕ್ ರೈ ಶ್ಲಾಘನೆ

01/04/2024, 17:59

ಪುತ್ತೂರು(reporterkarnataka.com): ಪುತ್ತೂರು ಬದ್ರಿಯಾ ಜುಮ್ಮಾ ಮಸೀದಿಗೆ ಲೋಕಸಭಾ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಭೇಟಿ ನೀಡಿದರು.


ಅಬ್ಬಾಸ್ ಫೈಝಿ ಪುತ್ತಿಗೆ ಪ್ರಾರ್ಥನೆ ನೆರವೇರಿಸಿ, ಪದ್ಮರಾಜ್ ಗೆಲುವಿಗೆ ಶುಭಹಾರೈಸಿದರು.
ಶಾಸಕ ಅಶೋಕ್ ಕುಮಾರ್ ರೈ ಮಾತನಾಡಿ, ನಮ್ಮ ಅಭ್ಯರ್ಥಿ ಪೇಟೆಯಲ್ಲಿ ಬೆಳೆದವರಲ್ಲ. ಹಳ್ಳಿಯ ಜೀವನ ಕಂಡವರು. ಕಷ್ಟ, ಬಡತನದಲ್ಲೇ ಬೆಳೆದು ಬಂದಿದ್ದಾರೆ. ಆದ್ದರಿಂದ ಜನರ ಸಮಸ್ಯೆಗಳಿಗೆ ಸರಿಯಾದ ಸ್ಪಂದನೆ ಮಾಡುವವರು. ಆದ್ದರಿಂದ ಅವರನ್ನು ಗೆಲ್ಲಿಸಿಕೊಡಬೇಕು. ಇದಕ್ಕಾಗಿ ಗ್ಯಾರೆಂಟಿ ಯೋಜನೆಗಳನ್ನು ಜನರ ಮನೆ ಬಾಗಿಲಿಗೆ ತಲುಪಿಸಿ. ನೀವೆಲ್ಲಾ ಜನರ ಮನೆಗೆ ಹೋಗಿ, ಮತ ಕೇಳಿದ ಕಾರಣ ನಾನು ಶಾಸಕನಾಗುವಂತಾಯಿತು. ಅದೇ ರೀತಿ ಪದ್ಮರಾಜ್ ಅವರನ್ನು ಅತ್ಯಧಿಕ ಮತದಿಂದ ಗೆಲ್ಲಿಸಿಕೊಡಬೇಕು ಎಂದು ಹೇಳಿದರು.
ಅಭ್ಯರ್ಥಿ ಪದ್ಮರಾಜ್ ಆರ್. ಮಾತನಾಡಿ, ಚುನಾವಣೆ ಎಂದ ಮಾತ್ರಕ್ಕಷ್ಟೇ ಎಲ್ಲಾ ಪ್ರಾರ್ಥನಾಲಯಗಳಿಗೆ ತೆರಳುತ್ತಿಲ್ಲ. ಇತರ ಸಮಯದಲ್ಲೂ ಎಲ್ಲಾ ಪ್ರಾರ್ಥನಾ ಕೇಂದ್ರಗಳಿಗೆ ತೆರಳುವ ಸಂಪ್ರದಾಯ ಬೆಳೆಸಿಕೊಂಡವನು ನಾನು. ಈ ಚುನಾವಣೆಯ ಮೂಲಕ ಎಲ್ಲಾ ಜನರ ಸೇವೆ ಮಾಡುವ ಭಾಗ್ಯ ಸಿಗುವಂತಾಗಲಿ ಎಂದರು.
ಮಸೀದಿ ಸಮಿತಿ ಅಧ್ಯಕ್ಷ ಎಲ್.ಟಿ. ರಝಾಕ್ ಹಾಜಿ ಮಾತನಾಡಿ, ಉತ್ತಮ ಅಭ್ಯರ್ಥಿ ನಮಗೆ ಲಭಿಸಿದ್ದಾರೆ. ಜಾತಿ, ಮತ, ಬೇಧ ನೋಡದೇ ಅವರನ್ನು ಗೆಲ್ಲಿಸಿಕೊಡಬೇಕು ಎಂದರು.
ಚುನಾವಣಾ ಪ್ರಚಾರ ಸಮಿತಿ ಅಧ್ಯಕ್ಷ ಕಾವು ಹೇಮನಾಥ ಶೆಟ್ಟಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಎಂ.ಬಿ. ವಿಶ್ವನಾಥ ರೈ, ಡಾ. ರಾಜಾರಾಮ್, ಕಾರ್ಯದರ್ಶಿ ಯಕೂಬ್ ಖಾನ್, ನೂರುದ್ದೀನ್ ಸಾಲ್ಮಾರ, ಹಸನ್ ಹಾಜಿ, ಶಕೂರ್ ಹಾಜಿ, ಎಂ.ಎಸ್. ಮಹಮ್ಮದ್ ಮೊದಲಾದವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು