10:00 AM Thursday30 - April 2026
ಬ್ರೇಕಿಂಗ್ ನ್ಯೂಸ್
ಉದ್ಯೋಗ ಖಾತ್ರಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿ ಸಾವು: ಬಿಸಿಲಿನ ತಾಪಮಾನಕ್ಕೆ… ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ತರಲು ಯತ್ನ: ಸಂಡೂರಿನಲ್ಲಿ ಕಾರ್ಮಿಕ ಸಚಿವ… ಬಿಜೆಪಿ ಪಕ್ಷದಿಂದಲೇ ಮಹಿಳೆಯರಿಗೆ ಶೇ. 30ರಷ್ಟು ಮೀಸಲಾತಿ ಪ್ರಕಟಿಸಲಿ: ಸಚಿವ ಸಂತೋಷ್ ಲಾಡ್… Mangaluru | ಕುಕ್ಕರ್‌ ಬಾಂಬ್‌ ಸ್ಫೋಟದ ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಬೇಕಿತ್ತು: ಸಂತ್ರಸ್ತ… ಗಾದಿ ಪೈಪೋಟಿ | ದೆಹಲಿಗೆ ಹೋಗಲು 50 ಶಾಸಕರ ಟಿಕೆಟ್‌ ಬುಕ್ಕಿಂಗ್‌: ಕೇಂದ್ರ… Koppala | ಕುಷ್ಟಗಿಯಲ್ಲಿ ಗುಡುಗು ಸಹಿತ ಮಳೆ: ಸಿಡಿಲು ಬಡಿದು ವ್ಯಕ್ತಿ ಬಲಿ ಕೊಡಗು-ಮೈಸೂರು ರಾಜ್ಯ ಹೆದ್ದಾರಿ ಬಳಿ ಹುಲಿ ದಾಳಿಗೆ ಹಸು ಬಲಿ: ರೊಚ್ಚಿಗೆದ್ದ ಗ್ರಾಮಸ್ಥರಿಂದ… New Delhi | 228 ಪ್ರಯಾಣಿಕರಿದ್ದ ವಿಮಾನದಲ್ಲಿ ಬೆಂಕಿ: ಸ್ವಲ್ಪದರಲ್ಲೇ ತಪ್ಪಿತು ಮತ್ತೊಂದು… ಶಿಕ್ಷಕರೇ ಇಲ್ಲದ ಶಾಲೆಗಳಿಗೆ ಶೇ. 94 ಬಂದಿದ್ದು ಹೇಗೆ? ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ದೊಡ್ಡ… ತಂದೆ ಬೈದ ಕ್ಷುಲ್ಲಕ ಕಾರಣಕ್ಕೆ ಯುವತಿ ಆತ್ಮಹತ್ಯೆಗೆ ಶರಣು

ಇತ್ತೀಚಿನ ಸುದ್ದಿ

ಬಡವರ ಸಮಸ್ಯೆಗಳಿಗೆ ಸ್ಪಂದನೆ ನೀಡುವ ಬಡವರ ಬಂಧು ಪದ್ಮರಾಜ್ ಆರ್: ಪುತ್ತೂರು ಶಾಸಕ ಅಶೋಕ್ ರೈ ಶ್ಲಾಘನೆ

01/04/2024, 17:59

ಪುತ್ತೂರು(reporterkarnataka.com): ಪುತ್ತೂರು ಬದ್ರಿಯಾ ಜುಮ್ಮಾ ಮಸೀದಿಗೆ ಲೋಕಸಭಾ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಭೇಟಿ ನೀಡಿದರು.


ಅಬ್ಬಾಸ್ ಫೈಝಿ ಪುತ್ತಿಗೆ ಪ್ರಾರ್ಥನೆ ನೆರವೇರಿಸಿ, ಪದ್ಮರಾಜ್ ಗೆಲುವಿಗೆ ಶುಭಹಾರೈಸಿದರು.
ಶಾಸಕ ಅಶೋಕ್ ಕುಮಾರ್ ರೈ ಮಾತನಾಡಿ, ನಮ್ಮ ಅಭ್ಯರ್ಥಿ ಪೇಟೆಯಲ್ಲಿ ಬೆಳೆದವರಲ್ಲ. ಹಳ್ಳಿಯ ಜೀವನ ಕಂಡವರು. ಕಷ್ಟ, ಬಡತನದಲ್ಲೇ ಬೆಳೆದು ಬಂದಿದ್ದಾರೆ. ಆದ್ದರಿಂದ ಜನರ ಸಮಸ್ಯೆಗಳಿಗೆ ಸರಿಯಾದ ಸ್ಪಂದನೆ ಮಾಡುವವರು. ಆದ್ದರಿಂದ ಅವರನ್ನು ಗೆಲ್ಲಿಸಿಕೊಡಬೇಕು. ಇದಕ್ಕಾಗಿ ಗ್ಯಾರೆಂಟಿ ಯೋಜನೆಗಳನ್ನು ಜನರ ಮನೆ ಬಾಗಿಲಿಗೆ ತಲುಪಿಸಿ. ನೀವೆಲ್ಲಾ ಜನರ ಮನೆಗೆ ಹೋಗಿ, ಮತ ಕೇಳಿದ ಕಾರಣ ನಾನು ಶಾಸಕನಾಗುವಂತಾಯಿತು. ಅದೇ ರೀತಿ ಪದ್ಮರಾಜ್ ಅವರನ್ನು ಅತ್ಯಧಿಕ ಮತದಿಂದ ಗೆಲ್ಲಿಸಿಕೊಡಬೇಕು ಎಂದು ಹೇಳಿದರು.
ಅಭ್ಯರ್ಥಿ ಪದ್ಮರಾಜ್ ಆರ್. ಮಾತನಾಡಿ, ಚುನಾವಣೆ ಎಂದ ಮಾತ್ರಕ್ಕಷ್ಟೇ ಎಲ್ಲಾ ಪ್ರಾರ್ಥನಾಲಯಗಳಿಗೆ ತೆರಳುತ್ತಿಲ್ಲ. ಇತರ ಸಮಯದಲ್ಲೂ ಎಲ್ಲಾ ಪ್ರಾರ್ಥನಾ ಕೇಂದ್ರಗಳಿಗೆ ತೆರಳುವ ಸಂಪ್ರದಾಯ ಬೆಳೆಸಿಕೊಂಡವನು ನಾನು. ಈ ಚುನಾವಣೆಯ ಮೂಲಕ ಎಲ್ಲಾ ಜನರ ಸೇವೆ ಮಾಡುವ ಭಾಗ್ಯ ಸಿಗುವಂತಾಗಲಿ ಎಂದರು.
ಮಸೀದಿ ಸಮಿತಿ ಅಧ್ಯಕ್ಷ ಎಲ್.ಟಿ. ರಝಾಕ್ ಹಾಜಿ ಮಾತನಾಡಿ, ಉತ್ತಮ ಅಭ್ಯರ್ಥಿ ನಮಗೆ ಲಭಿಸಿದ್ದಾರೆ. ಜಾತಿ, ಮತ, ಬೇಧ ನೋಡದೇ ಅವರನ್ನು ಗೆಲ್ಲಿಸಿಕೊಡಬೇಕು ಎಂದರು.
ಚುನಾವಣಾ ಪ್ರಚಾರ ಸಮಿತಿ ಅಧ್ಯಕ್ಷ ಕಾವು ಹೇಮನಾಥ ಶೆಟ್ಟಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಎಂ.ಬಿ. ವಿಶ್ವನಾಥ ರೈ, ಡಾ. ರಾಜಾರಾಮ್, ಕಾರ್ಯದರ್ಶಿ ಯಕೂಬ್ ಖಾನ್, ನೂರುದ್ದೀನ್ ಸಾಲ್ಮಾರ, ಹಸನ್ ಹಾಜಿ, ಶಕೂರ್ ಹಾಜಿ, ಎಂ.ಎಸ್. ಮಹಮ್ಮದ್ ಮೊದಲಾದವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು