11:27 AM Sunday21 - December 2025
ಬ್ರೇಕಿಂಗ್ ನ್ಯೂಸ್
ಗಾಂಧಿ ಭಾರತವನ್ನು ಗೋಡ್ಸೆ ಭಾರತವಾಗಿ ಮಾಡಲು ಬಿಡುವುದಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್ ಟಿಪ್ಪರ್ -ಬೊಲೆರೋ ಜೀಪ್ ಡಿಕ್ಕಿ: ಕರ್ತವ್ಯದಲ್ಲಿ ತೆರಳುತ್ತಿದ್ದ ಬಿಎಸ್ಸೆನ್ನೆಲ್ ಸಿಬ್ಬಂದಿಗಳಿಗೆ ಗಾಯ ಹೌದು…ವೈದ್ಯೋ ನಾರಾಯಣೋ ಹರಿ; ಆದರೆ, ದಾದಿಯರು ಎಲೆ ಮರೆಯ ಕಾಯಿ! ಪೌರ ಕಾರ್ಮಿಕರು ಸೇರಿ ಎಲ್ಲ ಕಾರ್ಮಿಕರಿಗೆ ಪಾಲಿಕೆಯಿಂದಲೇ ನೇರ ವೇತನ ಪಾವತಿಗೆ ಕ್ರಮ:… ಕ್ರೆಡಲ್‌ನಿಂದ ರಾಷ್ಟ್ರೀಯ ಇಂಧನ ಸಂರಕ್ಷಣಾ ದಿನಾಚರಣೆ: ಚಿತ್ರ ಬಿಡಿಸಿದ ಪ್ರೌಢಶಾಲೆ ಮಕ್ಕಳು ಮಡಿಕೇರಿ ಹನಿಟ್ರ್ಯಾಪ್ ಪ್ರಕರಣ: ನಾಪತ್ತೆಯಾಗಿದ್ದ ಮತ್ತಿಬ್ಬರು ಆರೋಪಗಳ ಬಂಧನ Belagavi | ಆರೋಗ್ಯ ಸೇತು-ಸಂಚಾರಿ ಆರೋಗ್ಯ ಘಟಕಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ ವಲಸಿಗರಿಂದ ಅಕ್ರಮ ಚಟುವಟಿಕೆ: ಗಡಿಪಾರಿಗೆ ಸದನದಲ್ಲಿ ಶಾಸಕ ಡಾ. ಮಂತರ್ ಗೌಡ ಆಗ್ರಹ ಉರುಳಿಗೆ ಸಿಲುಕಿ ಹುಲಿ ಸಾವಿನ ಪ್ರಕರಣ: ಆರೋಪಿಗಳ ಪತ್ತೆಗೆ ಅರಣ್ಯ ಇಲಾಖೆ ಕಾರ್ಯಾಚರಣೆ ನಕಲಿ‌ ದಾಖಲೆ ಸೃಷ್ಟಿಸಿ 512 ಎಕರೆ ಅರಣ್ಯ-ಕಂದಾಯ ಭೂಮಿ ಕಬಳಿಕೆ ಯತ್ನ: ಆರೋಪಿ…

ಇತ್ತೀಚಿನ ಸುದ್ದಿ

ನಾನೊಬ್ಬ ಹಿಂದೂ ಎನ್ನಲು ಹೆಮ್ಮೆ ಇದೆ, ನಾನು ಕಲಿತ ಹಿಂದುತ್ವ ಇನ್ನೊಂದು ಜಾತಿ- ಧರ್ಮವನ್ನು ಪ್ರೀತಿಸಿ, ಗೌರವಿಸುವುದು ಆಗಿದೆ: ಪದ್ಮರಾಜ್ ಆರ್.

01/04/2024, 20:23

ಮಂಗಳೂರು(reporterkarnataka.com): ನಾನು ಹಿಂದೂ ಧರ್ಮದಲ್ಲಿ ಹುಟ್ಟಿದವ. ನಾನೊಬ್ಬ ಹಿಂದೂ ಎನ್ನಲು ಹೆಮ್ಮೆ ಇದೆ. ಹಿಂದೂ ಧರ್ಮದ ಆಚರಣೆಯನ್ನು ಮಾಡುತ್ತೇನೆ. ನಾನು ಕಲಿತ ಹಿಂದುತ್ವ ಎಂದರೇ ಇನ್ನೊಂದು ಜಾತಿ- ಧರ್ಮವನ್ನು ಪ್ರೀತಿಸಿ ಗೌರವಿಸುವುದು ಆಗಿದೆ ಎಂದು ದ.ಕ. ಲೋಕಸಭೆ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಹೇಳಿದರು.
ಪುತ್ತೂರಿನಲ್ಲಿ ಮಾಧ್ಯಮ ಜತೆ ಮಾತನಾಡಿದ ಅವರು, ಕಳೆದ 30 ವರ್ಷಗಳಿಂದ ನಾನು ಹಿಂದುವಾದಿಯಾಗಿ ದೇವರ ಕಾರ್ಯವನ್ನು ನಡೆಸುತ್ತಿದ್ದೇನೆ ಎಂದು ನುಡಿದರು.
ನಮ್ಮ ಭಾರತವನ್ನು ಇತರೇ ದೇಶಗಳು ಗೌರವದಿಂದ ಪ್ರೀತಿಯಿಂದ ಕಾಣುತ್ತದೆ. ಯಾಕೆಂದರೆ ಭಾರತ ವಿವಿಧತೆಯಲ್ಲಿ ಏಕತೆ ಕಾಣುವ ರಾಷ್ಟ್ರ. ಸುಸಂಸ್ಕೃತ ದೇಶ, ಇಲ್ಲಿ ವಿವಿಧ ಜಾತಿ- ಧರ್ಮಗಳಿದ್ದರೂ, ಜಾತಿಗೆ ಸೀಮಿತವಾಗಿ ನಾವಿಲ್ಲ. ನಾವೆಲ್ಲರೂ ದೇವರ ಮಕ್ಕಳು ಎಂದು ಅವರು ಅವರು ನುಡಿದರು.
ಪದ್ಮರಾಜ್ ಅವರು ಪುತ್ತೂರಿನಲ್ಲಿ ಕಾಂಗ್ರೆಸ್ ಚುನಾವಣಾ ಪ್ರಚಾರ ಕಚೇರಿ ಸೇರಿದಂತೆ ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡರು.

ಇತ್ತೀಚಿನ ಸುದ್ದಿ

ಜಾಹೀರಾತು