8:57 PM Monday10 - August 2026
ಬ್ರೇಕಿಂಗ್ ನ್ಯೂಸ್
Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ…

ಇತ್ತೀಚಿನ ಸುದ್ದಿ

ನಾನೊಬ್ಬ ಹಿಂದೂ ಎನ್ನಲು ಹೆಮ್ಮೆ ಇದೆ, ನಾನು ಕಲಿತ ಹಿಂದುತ್ವ ಇನ್ನೊಂದು ಜಾತಿ- ಧರ್ಮವನ್ನು ಪ್ರೀತಿಸಿ, ಗೌರವಿಸುವುದು ಆಗಿದೆ: ಪದ್ಮರಾಜ್ ಆರ್.

01/04/2024, 20:23

ಮಂಗಳೂರು(reporterkarnataka.com): ನಾನು ಹಿಂದೂ ಧರ್ಮದಲ್ಲಿ ಹುಟ್ಟಿದವ. ನಾನೊಬ್ಬ ಹಿಂದೂ ಎನ್ನಲು ಹೆಮ್ಮೆ ಇದೆ. ಹಿಂದೂ ಧರ್ಮದ ಆಚರಣೆಯನ್ನು ಮಾಡುತ್ತೇನೆ. ನಾನು ಕಲಿತ ಹಿಂದುತ್ವ ಎಂದರೇ ಇನ್ನೊಂದು ಜಾತಿ- ಧರ್ಮವನ್ನು ಪ್ರೀತಿಸಿ ಗೌರವಿಸುವುದು ಆಗಿದೆ ಎಂದು ದ.ಕ. ಲೋಕಸಭೆ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಹೇಳಿದರು.
ಪುತ್ತೂರಿನಲ್ಲಿ ಮಾಧ್ಯಮ ಜತೆ ಮಾತನಾಡಿದ ಅವರು, ಕಳೆದ 30 ವರ್ಷಗಳಿಂದ ನಾನು ಹಿಂದುವಾದಿಯಾಗಿ ದೇವರ ಕಾರ್ಯವನ್ನು ನಡೆಸುತ್ತಿದ್ದೇನೆ ಎಂದು ನುಡಿದರು.
ನಮ್ಮ ಭಾರತವನ್ನು ಇತರೇ ದೇಶಗಳು ಗೌರವದಿಂದ ಪ್ರೀತಿಯಿಂದ ಕಾಣುತ್ತದೆ. ಯಾಕೆಂದರೆ ಭಾರತ ವಿವಿಧತೆಯಲ್ಲಿ ಏಕತೆ ಕಾಣುವ ರಾಷ್ಟ್ರ. ಸುಸಂಸ್ಕೃತ ದೇಶ, ಇಲ್ಲಿ ವಿವಿಧ ಜಾತಿ- ಧರ್ಮಗಳಿದ್ದರೂ, ಜಾತಿಗೆ ಸೀಮಿತವಾಗಿ ನಾವಿಲ್ಲ. ನಾವೆಲ್ಲರೂ ದೇವರ ಮಕ್ಕಳು ಎಂದು ಅವರು ಅವರು ನುಡಿದರು.
ಪದ್ಮರಾಜ್ ಅವರು ಪುತ್ತೂರಿನಲ್ಲಿ ಕಾಂಗ್ರೆಸ್ ಚುನಾವಣಾ ಪ್ರಚಾರ ಕಚೇರಿ ಸೇರಿದಂತೆ ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡರು.

ಇತ್ತೀಚಿನ ಸುದ್ದಿ

ಜಾಹೀರಾತು