5:46 AM Thursday30 - April 2026
ಬ್ರೇಕಿಂಗ್ ನ್ಯೂಸ್
ಉದ್ಯೋಗ ಖಾತ್ರಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿ ಸಾವು: ಬಿಸಿಲಿನ ತಾಪಮಾನಕ್ಕೆ… ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ತರಲು ಯತ್ನ: ಸಂಡೂರಿನಲ್ಲಿ ಕಾರ್ಮಿಕ ಸಚಿವ… ಬಿಜೆಪಿ ಪಕ್ಷದಿಂದಲೇ ಮಹಿಳೆಯರಿಗೆ ಶೇ. 30ರಷ್ಟು ಮೀಸಲಾತಿ ಪ್ರಕಟಿಸಲಿ: ಸಚಿವ ಸಂತೋಷ್ ಲಾಡ್… Mangaluru | ಕುಕ್ಕರ್‌ ಬಾಂಬ್‌ ಸ್ಫೋಟದ ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಬೇಕಿತ್ತು: ಸಂತ್ರಸ್ತ… ಗಾದಿ ಪೈಪೋಟಿ | ದೆಹಲಿಗೆ ಹೋಗಲು 50 ಶಾಸಕರ ಟಿಕೆಟ್‌ ಬುಕ್ಕಿಂಗ್‌: ಕೇಂದ್ರ… Koppala | ಕುಷ್ಟಗಿಯಲ್ಲಿ ಗುಡುಗು ಸಹಿತ ಮಳೆ: ಸಿಡಿಲು ಬಡಿದು ವ್ಯಕ್ತಿ ಬಲಿ ಕೊಡಗು-ಮೈಸೂರು ರಾಜ್ಯ ಹೆದ್ದಾರಿ ಬಳಿ ಹುಲಿ ದಾಳಿಗೆ ಹಸು ಬಲಿ: ರೊಚ್ಚಿಗೆದ್ದ ಗ್ರಾಮಸ್ಥರಿಂದ… New Delhi | 228 ಪ್ರಯಾಣಿಕರಿದ್ದ ವಿಮಾನದಲ್ಲಿ ಬೆಂಕಿ: ಸ್ವಲ್ಪದರಲ್ಲೇ ತಪ್ಪಿತು ಮತ್ತೊಂದು… ಶಿಕ್ಷಕರೇ ಇಲ್ಲದ ಶಾಲೆಗಳಿಗೆ ಶೇ. 94 ಬಂದಿದ್ದು ಹೇಗೆ? ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ದೊಡ್ಡ… ತಂದೆ ಬೈದ ಕ್ಷುಲ್ಲಕ ಕಾರಣಕ್ಕೆ ಯುವತಿ ಆತ್ಮಹತ್ಯೆಗೆ ಶರಣು

ಇತ್ತೀಚಿನ ಸುದ್ದಿ

ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಏ.3ರಂದು ನಾಮಪತ್ರ ಸಲ್ಲಿಕೆ: ಮಾಜಿ ಸಚಿವ ರಮಾನಾಥವ ರೈ

02/04/2024, 21:04

ಮಂಗಳೂರು(reporterkarnataka.com): ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಏ.3ರಂದು ನಾಮಪತ್ರ ಸಲ್ಲಿಸಲಿದ್ದಾರೆ ಎಂದು ಕ್ಷೇತ್ರದ ಪ್ರಚಾರ ಸಮಿತಿ ಅಧ್ಯಕ್ಷ ಬಿ.ರಮಾನಾಥ ರೈ ಹೇಳಿದರು.
ನಗರದ ಮಲ್ಲಿಕಟ್ಟೆಯಲ್ಲಿರುವ ಕಾಂಗ್ರೆಸ್ ಕಚೇರಿಯಲ್ಲಿ ಸೋಮವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಬೆಳಗ್ಗೆ 9.30ಕ್ಕೆ ಕುದ್ರೋಳಿ ದೇವಸ್ಥಾನದಿಂದ ಮೆರವಣಿಗೆಯಲ್ಲಿ ಹೊರಟು ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ನಾಮಪತ್ರ ಸಲ್ಲಿಸಲಾಗುವುದು. ಕಾಂಗ್ರೆಸ್ ಕಾರ್ಯಕರ್ತರು ಈ ಸಂದರ್ಭ ಭಾಗವಹಿಸುವರು ಎಂದು ತಿಳಿಸಿದರು.
ಕಾಂಗ್ರೆಸ್ ಬಡ, ಹಿಂದುಳಿದ ವರ್ಗದವರ ಪಕ್ಷವಾಗಿದ್ದು, ಸಾಮಾಜಿಕ ನ್ಯಾಯಕ್ಕಾಗಿ ದುಡಿಯುತ್ತಿದೆ. ಕಾಂಗ್ರೆಸ್ ಸಂಸದರ ಕಾಲದಿಂದ ಜಿಲ್ಲೆಯ ಅಭಿವೃದ್ಧಿಯ ಚಿತ್ರಣ ಬದಲಾಗಿದ್ದು, ಮೂರು ದಶಕಗಳಿಂದ ಬಿಜೆಪಿ ಸಂಸದರು ಗೆಲ್ಲುವ ಮೂಲಕ ಯಾವುದೇ ಅಭಿವೃದ್ಧಿಯಾಗಿಲ್ಲ ಎಂದು ಟೀಕಿಸಿದರು.
ಈ ಸಂದರ್ಭ ಮುಡಾ ಮಾಜಿ ಅಧ್ಯಕ್ಷ ಇಬ್ರಾಹಿಂ ಕೊಡಿಜಾಲ್, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮಿಥುನ್ ರೈ, ಕಾರ್ಪೊರೇಟರ್‌ಗಳಾದ ಶಶಿಧರ್ ಹೆಗ್ಡೆ, ನವೀನ್ ಡಿಸೋಜ, ಮಾಜಿ ಮೇಯರ್ ಮಹಾಬಲ ಮಾರ್ಲ, ಪದ್ಮನಾಭ ಕೋಟ್ಯಾನ್, ಟಿ.ಕೆ.ಸುಧೀರ್, ಜಯಶೀಲ ಅಡ್ಯಂತಾಯ ಮತ್ತಿತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು