1:30 PM Saturday5 - July 2025
ಬ್ರೇಕಿಂಗ್ ನ್ಯೂಸ್
ಕಾಂಗ್ರೆಸ್ ಗೆ ಅಧಿಕಾರ, ಆರೆಸ್ಸೆಸ್‌ ಬ್ಯಾನ್‌ ಹಗಲುಗನಸು: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಚಿಕ್ಕಮಗಳೂರು: ಶಾಲೆಗೆ ರಜೆ; ಕೆರೆಯಲ್ಲಿ ಈಜಲು ಹೋದ ಬಾಲಕ ದಾರುಣ ಸಾವು ನಾಪತ್ತೆಯಾಗಿದ್ದ ಕೊಡಗಿನ ಫಾರೆಸ್ಟ್ ಗಾರ್ಡ್ ಶವವಾಗಿ ಪತ್ತೆ: ಸಾವಿನ ಸುತ್ತ ಅನುಮಾನದ ಹುತ್ತ ಭೂ ಸ್ವಾಧೀನ; ಕಾನೂನು ತೊಡಕು ನಿವಾರಿಸಿ ರೈತರ ಸಭೆ: ಮುಖ್ಯಮಂತ್ರಿ ಸಿದ್ದರಾಮಯ್ಯ Virajpete | ಎರಡು ಮಕ್ಕಳ ತಾಯಿಯೊಂದಿಗೆ ಲಿವಿಂಗ್ ರಿಲೇಶನ್ ಶಿಪ್: ಯುವಕ ಆತ್ಮಹತ್ಯೆಗೆ… ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುವ ದಿನ ದೂರವಿಲ್ಲ: ಬೀದರ್ ನಲ್ಲಿ ಸಚಿವೆ ಲಕ್ಷ್ಮೀ… ಕಡೂರು: 6 ದಿನಗಳ ಹುಡುಕಾಟದ ನಂತರವೂ ಸಿಗದ ಫಾರೆಸ್ಟ್ ಗಾರ್ಡ್ ಶರತ್‌ ಸುಳಿವು ಸೋರುತ್ತಿದೆ ಸೂರು; ಕೊಠಡಿ ತುಂಬಾ ನೀರು: ರಾಷ್ಟ್ರಕವಿ ಕುವೆಂಪು ಓದಿದೆ ಶಾಲೆಯ ಕೇಳುವವರೇ… ಮಲೆನಾಡಲ್ಲಿ ಮುಂದುವರಿದ ಮಳೆ: ಶೃಂಗೇರಿಯ ಗಾಂಧಿ ಮೈದಾನದ ರಸ್ತೆಗೆ ನುಗ್ಗಿ ನೆರೆ ನೀರು;… ಮುಖ್ಯಮಂತ್ರಿ ಸ್ಥಾನಕ್ಕೆ ಯಾವುದೇ ಪೈಪೋಟಿಯಿಲ್ಲ: ಸಿಎಂ ಕಾನೂನು ಸಲಹೆಗಾರ ಪೊನ್ನಣ್ಣ

ಇತ್ತೀಚಿನ ಸುದ್ದಿ

ಆದಿ ಚುಂಚನಗಿರಿ ವೈದ್ಯಕೀಯ ವಿದ್ಯಾಲಯದಲ್ಲಿ ಉಪನ್ಯಾಸ ಹಾಗೂ ಸಂವೇದನಾ ಕಾರ್ಯಕ್ರಮ 

14/08/2021, 10:12

ದೇವಲಾಪುರ ಜಗದೀಶ್ ನಾಗಮಂಗಲ ಮಂಡ್ಯ

info.reporterkarnataka@gmail.com

ನಾಗಮಂಗಲ ಬಿ.ಜಿ.ನಗರದ ಆದಿಚುಂಚನಗಿರಿ ವೈದ್ಯಕೀಯ ಮಹಾವಿದ್ಯಾಲಯದ ನ್ಯಾಯ ವೈದ್ಯಶಾಸ್ತ್ರ ವಿಭಾಗದಿಂದ ಒಂದು ದಿನದ ಅತಿಥಿ ಉಪನ್ಯಾಸ ಹಾಗೂ ಸಂವೇದನಾ ಕಾರ್ಯಕ್ರಮ ನಡೆಯಿತು.

ಪ್ರಾಂಶುಪಾಲ ಡಾ. ಎಂ.ಜಿ.ಶಿವರಾಮು ಅವರು ಪ್ರಾಸ್ತವಿಕ ಮಾತನಾಡಿ, ನಾವು ನ್ಯಾಯ, ವೈದ್ಯಶಾಸ್ತ್ರ ವಿಭಾಗದಲ್ಲಿ ವಿಷ ಮಾಹಿತಿ ಕೇಂದ್ರ ಹಾಗೂ ವಿಷ ವಿಶ್ಲೇಷಣಾ ಪ್ರಯೋಗಾಲಯ ಪ್ರಾರಂಭಿಸಿದ್ದೇವೆ. ಇದಕ್ಕೆ ಕೆಲವು ಪ್ರತಿಷ್ಠಿತ ವೈದ್ಯಕೀಯ ಶಿಕ್ಷಣ ಸಂಸ್ಥೆಗಳೇ ನಮಗೆ ಸ್ಪೂರ್ತಿದಾಯಕ ಎಂದು ಹೇಳಿದರು.

ಈ ಕೇಂದ್ರ ಯಶಸ್ವಿಯಾಗಿ ಕಾಯನಿರ್ವಹಿಸಲು ಪ್ರೇರಕವಾಗಿ, ಪೂರಕವಾಗಿ ಹಾಗೂ ಪ್ರೋತ್ಸಾಹಕವಾಗಿ ಸುಸಜ್ಜಿತ ಪ್ರಯೋಗಾಲಯವಿದೆ. ಈ ಅತಿಥಿ ಉಪನ್ಯಾಸ ಹಾಗೂ ಸಂವೇದನಾ ಕಾರ್ಯಕ್ರಮವು ಯಶಸ್ವಿಯಾಗಿ ಇದರ ಪ್ರಯೋಜನ ಎಲ್ಲರಿಗೂ ಲಭಿಸಲಿ ಎಂದು ನುಡಿದರು. 

ನ್ಯಾಯ ವೈದ್ಯಶಾಸ್ತ್ರವಿಭಾಗದ ಸಹ ಪ್ರಾಧ್ಯಾಪಕರಾದ ಡಾ.ಸೋಮಶೇಖರ್ ಸಿ., ಅತಿಥಿ ಉಪನ್ಯಾಸಕರಾದ ಡಾ. ಶಂಕರ್ ಎಂ. ಬಕಣ್ಣನವರ್ ಅವರನ್ನು ಪರಿಚಯಿಸಿದರು. 

ಮಣಿಪಾಲ್ ಉನ್ನತ ಶಿಕ್ಷಣ ಸಂಸ್ಥೆಯ ನ್ಯಾಯ ವೈದ್ಯ ಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ. ಶಂಕರ್ ಎಂ. ಬಕಣ್ಣನವರ್ ತಮ್ಮ ಅತಿಥಿ ಉಪನ್ಯಾಸದಲ್ಲಿ ಚಿಕಿತ್ಸಾ ವಿಷ ಶಾಸ್ತ್ರದಲ್ಲಿ ವಿಷ ಮಾಹಿತಿ ಕೇಂದ್ರ ಹಾಗೂ ವಿಷ ವಿಶ್ಲೇಷಣಾ ಪ್ರಯೋಗಾಲಯ ಜವಾಬ್ದಾರಿ ಹಾಗೂ ಕರ್ತವ್ಯಗಳ ಬಗ್ಗೆ ವಿಶೇಷವಾಗಿ ಉಪನ್ಯಾಸ ನೀಡಿದರು.

ದೇಶದಲ್ಲಿ ವರ್ಷಕ್ಕೆ 50 ಸಾವಿರಕ್ಕೂ ಹೆಚ್ಚು ಜನರು ವಿಷ ಸೇವನೆಯಿಂದ ಸಾವಿಗೀಡಾಗುತ್ತಿದ್ದಾರೆ ಎಂದು ಹೇಳಿದ ಅವರು, ಈ ಕೆಂದ್ರದಿಂದ ವಿಷಸೇವನೆ ಆಗುವುದನ್ನು ತಡೆಗಟ್ಟುವುದು ಹಾಗೂ ವಿಷಸೇವನೆ ಆದವರಿಗೆ ಸರಿಯಾದ ಚಿಕಿತ್ಸೆ ಸಿಗುವಂತಾಗಿ ಗುಣಮುಖರಾಗಬೇಕೆಂದು ತಾರ್ಕಿಕವಾಗಿ ಹೇಳಿದರು.

ಇದೇ ಸಂದರ್ಭದಲ್ಲಿ ಆದಿ ಚುಂಚನಗಿರಿ ವೈದ್ಯಕೀಯ ಮಹಾವಿದ್ಯಾಲಯದ ಬೋಧಕ ವರ್ಗದವರು ಹಾಗೂ ವೈದ್ಯಕೀಯ ವಿದ್ಯಾರ್ಥಿಗಳು ಭಾಗವಹಿಸಿದ್ದರು.

ಕಾರ್ಯಕ್ರಮದ ಗಣ್ಯರನ್ನು ನ್ಯಾಯ ವೈದ್ಯಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ. ಕುಮಾರ್ ಸ್ವಾಗತಿಸಿದರು. ನ್ಯಾಯ ವೈದ್ಯಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಡಾ.ಚಿನ್ಮಯಿ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು