5:27 AM Thursday6 - November 2025
ಬ್ರೇಕಿಂಗ್ ನ್ಯೂಸ್
ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ‘ಬಿಸಿತುಪ್ಪ’ವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ Bangalore | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್… ಸರ್ಕಾರಕ್ಕೆ ಕಾಳಜಿ ಇದ್ದಲ್ಲಿ ಬೆಳೆಗಾರರ ಆಗ್ರಹದಂತೆ ಕಬ್ಬಿಗೆ ದರ ನಿಗದಿಗೊಳಿಸಲಿ, ಪ್ರತಿ ಟನ್… ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ…

ಇತ್ತೀಚಿನ ಸುದ್ದಿ

ಚಾರ್ಮಾಡಿ ಘಾಟ್: ಲಘು ವಾಹನಗಳ ಸಂಚಾರಕ್ಕೆ ಅವಕಾಶ; ಆದರೆ ಷರತ್ತು ಅನ್ವಯ

14/08/2021, 10:12

ಮಂಗಳೂರು(reporterkarnataka.com): ಮಂಗಳೂರು-ತುಮಕೂರು ರಾಷ್ಟ್ರೀಯ ಹೆದ್ದಾರಿ 73ರಲ್ಲಿ ಇದೇ ಆಗಸ್ಟ್ 12 ರಿಂದ ಮುಂದಿನ ಆದೇಶದ ವರೆಗೆ ಕಿ.ಮೀ 75(ಚಾರ್ಮಾಡಿ ಗ್ರಾಮ)ರಿಂದ ಕಿಮೀ 86.20 (ದಕ್ಷಿಣ ಕನ್ನಡ ಜಿಲ್ಲಾ ಗಡಿ) ರವರೆಗಿನ ಚಾರ್ಮಾಡಿ ಘಾಟ್ ರಸ್ತೆಯಲ್ಲಿ ಸಂಜೆ 7 ಗಂಟೆಯಿಂದ ಬೆಳಗ್ಗೆ 6 ಗಂಟೆಯವರೆಗೆ ಲಘು ವಾಹನಗಳ ಸಂಚಾರಕ್ಕೆ ಅನುಮತಿ ನೀಡಲಾಗಿದೆ. 
ಅನುಮತಿ ನೀಡಲಾದ ವಾಹನಗಳ ವರ್ಗೀಕರಣ ಇಂತಿದೆ.
ನಾಲ್ಕು ಚಕ್ರದ ವಾಹನಗಳು, ಟೆಂಪೋ ಟ್ರಾವೆಲರ್ಸ್, ಆಂಬುಲೆನ್ಸ್, ಕಾರು, ಜೀಪು, ವ್ಯಾನ್, ಎಲ್.ಸಿ.ವಿ (ಮಿನಿ ವ್ಯಾನ್) ಹಾಗೂ ದ್ವಿ ಚಕ್ರ ವಾಹನಗಳು ದಿನದ 24 ಗಂಟೆಯೂ ಷರತ್ತಿಗೊಳಪಟ್ಟು ಸಂಚರಿಸಬಹುದು. 
ಸಾರ್ವಜನಿಕರು ಸಂಚರಿಸುವ ಕೆ.ಎಸ್.ಆರ್.ಟಿ.ಸಿ. ಕೆಂಪು ಬಸ್ಸು, ಆರು ಚಕ್ರದ ಲಾರಿಗಳು ಬೆಳಿಗ್ಗೆ 6 ಗಂಟೆಯಿಂದ ಸಂಜೆ 7 ಗಂಟೆಯವರೆಗೆ ಮಾತ್ರ ಸಂಚರಿಸಬಹುದು. 
 ಬುಲೆಟ್ ಟ್ಯಾಂಕರ್ಸ್, ಷಿಪ್ ಕಾರ್ಗೋ ಕಂಟೈನರ್ಸ್ ಹಾಗೂ ಲಾಂಗ್ ಚಾಸೀಸ್ ವಾಹನಗಳು, ಹೆವಿ ಕಮರ್ಷಿಯಲ್ ವೆಹಿಕಲ್ಸ್, ಮಲ್ಟಿ ಎಕ್ಸೆಲ್ ಟ್ರಕ್, ಟ್ರಕ್ ಟ್ರೈಲರ್, ಕೆ.ಎಸ್.ಆರ್.ಟಿ.ಸಿ ರಾಜಹಂಸ ಮತ್ತು ಎಲ್ಲಾ ಬಗೆಯ ಅಧಿಕ ಭಾರದ ಸರಕು ಸಾಗಣೆ ವಾಹನಗಳ ಸಂಚಾರವನ್ನು ದಿನದ 24 ಗಂಟೆಯೂ ನಿರ್ಬಂಧಿಸಲಾಗಿದೆ.
ನಿಬಂಧನೆಗಳು:  ಈ ರಸ್ತೆಯ ಮೂಲಕ ಪ್ರಯಾಣಿಸುವ ಪ್ರಯಾಣಿಕರು ರಸ್ತೆಯ ಇಕ್ಕೆಲಗಳಲ್ಲಿ ವಾಹನ ನಿಲ್ಲಿಸಿ ಜಲಪಾತ ಮತ್ತು ಪ್ರಾಕೃತಿಕ ವೀಕ್ಷಣೆ ಮಾಡಲು ಅವಕಾಶವಿರುವುದಿಲ್ಲ.
ಚಾರ್ಮಾಡಿ ಘಾಟ್ ಪ್ರದೇಶದಲ್ಲಿ ಸದಾ ಇಬ್ಬನಿ ಕವಿದಿರುವ ಪ್ರಯುಕ್ತ ರಾತ್ರಿ ವೇಳೆಯಲ್ಲಿ ವಾಹನಗಳನ್ನು ಸುಗಮ ಸಂಚಾರಕ್ಕೆ ಅನುವು ಮಾಡಿಕೊಡುವುಕ್ಕಾಗಿ ಆರಕ್ಷಕ ಸಿಬ್ಬಂದಿಗಳನ್ನು ನಿಯೋಜಿಸಿ ಪ್ರಯಾಣಿಕರಿಗೆ ಎಚ್ಚರಿಕೆ ನೀಡುವುದು.
ರಸ್ತೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಸರಹದ್ದಿನಲ್ಲಿ ಸುಗಮ ಸಂಚಾರಕ್ಕೆ ಸೂಕ್ತ ಪೊಲೀಸ್ ಗಸ್ತು ವ್ಯವಸ್ಥೆ ಮಾಡುವುದು.
ನಿಭಂದನೆಗಳನ್ನು ಉಲ್ಲಂಘಿಸುವವರ ವಿರುದ್ಧ ಭಾರತೀಯ ದಂಡ ಸಂಹಿತೆ ಸೆಕ್ಷನ್ 188ರ ಅಡಿಯಲ್ಲಿ ಶಿಸ್ತಿನ/ ಕಾನೂನು ಕ್ರಮ ಮತ್ತು ಅನ್ವಯವಾಗಬಹುದಾದ ಇತರೆ ಕಾನೂನು ಉಪಬಂಗಳ ಮೇರೆಗೆ ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾ ದಂಡಾಧಿಕಾರಿಗಳೂ ಆಗಿರುವ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು