5:56 AM Saturday15 - August 2026
ಬ್ರೇಕಿಂಗ್ ನ್ಯೂಸ್
ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ

ಇತ್ತೀಚಿನ ಸುದ್ದಿ

ಸಿಎಂ ತವರಿನಲ್ಲೇ ಚುನಾವಣಾ ಬಹಿಷ್ಕಾರದ ಎಚ್ಚರಿಕೆ: ಪ್ರಚಾರದ ವೇಳೆ ಯತೀಂದ್ರ ಸಿದ್ದರಾಮಯ್ಯರ ತರಾಟೆಗೆ ತೆಗೆದುಕೊಂಡ ಪ್ರತಿಭಟನಾಕಾರರು

08/04/2024, 12:06

*ನಮ್ಮ ಬೇಡಿಕೆ ಈಡೇರದಿದ್ದರೆ ನಮ್ಮ ಮೂರು ಗ್ರಾಮಗಳಲ್ಲಿ ಚುನಾವಣೆ ಬಹಿಷ್ಕರಿಸುವುದಾಗಿ ಎಚ್ಚರಿಕೆ ನೀಡಿದ ನೂರಾರು ಪ್ರತಿಭಟನಾಕಾರರು*

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ಚಾಮರಾಜನಗರ ಲೋಕಸಭಾ ಚುನಾವಣಾ ಹಿನ್ನೆಲೆ ಕಾಂಗ್ರೆಸ್ ಅಭ್ಯರ್ಥಿ ಸುನಿಲ್ ಬೋಸ್ ಪರ ಚುನಾವಣಾ ಪ್ರಚಾರ ಕೈಗೊಂಡಿದ್ದ ಮಾಜಿ ಶಾಸಕ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪುತ್ರ ಡಾ. ಯತೀಂದ್ರ ಸಿದ್ದರಾಮಯ್ಯ ಅವರು ನಂಜನಗೂಡು ತಾಲೂಕು ಮಲ್ಲುಪುರ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಪ್ರಚಾರ ಮುಗಿಸಿ ಅದೇ ಗ್ರಾಮದಲ್ಲಿರುವ ಬಣ್ಣಾರಿ ಅಮ್ಮನ್ ಸಕ್ಕರೆ ಕಾರ್ಖಾನೆಯ ಮುಂಭಾಗ ಕಳೆದ ಎರಡು ತಿಂಗಳುಗಳಿಂದ ತಮ್ಮ ಬೇಡಿಕೆಗಾಗಿ ಅಹೋರಾತ್ರಿ ಧರಣಿ ನಡೆಸುತ್ತಿರುವ ಪ್ರತಿಭಟನಾಕಾರರನ್ನು ಭೇಟಿ ಮಾಡಿದ ಸಂದರ್ಭ ಪ್ರತಿಭಟನಾಕಾರರು ಅವರನ್ನು ತರಾಟೆಗೆ ತೆಗೆದುಕೊಂಡ ಘಟನೆ ನಡೆಯಿತು.


ಪ್ರತಿಭಟನಾಕಾರರನ್ನು ಭೇಟಿ ಮಾಡಿ ಓಲೈಸಲು ಮುಂದಾದ ಯತೀಂದ್ರ ಅವರಿಗೆ ಹಿಗ್ಗಾ ಮಗ್ಗಾ ತರಾಟೆಗೆ ತೆಗೆದುಕೊಂಡ ಪ್ರತಿಭಟನಾಕಾರರು,ಚುನಾವಣೆಗೋಸ್ಕರ ಇಲ್ಲಿಗೆ ಬಂದಿದ್ದೀರಿ. ಇಲ್ಲದಿದ್ದರೆ ನೀವು ಯಾವುದೇ ಕಾರಣಕ್ಕೂ ಬರುತ್ತಿರಲಿಲ್ಲ ಎಂದು ಛೇಡಿಸಿದರು.
ಕಾರ್ಖಾನೆಯವರು ನಮ್ಮ ಮಾತನ್ನು ಕೇಳುತ್ತಿಲ್ಲ. ಇದನ್ನು ನಮ್ಮ ತಂದೆ ಯವರ ಗಮನಕ್ಕೆ ತರುವುದಾಗಿ ಎಂದು ಹೇಳುತ್ತಿದ್ದಂತೆ ಕುಪಿತಗೊಂಡ ಪ್ರತಿಭಟನಾಕಾರರು ಇನ್ನೂ ಈ ವಿಚಾರವನ್ನು ನಿಮ್ಮ ತಂದೆಯವರ ಗಮನಕ್ಕೆ ತಂದಿಲ್ಲವಾ ಎಂದು ಅವರ ವಿರುದ್ಧ ವಾಗ್ದಾಳಿ ನಡೆಸಿದರು.
ಇದನ್ನು ಖಂಡಿಸಿ ನಮ್ಮ ಮೂರು ಗ್ರಾಮಗಳಲ್ಲಿ ಚುನಾವಣೆ ಬಹಿಷ್ಕರಿಸುವುದಾಗಿ ಎಚ್ಚರಿಕೆ ನೀಡಿದರು. ಪ್ರತಿಭಟನಕಾರರ ವಾಗ್ದಾಳಿಗೆ ತತ್ತರಿಸಿದ ಯತೀಂದ್ರ ಸಿದ್ದರಾಮಯ್ಯ ಬಂದ ದಾರಿಗೆ ಸುಂಕವಿಲ್ಲದಂತೆ ಅಲ್ಲಿಂದ ತರಾತುರಿಯಲ್ಲಿ ಕಾಲ್ಕಿತ್ತರು.

ಇತ್ತೀಚಿನ ಸುದ್ದಿ

ಜಾಹೀರಾತು