2:12 PM Saturday12 - September 2026
ಬ್ರೇಕಿಂಗ್ ನ್ಯೂಸ್
ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;…

ಇತ್ತೀಚಿನ ಸುದ್ದಿ

ಜೀರೋ ಟ್ರಾಫಿಕ್ ಗೆ ಬ್ರೇಕ್; ಇನ್ನೇನಿದ್ದರೂ ಜಂಕ್ಷನ್ ಟು ಜಂಕ್ಷನ್ ಕ್ಲಿಯರೆನ್ಸ್  : ಮುಖ್ಯಮಂತ್ರಿ ಸೂಚನೆ

14/08/2021, 19:30

ಬೆಂಗಳೂರು(reporterkarnataka.com): ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ವಿವಿಐಪಿ ಸಂಸ್ಕೃತಿಗೆ ತಿಲಾಂಜಲಿ ಹಾಡಲು ಒಂದೊಂದು ಕ್ರಮ ಕೈಗೊಳ್ಳಲು ಮುಂದಾಗಿದ್ದಾರೆ. ಇದೀಗ ಜೀರೋ ಟ್ರಾಫಿಕ್ ನಿಲ್ಲಿಸುವಂತೆ ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೋದ್ ಅವರಿಗೆ ಸೂಚನೆ ನೀಡಿದ್ದಾರೆ. ಈ ಕುರಿತು ಆದೇಶ ಕೂಡ ಹೊರಬಿದ್ದಿದೆ.

ರಾಜ್ಯದಲ್ಲಿ  ಮುಖ್ಯಮಂತ್ರಿಯವರು ಎಲ್ಲೇ ಪ್ರಯಾಣ ನಡೆಸಿದರೂ ಇನ್ನು ಮುಂದೆ ಜೀರೋ ಟ್ರಾಫಿಕ್ ವ್ಯವಸ್ಥೆ ಇರುವುದಿಲ್ಲ. ಅದರ ಬದಲಿಗೆ ಕೇವಲ ಜಂಕ್ಷನ್ ಟು ಜಂಕ್ಷನ್ ಕ್ಲಿಯರೆನ್ಸ್ ಇರುತ್ತದೆ.

ಸಮಾಜವಾದಿ ಹಿನ್ನೆಲೆಯಿಂದ ಬಂದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮುಖ್ಯಮಂತ್ರಿಯಾಗಿ ಆಯ್ಕೆಯಾದ ತಕ್ಷಣ ತಾನು ಸಾಮಾನ್ಯ ಮನುಷ್ಯನಾಗಿ ಇರಲು ಇಚ್ಚಿಸುತ್ತೇನೆ ಎಂದು ತನ್ನ ಅಭಿಪ್ರಾಯವನ್ನು ಮಾಧ್ಯಮ ಮುಂದೆ ಹೇಳಿದ್ದರು. ರಾಜ್ಯ ಹಾಗೂ ಈ ದೇಶದ ಜನತೆ ಬಯಸುವುದು ಕೂಡ ಇದನ್ನೇ. ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ ತರಹ ಸಿಂಪಲ್ ಸಿಎಂ ಅನ್ನೇ ಜನರು ಲೈಕ್ ಮಾಡುತ್ತಾರೆ.

ಮುಖ್ಯಮಂತ್ರಿ ಬೊಮ್ಮಾಯಿ ಅವರು ಇತ್ತೀಚೆಗೆ ಅವರು ಮಂಗಳೂರಿಗೆ ಆಗಮಿಸಿದಾಗ ಅವರಿಗೆ ಜೀರೋ ಟ್ರಾಫಿಕ್ ಒದಗಿಸಲಾಗಿತ್ತು. ಇದರಿಂದ ಕೊಟ್ಟಾರ ಚೌಕಿಯಿಂದ ಆರಂಭಗೊಂಡು ಕುಳಾಯಿ ವರೆಗೆ ಟ್ರಾಫಿಕ್ ಜಾಮ್ ಉಂಟಾಗಿತ್ತು. ಆ್ಯಂಬುಲೆನ್ಸ್ ಗಳು ಕೂಡ ಇದರಲ್ಲಿ ಸಿಕ್ಕಿ ಹಾಕಿಕೊಂಡಿದ್ದವು.

ಇತ್ತೀಚಿನ ಸುದ್ದಿ

ಜಾಹೀರಾತು