12:38 PM Saturday28 - March 2026
ಬ್ರೇಕಿಂಗ್ ನ್ಯೂಸ್
ಕೇಂದ್ರ ಸರಕಾರವನ್ನು ಟೀಕೆ ಮಾಡುವುದರಲ್ಲೇ 3 ವರ್ಷಗಳ ಕಾಲಹರಣ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ… ಕೈ ನಾಯಕರ ಸಂಧಾನ ಯಶಸ್ವಿ: ದಾವಣಗೆರೆ ದಕ್ಷಿಣ ಬಂಡಾಯ ಅಭ್ಯರ್ಥಿ ಪೈಲ್ವಾನ್ ಸ್ಪರ್ಧೆಯಿಂದ… ಚಿಕ್ಕಮಗಳೂರು: ಬಿಸಿಲ ಧಗೆಗೆ ಹೊತ್ತಿ ಉರಿಯುತ್ತಿರುವ ಮೀಸಲು ಅರಣ್ಯ; ಅಪಾಯದಲ್ಲಿ ಜೀವ ಸಂಕುಲ 1ನೇ ತರಗತಿ ದಾಖಲಾತಿ ವಯೋಮಿತಿಯಲ್ಲಿ 60 ದಿನಗಳ ಸಡಿಲಿಕೆ: ಸಚಿವ ಮಧು ಬಂಗಾರಪ್ಪ… ತುಮಕೂರು | ಮಧ್ಯರಾತ್ರಿ ಕುಡುಕ ಪುಂಡರ ಅಟ್ಟಹಾಸ: 10ಕ್ಕೂ ಅಧಿಕ ವಾಹನಗಳ ಗ್ಲಾಸ್… ರಾಜ್ಯ ಸರ್ಕಾರಕ್ಕೆ ಪ್ರತಿಷ್ಠೆಯಾದ ಉಪ ಚುನಾವಣೆ: ಪೈಲ್ವಾನ್ ಮನವೊಲಿಸಲು ಜಮೀರ್‌ಗೆ ಮುಖ್ಯಮಂತ್ರಿ ಸೂಚನೆ ಮಾಜಿ ಶಾಸಕರ ಪುತ್ರನ ಕೊಲೆ ಪ್ರಕರಣ: ಮಹಿಳೆ ಸೇರಿ ಮೂವರು ಪೊಲೀಸ್ ವಶಕ್ಕೆ ಹೈಕಮಾಂಡ್ ಹೇಳಿದಾಗ ಡಿಕೆಶಿ ಸಿಎಂ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ ಕಾಂಗ್ರೆಸ್ ಮೋಸ ಮಾಡಿದೆ; ನಾಮಪತ್ರ ಹಿಂತೆಗೆಯುವ ಮಾತೇ ಇಲ್ಲ: ತೊಡೆ ತಟ್ಟಿದ ಪೈಲ್ವಾನ್‌ ದಾವಣಗೆರೆ ದಕ್ಷಿಣ: ಬಿಜೆಪಿ ಅಭ್ಯರ್ಥಿಯ ಪತ್ನಿಗೆ ಮುಸ್ಲಿಂ ಮಹಿಳೆಯರಿಂದ ಭವ್ಯ ಸ್ವಾಗತ, ಉಡಿ…

ಇತ್ತೀಚಿನ ಸುದ್ದಿ

ಮಾಜಿ ಮುಖ್ಯಮಂತ್ರಿ, ಕಾಂಗ್ರೆಸ್ ಹಿರಿಯ ನಾಯಕ ವೀರಪ್ಪ ಮೊಯ್ಲಿ ರಾಜಕೀಯ ನಿವೃತ್ತಿ

08/04/2024, 17:37

>strong>ಚಿಕ್ಕಬಳ್ಳಾಪುರ(reporterkarnataka.com): ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಮುಖ್ಯಮಂತ್ರಿ ಎಂ. ವೀರಪ್ಪ ಮೊಯ್ಲಿ ಅವರು ರಾಜಕೀಯ ನಿವೃತ್ತಿ ಘೋಷಿಸಿದ್ದಾರೆ.
ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಿಂದ ಒಂದು ಬಾರಿ ಆಯ್ಕೆಯಾಗಿದ್ದ ಅವರು ಕಳೆದ ಚುನಾವಣೆಯಲ್ಲಿ ಸೋಲು ಕಂಡಿದ್ದರು. ಈ ಬಾರಿಯೂ ಚಿಕ್ಕಬಳ್ಳಾಪುರ ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿದ್ದರು. ಆದರೆ ಹೈಕಮಾಂಡ್ ಅವರಿಗೆ ಟಿಕೆಟ್ ನಿರಾಕರಿಸಿತ್ತು. ಕೊನೆ ಕ್ಷಣದಲ್ಲಿ ಯುವ ನಾಯಕರ ರಕ್ಷಾ ರಾಮಯ್ಯ ಅವರಿಗೆ ಟಿಕೆಟ್ ನೀಡಿತ್ತು. ಇದೀಗ ಮೊಯ್ಲಿ ಅವರು ರಾಜಕೀಯ ನಿವೃತ್ತಿ ಘೋಷಿಸಿದ್ದಾರೆ.
ಅವಿಭಜಿತ ದ.ಕ. ಜಿಲ್ಲೆಯಿಂದ ಆಯ್ಕೆಗೊಂಡ ಮೊದಲ ಮುಖ್ಯಮಂತ್ರಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದ ವೀರಪ್ಪ ಮೊಯ್ಲಿ ಅವರು ಕಾರ್ಕಳ ಕ್ಷೇತ್ರದಿಂದ ಚುನಾವಣಾ ರಾಜಕೀಯ ಆರಂಭಿಸಿದ್ದರು. ಸತತವಾಗಿ ಗೆಲುವು ಕಂಡಿದ್ದ ಅವರು ಕಾರ್ಕಳ ಕ್ಷೇತ್ರವನ್ನು ತನ್ನ ಶಿಷ್ಯ ಗೋಪಾಲ ಭಂಡಾರಿ ಅವರಿಗೆ ಸ್ಪರ್ಧಿಸಲು ಬಿಟ್ಟುಕೊಟ್ಟಿದ್ದರು. ದೇವರಾಜ ಅರಸ್ ಹಾಗೂ ಆರ್. ಗುಂಡೂರಾವ್ ಸಂಪುಟದಲ್ಲಿ ಸಚಿವರಾಗಿದ್ದರು. ನಂತರ ಮುಖ್ಯಮಂತ್ರಿಯಾದರು. ಡಾ.ಮನಮೋಹನ್ ಸಿಂಗ್ ಸಂಪುಟದಲ್ಲಿ ಪೆಟ್ರೋಲಿಯಂ ಸಚಿವರಾಗಿ ಕಾರ್ಯನಿರ್ವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು