5:54 AM Saturday15 - August 2026
ಬ್ರೇಕಿಂಗ್ ನ್ಯೂಸ್
ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ

ಇತ್ತೀಚಿನ ಸುದ್ದಿ

ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಆಪ್ತನ ಭೀಕರ ಕೊಲೆ: 4 ಮಂದಿ ಆರೋಪಿಗಳ ಬಂಧನ; ಜಮೀನು ವಿಷಯದಲ್ಲಿ ನಡೆಯಿತೇ ಹತ್ಯೆ?

09/04/2024, 21:01

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.ಕಂ

ಮಾಜಿ ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಅವರ ಆಪ್ತ, ಕಾಂಗ್ರೆಸ್ ಮುಖಂಡ ಅಣ್ಣಪ್ಪ ನಿಂಬಾಳ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು 4 ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ.


ಅಥಣಿ ತಾಲೂಕಿನ ಖಿಳೆಗಾಂವ ಗ್ರಾಮದ ಅಣ್ಣಪ್ಪ ನಿಂಬಾಳ ಅವರ ಕೊಲೆ ನಡೆದಿತ್ತು. ತನಿಖೆ ಚುರುಕುಗೊಳಿಸಿದ ಖಾಕಿ ಪಡೆ
ನೆರೆಯ ಪಾಂಡೆಗಾಂವ ಗ್ರಾಮದ ವಿಠಲ ಶ್ರವಣಕುಮಾರ ಪೂಜೇರಿ (30) ಶಿರೂರ ಗ್ರಾಮದ ಶಿವಾಜಿ ಲಹು ಹಜಾರೆ (26) ಸುಖದೇವ  ರಘುನಾಥ ಹಜಾರೆ (26) ಸಂತೋಷ ಅವಜಿ ಹೋನಮೋರೆ (24) ಎಂಬವರನ್ನು ಬಂಧಿಸಿದ್ದಾರೆ.
ಕೇವಲ 20 ಗುಂಟೆ ಜಮೀನಿಗಾಗಿ ಪ್ರಭಾವಿ ಕಾಂಗ್ರೆಸ್ ಮುಖಂಡನ ಹತ್ಯೆ ಆಯ್ತಾ ಅನ್ನೋ ಅನುಮಾನ ಕಾಡುತ್ತಿದೆ. ಮಾಜಿ ಡಿಸಿಎಂ ಸವದಿ ಆಪ್ತ ಅಣ್ಣಪ್ಪ ನಿಂಬಾಳ ಭೀಕರ ಹತ್ಯೆಯಿಂದ ಗ್ರಾಮದಲ್ಲಿ ಸ್ಮಶಾನ ಮೌನ ಅವರಿಸಿದ್ದು  ಕೊಲೆಯ ಹಿಂದಿನ ಅಸಲಿ ಸತ್ಯ ತಿಳಿಯಬೇಕಿದೆ.

ಇತ್ತೀಚಿನ ಸುದ್ದಿ

ಜಾಹೀರಾತು