3:04 AM Friday19 - September 2025
ಬ್ರೇಕಿಂಗ್ ನ್ಯೂಸ್
Kodagu | ಕುಶಾಲನಗರ: ಕಾವೇರಿ ನದಿಯಲ್ಲಿ ಮುಳುಗಿ ಕಾಡಾನೆ ದಾರುಣ ಸಾವು ಮಡಿಕೇರಿ ನಗರಸಭೆಯ ಮೇಲೆ ಲೋಕಾಯುಕ್ತ ದಿಢೀರ್ ದಾಳಿ: ಸಾರ್ವಜನಿಕರ ದೂರಿಗೆ ಸ್ಪಂದನೆ ಮೈಸೂರು ದಸರಾ ಉದ್ಘಾಟನೆಗೆ ಬಾನು ಮುಸ್ತಾಕ್: ತಡೆ ಕೋರಿ ಸಲ್ಲಿಸಿದ ಅರ್ಜಿ ಸುಪ್ರೀಂಕೋರ್ಟ್… ಪಂಚ ಗ್ಯಾರಂಟಿ ಯೋಜನೆಗಳಿಗೆ 98 ಸಾವಿರ ಕೋಟಿ; ಅಭಿವೃದ್ಧಿಗೆ 8 ಸಾವಿರ ಕೋಟಿ:… New Delhi | ಕಾಂಗ್ರೆಸ್ ಸರಕಾರದ ಪಂಚೇಂದ್ರಿಯಗಳು ನಿಷ್ಕ್ರಿಯವಾಗಿವೆ: ಕೇಂದ್ರ ಸಚಿವ ಕುಮಾರಸ್ವಾಮಿ… Bangaluru | ರೈತ ಮುಖಂಡರ ನಿಯೋಗ ಸಿಎಂ ಸಿದ್ದರಾಮಯ್ಯ ಭೇಟಿ: ರೈತರ ಸಮಸ್ಯೆ… ಕೃಷ್ಣಾ ಮೇಲ್ದಂಡೆ ಯೋಜನೆ: ಮುಳುಗಡೆ ರೈತರ ನೀರಾವರಿ ಜಮೀನಿಗೆ 40 ಲಕ್ಷ, ಒಣಭೂಮಿಗೆ… Belagavi | ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಬಡ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೂ ಸ್ವಾಧೀನ ಪ್ರಕ್ರಿಯೆ ಅಕ್ರಮ ಕೂಡಲೇ ಕೈಬಿಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹ ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.…

ಇತ್ತೀಚಿನ ಸುದ್ದಿ

ಪ್ರಧಾನಿ ಮೋದಿ ರೋಡ್‌ ಶೋ: 14ರಂದು ಸಂಜೆ 5 ಗಂಟೆಗೆ ನಾರಾಯಣ ಗುರು ವೃತ್ತದಿಂದ ಆರಂಭ; ಸಾರ್ವಜನಿಕ ಸಮಾವೇಶ ಇಲ್ಲ

10/04/2024, 20:45

ಮಂಗಳೂರು(reporterkarnataka.com): ಮಂಗಳೂರಿನಲ್ಲಿ ಏಪ್ರಿಲ್ 14ರಂದು ಪ್ರಧಾನಿ ನರೇಂದ್ರ ಮೋದಿ ಅವರ ಸಾರ್ವಜನಿಕ ಸಮಾವೇಶದ ಬದಲು ಸಂಜೆ 5 ಗಂಟೆಗೆ ಬೃಹತ್ ರೋಡ್‌ಶೋ ನಡೆಸಲು ತೀರ್ಮಾನಿಸಲಾಗಿದೆ ಎಂದು ದ.ಕ. ಜಿಲ್ಲಾ ಬಿಜೆಪಿ ಅಧ್ಯಕ್ಷ ಸತೀಶ್ ಕುಂಪಲ ಹೇಳಿದರು.
ಏ. 14ಕ್ಕೆ ಸಂಜೆ 5 ಗಂಟೆಗೆ ನಾರಾಯಣ ಗುರು ವೃತ್ತದಿಂದ ಆರಂಭಿಸಿ ಪಿವಿಎಸ್‌ ವೃತ್ತದ ಮೂಲಕ ಹಂಪನಕಟ್ಟೆ ಸಿಗ್ನಲ್‌ ತನಕ ಪ್ರಧಾನಿ ನರೇಂದ್ರ ಮೋದಿ ಅವರ ಬೃಹತ್ ರೋಡ್‌ ಶೋ ನಡೆಸುವುದೆಂದು ತೀರ್ಮಾನಿಸಿದ್ದೇವೆ. ಅದಕ್ಕಾಗಿ ಅಗತ್ಯ ಅನುಮತಿಗಳನ್ನು ಪಡೆಯಲಾಗಿದ್ದು, ಭದ್ರತೆಗಾಗಿ ಪೊಲೀಸ್ ಇಲಾಖೆಯ ಜತೆಗೆ ಸಂವಹನ ನಡೆಸಲಾಗಿದೆ ಎಂದು ಅವರು ತಿಳಿಸಿದರು.
ಈ ಕಾರ್ಯಕ್ರಮದಲ್ಲಿ ಜಿಲ್ಲೆಯ ಬೇರೆ ಬೇರೆ ಭಾಗಗಳಿಂದ ಕಾರ್ಯಕರ್ತರು, ಬೆಂಬಲಿಗರು ಬಹು ದೊಡ್ಡ ಸಂಖ್ಯೆಯಲ್ಲಿ ಭಾಗವಹಿಸುತ್ತಾರೆ. ಮಂಗಳೂರು ದಕ್ಷಿಣ, ಮಂಗಳೂರು ಉತ್ತರ, ಮೂಡುಬಿದಿರೆ, ಮಂಗಳೂರು ವಿಧಾನಸಭಾ ಕ್ಷೇತ್ರಗಳಿಂದ ಹೆಚ್ಚು ಕಾರ್ಯಕರ್ತರನ್ನು ಸೇರಿಸುವ ಯೋಜನೆ ಮಾಡಲಾಗಿದೆ. ಬೂತ್ ಮಟ್ಟದ ಪಕ್ಷದ ಕಾರ್ಯಗಳು ಪ್ರಗತಿಯಲ್ಲಿರುವ ಕಾರಣ ಉಳಿದ ನಾಲ್ಕು ಕ್ಷೇತ್ರಗಳಿಗೆ ಈ ವಿಷಯದಲ್ಲಿ ಹೆಚ್ಚಿನ ಗುರಿ ನಿಗದಿ ಮಾಡಿಲ್ಲ. ಈ ಭಾಗಗಳಿಂದಲೂ ಬಿಜೆಪಿ ಹಿತೈಷಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಮಾಡಲಾಗುವುದು ಎಂದು ಜಿಲ್ಲಾ ಅಧ್ಯಕ್ಷರು ತಿಳಿಸಿದರು.

ಪ್ರಧಾನಿ ಮೋದಿ ಅವರ ಕಾರ್ಯಕ್ರಮದಲ್ಲಿ ಜಿಲ್ಲೆಯ ಎಲ್ಲಾ ಶಾಸಕರು, ಜಿಲ್ಲೆಯ ಎಲ್ಲಾ ಮುಖಂಡರು, ರಾಜ್ಯ ನಾಯಕರು, ಪದಾಧಿಕಾರಿಗಳು, ಹಿತೈಷಿಗಳು ಭಾಗವಹಿಸುತ್ತಾರೆ. ಪಕ್ಷದ ರಾಜ್ಯ ಚುನಾವಣಾ ಸಂಚಾಲಕರಾದ ಜಗದೀಶ್ ಹಿರೇಮನಿಯವರು ಈಗಾಗಲೇ ನಮ್ಮ ಜತೆಗಿದ್ದಾರೆ. ಪ್ರಧಾನಿ ಮೋದಿ ಅವರ ಕಾರ್ಯಕ್ರಮದ ವಿವಿಧ ಜವಾಬ್ದಾರಿಗಳನ್ನು ಹಂಚುವ ಮೂಲಕ ಮೋದಿ ಅವರಿಗೆ ಹೃತ್ಪೂರ್ವಕ ಸ್ವಾಗತ ಕೋರಲು ಸಿದ್ಧತೆ ನಡೆದಿದೆ. ಒಟ್ಟು 2ರಿಂದ 2.5 ಕಿ.ಮೀ ಉದ್ದಕ್ಕೆ ರೋಡ್‌ ಶೋ ನಡೆಯಲಿದೆ ಎಂದು ಸತೀಶ್ ಕುಂಪಲ ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ರಾಜ್ಯ ಚುನಾವಣಾ ಸಂಚಾಲಕ ಜಗದೀಶ್ ಹಿರೇಮನಿ, ಜಿಲ್ಲಾ ಚುನಾವಣಾ ಸಂಚಾಲಕ ನಿತಿನ್ ಕುಮಾರ್, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಪ್ರೇಮಾನಂದ ಶೆಟ್ಟಿ, ಯತೀಶ್ ಆರ್ವಾರ, ಬಂಟ್ವಾಳ ಕ್ಷೇತ್ರದ ಚುನಾವಣಾ ಉಸ್ತುವಾರಿ ಜಗದೀಶ್ ಶೇಣವ, ಮಾಜಿ ಜಿಲ್ಲಾಧ್ಯಕ್ಷರಾದ ಸುದರ್ಶನ ಮೂಡುಬಿದ್ರೆ, ಹಾಗೂ ಕಸ್ತೂರಿ ಪಂಜ ಅವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು