9:35 PM Thursday26 - March 2026
ಬ್ರೇಕಿಂಗ್ ನ್ಯೂಸ್
ತುಮಕೂರು | ಮಧ್ಯರಾತ್ರಿ ಕುಡುಕ ಪುಂಡರ ಅಟ್ಟಹಾಸ: 10ಕ್ಕೂ ಅಧಿಕ ವಾಹನಗಳ ಗ್ಲಾಸ್… ರಾಜ್ಯ ಸರ್ಕಾರಕ್ಕೆ ಪ್ರತಿಷ್ಠೆಯಾದ ಉಪ ಚುನಾವಣೆ: ಪೈಲ್ವಾನ್ ಮನವೊಲಿಸಲು ಜಮೀರ್‌ಗೆ ಮುಖ್ಯಮಂತ್ರಿ ಸೂಚನೆ ಮಾಜಿ ಶಾಸಕರ ಪುತ್ರನ ಕೊಲೆ ಪ್ರಕರಣ: ಮಹಿಳೆ ಸೇರಿ ಮೂವರು ಪೊಲೀಸ್ ವಶಕ್ಕೆ ಹೈಕಮಾಂಡ್ ಹೇಳಿದಾಗ ಡಿಕೆಶಿ ಸಿಎಂ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ ಕಾಂಗ್ರೆಸ್ ಮೋಸ ಮಾಡಿದೆ; ನಾಮಪತ್ರ ಹಿಂತೆಗೆಯುವ ಮಾತೇ ಇಲ್ಲ: ತೊಡೆ ತಟ್ಟಿದ ಪೈಲ್ವಾನ್‌ ದಾವಣಗೆರೆ ದಕ್ಷಿಣ: ಬಿಜೆಪಿ ಅಭ್ಯರ್ಥಿಯ ಪತ್ನಿಗೆ ಮುಸ್ಲಿಂ ಮಹಿಳೆಯರಿಂದ ಭವ್ಯ ಸ್ವಾಗತ, ಉಡಿ… ಲ್ಯಾಂಬೊರ್ಗಿನಿ ಕಾರು ಗಿರಿಗಿಟ್ಲೆ ಹೊಡೆಸಿದ ಪ್ರಕರಣ: ಮುತ್ತಪ್ಪ ರೈ ಪುತ್ರ ರಿಕ್ಕಿ ರೈ,… ಮತ್ತೆ ಬಾಬಾ ಬುಡನ್ ಗಿರಿ ದತ್ತಪೀಠ ವಿವಾದ: ಪೂಜಾ-ವಿಧಿ ವಿಧಾನದ ವಿಚಾರದಲ್ಲಿ ಮುಸ್ಲಿಮರ… ದಾವಣಗೆರೆ ದಕ್ಷಿಣ ಬಿಜೆಪಿ ಅಭ್ಯರ್ಥಿ ನಾಮಪತ್ರ ಸಲ್ಲಿಕೆ: ಯಡಿಯೂರಪ್ಪ ನೇತೃತ್ವದಲ್ಲಿ ಬೃಹತ್‌ ರೋಡ್‌… ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣ: ಮರುತನಿಖೆ ಕೋರಿ ಸಲ್ಲಿಸಿದ ಮೇಲ್ಮನವಿ ಸುಪ್ರೀಂ ಕೋರ್ಟ್…

ಇತ್ತೀಚಿನ ಸುದ್ದಿ

ದ.ಕ. ಲೋಕಸಭೆ ಕ್ಷೇತ್ರ: 3 ದಶಕಗಳ ಬಿಜೆಪಿ ನಾಗಾಲೋಟಕ್ಕೆ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಬ್ರೇಕ್; ತೀವ್ರ ಸ್ಪರ್ಧೆ

11/04/2024, 12:09

ಮಂಗಳೂರು(reporterkarnataka.com): ಕೆಲವೇ ದಿನಗಳಲ್ಲಿ ನಡೆಯಲಿರುವ ಲೋಕಸಭಾ ಚುನಾವಣೆಗೆ ಎರಡು ಪ್ರಮುಖ ರಾಜಕೀಯ ಪಕ್ಷಗಳು ತೀವ್ರ ಹಣಾಹಣಿಯಲ್ಲಿ ತೊಡಗಿವೆ. ದಕ್ಷಿಣ ಕನ್ನಡ ಲೋಕಸಭೆ ಕ್ಷೇತ್ರದಲ್ಲಿ ಚುನಾವಣಾ ರಂಗ ರಂಗೇರಲಾರಂಭಿಸಿದೆ. ಆರೋಪ- ಪ್ರತ್ಯಾರೋಪ, ಪ್ರಚಾರ- ಅಪಪ್ರಚಾರ ಎಲ್ಲ ಶುರುವಾಗಿದೆ. ಕಳೆದ 3 ದಶಕಗಳ ಬಿಜೆಪಿ ನಾಗಾಲೋಟಕ್ಕೆ ಬ್ರೇಕ್ ಬಿದ್ದಿದೆ.
ದಕ್ಷಿಣ ಕನ್ನಡ ಲೋಕಸಭೆ ಕ್ಷೇತ್ರ ಕಳೆದ 35 ವರ್ಷಗಳಿಂದ ಬಿಜೆಪಿ ತೆಕ್ಕೆಯಲ್ಲಿದೆ. ಕೇಂದ್ರ ಮಾಜಿ ಸಚಿವ ಬಿ. ಜನಾರ್ದನ ಪೂಜಾರಿ ಅವರನ್ನು ವಿ. ಧನಂಜಯ ಕುಮಾರ್ ಅವರು ಪ್ರಥಮ ಬಾರಿಗೆ ಸೋಲಿಸುವ ಮೂಲಕ ಇಲ್ಲಿ ಬಿಜೆಪಿ ಅಧ್ಯಾಯ ಆರಂಭವಾಗಿತ್ತು. ಧನಂಜಯ ಕುಮಾರ್ ಅವರು ಎರಡು ಬಾರಿ ಸಂಸದರಾದ ಬಳಿಕ ಡಿ.ವಿ. ಸದಾನಂದ ಗೌಡ, ನಳಿನ್ ಕುಮಾರ್ ಕಟೀಲ್ ಅವರು ಇಲ್ಲಿಂದ ಸತತವಾಗಿ ನಿರಾಯಸದಿಂದ ಆಯ್ಕೆಯಾಗುತ್ತಿದ್ದರು. ಕಾರಣ ಹಿಂದುತ್ವ ಎನ್ನುವ ಮಾಂತ್ರಿಕ ಪದ. ಆದರೆ ಈ ಭಾರೀ ಚಿತ್ರಣ ಬದಲಾಗಿದೆ. ಕೆಪಿಸಿಸಿ ಹಾಗೂ ಕಾಂಗ್ರೆಸ್ ಹೈಕಮಾಂಡ್ ಅಳೆದು ತೂಗಿ ಅಭ್ಯರ್ಥಿಯನ್ನು ಆಯ್ಕೆ ಮಾಡಿದೆ. ಅವರೇ ಮಂಗಳೂರಿನ ಯುವ ನ್ಯಾಯವಾದಿ, ಗುರು ಬೆಳದಿಂಗಳು ರುವಾರಿ, ಸರ್ವ ಧರ್ಮವನ್ನು ಗೌರವಿಸುವ ಪದ್ಮರಾಜ್ ಆರ್. ಪೂಜಾರಿ. ಕೇಂದ್ರ ಮಾಜಿ ಸಚಿವ ಬಿ. ಜನಾರ್ದನ ಪೂಜಾರಿ ಅವರ ಗರಡಿಯಲ್ಲಿ ಪಳಗಿರುವ ಪದ್ಮರಾಜ್ ಅವರು ಕಾಂಗ್ರೆಸ್ ನಿಂದ ಪ್ರಬಲ ಅಭ್ಯರ್ಥಿಯಾಗಿ ಹೊರಹೊಮ್ಮಿದ್ದಾರೆ. ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಸೌಹಾರ್ದತೆಯ ಬದುಕಿಗೆ ಪ್ರಾಮುಖ್ಯತೆ ನೀಡುವ ಅವರು ಇನ್ನೊಂದು ಧರ್ಮಕ್ಕೆ ಗೌರವ ನೀಡುವ ಪರ ಧರ್ಮ ಸಹಿಷ್ಣುತೆಯನ್ನು ಬೋಧಿಸುವ
ಹಿಂದೂ ಧರ್ಮದ ಪ್ರತೀಕವಾಗಿ ಹೊರಹೊಮ್ಮಿದ್ದಾರೆ. ಕುದ್ರೋಳಿ ದೇವಾಲಯದಲ್ಲಿ ಕಳೆದ 28 ವರ್ಷಗಳಿಂದ ಗೋಕರ್ಣನಾಥನ ಸೇವೆಯಲ್ಲಿ ತನ್ನನ್ನು ತೊಡಗಿಸಿಕೊಳ್ಳುವ ಮೂಲಕ ಹಿಂದೂ ಧರ್ವದ ಸೇವೆಗೆ ಹೊಸ ವ್ಯಾಖ್ಯಾನ ಬರೆದಿದ್ದಾರೆ. ಈ ಎಲ್ಲ ಸಕರಾತ್ಮಕ ಅಂಶಗಳ ಮೂಲಕ ದ.ಕ. ಲೋಕಸಭೆ ಕ್ಷೇತ್ರದಲ್ಲಿ ಕಳೆದ 35 ವರ್ಷಗಳ ಬಿಜೆಪಿ ನಾಗಾಲೋಟಕ್ಕೆ ಬ್ರೇಕ್ ಹಾಕಿದ್ದಾರೆ ಎಂದು ರಾಜಕೀಯ ಪಂಡಿತರು ವಿಶ್ಲೇಷಣೆ ಮಾಡುತ್ತಾರೆ. ಹಿಂದುತ್ವದ ಪದ ಬಳಸಿ ಪ್ರತಿ ಬಾರಿ ವಿಜಯ ಪತಾಕೆ ಹಾರಿಸುವ ಬಿಜೆಪಿಗೆ ಪದ್ಮರಾಜ್ ಅವರು ಟಕ್ಕರ್ ನೀಡಿದ್ದಾರೆ. ಕಳೆದ 3 ದಶಕದಲ್ಲೇ ಮೊದಲ ಬಾರಿಗೆ ಇಲ್ಲಿ ಬಿಜೆಪಿ ಜಂಘಾಬಲ ಕಗ್ಗಿಹೋಗಿದೆ. ಪ್ರಧಾನಿ ನರೇಂದ್ರ ಮೋದಿ ಅವರನ್ನು ಕರೆಸಿ, ಪ್ರಚಾರ ನಡೆಸುವುದು ಬಿಜೆಪಿ ಅನಿವಾರ್ಯವಾಗಿದೆ. ಆದರೆ ಈ ವಿಷಯದಲ್ಲಿಯೂ ಬಿಜೆಪಿಗೆ ದೊಡ್ಡ ಆಘಾತ ಎದುರಾಗಿದೆ. ಮಂಗಳೂರಿನ ಬಂಗ್ರ ಕೂಳೂರಿನಲ್ಲಿ ನಡೆಯಬೇಕಿದ್ದ ಪ್ರಧಾನಿಯವರ ಸಾರ್ವಜನಿಕ ಸಭೆ ಕೊನೆಯ ಕ್ಷಣದಲ್ಲಿ ರದ್ದಾಗಿದೆ. ಮಂಗಳೂರಿನಲ್ಲಿ ಮೋದಿ ಅವರ ರೋಡ್ ಶೋ ಮಾತ್ರ ನಡೆಯಲಿದೆ. ಮೈಸೂರಿನಲ್ಲಿ ಒಡೆಯರ್ ಪರವಾಗಿ ಸಾರ್ವಜನಿಕ ಸಭೆ ನಡೆಯಲಿದೆ. ಇದೆಲ್ಲ ಒಂದು ರೀತಿಯಲ್ಲಿ ಇಲ್ಲಿ ಕಾಂಗ್ರೆಸ್ ಗೆ ಪೂರಕ ವಾತಾವರಣ ನಿರ್ಮಿಸಲಿದೆ ಎನ್ನಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು