10:23 AM Friday4 - July 2025
ಬ್ರೇಕಿಂಗ್ ನ್ಯೂಸ್
ಕಡೂರು: 6 ದಿನಗಳ ಹುಡುಕಾಟದ ನಂತರವೂ ಸಿಗದ ಫಾರೆಸ್ಟ್ ಗಾರ್ಡ್ ಶರತ್‌ ಸುಳಿವು ಸೋರುತ್ತಿದೆ ಸೂರು; ಕೊಠಡಿ ತುಂಬಾ ನೀರು: ರಾಷ್ಟ್ರಕವಿ ಕುವೆಂಪು ಓದಿದೆ ಶಾಲೆಯ ಕೇಳುವವರೇ… ಮಲೆನಾಡಲ್ಲಿ ಮುಂದುವರಿದ ಮಳೆ: ಶೃಂಗೇರಿಯ ಗಾಂಧಿ ಮೈದಾನದ ರಸ್ತೆಗೆ ನುಗ್ಗಿ ನೆರೆ ನೀರು;… ಮುಖ್ಯಮಂತ್ರಿ ಸ್ಥಾನಕ್ಕೆ ಯಾವುದೇ ಪೈಪೋಟಿಯಿಲ್ಲ: ಸಿಎಂ ಕಾನೂನು ಸಲಹೆಗಾರ ಪೊನ್ನಣ್ಣ Accident | ಸುರತ್ಕಲ್ ಬಳಿ ಎರಡು ಖಾಸಗಿ ಬಸ್ಸುಗಳು ಮುಖಾಮುಖಿ ಡಿಕ್ಕಿ: 28… Chikkaballapura | ರಾಜ್ಯ ಸಚಿವ ಸಂಪುಟ ಸಭೆ: ಮುಖ್ಯಮಂತ್ರಿ ಘೋಷಿಸಿದ ಯೋಜನೆ, ತೀರ್ಮಾನಗಳೇನು? JDS Protest | ರಾಜ್ಯದಲ್ಲಿ ಆರ್ಥಿಕ ಅರಾಜಕತೆ: ಬೆಂಗಳೂರು ಪ್ರತಿಭಟನೆಯಲ್ಲಿ ಜೆಡಿಎಸ್ ಆರೋಪ Dharwad | ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ: ಕಾರ್ಮಿಕ… ಬೆಂಗಳೂರು ಕಾಲ್ತುಳಿತದ ಪ್ರಕರಣ; ಸಿಎಟಿ ಆದೇಶ ವಿರುದ್ಧ ಮೇಲ್ಮನವಿ ಸಲ್ಲಿಸಲು ಅವಕಾಶವಿದೆ: ಮುಖ್ಯಮಂತ್ರಿ Karnataka CM | ಮಾಧ್ಯಮಗಳು ನನ್ನನ್ನೂ ಸೇರಿ ಅಧಿಕಾರಸ್ಥರ ಓಲೈಕೆ ಮಾಡಬಾರದು: ಮುಖ್ಯಮಂತ್ರಿ…

ಇತ್ತೀಚಿನ ಸುದ್ದಿ

ಫುಲ್ ಗಾಸ್ಪೆಲ್ ಪಾಸ್ಟರ್ಸ್ ಫೆಲೋಶಿಪ್’ನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಗೆಲುವಿಗಾಗಿ ವಿಶೇಷ ಪ್ರಾರ್ಥನೆ

11/04/2024, 16:12

ಮಂಗಳೂರು(reporterkarnataka.com): ದಕ್ಷಿಣ ಕನ್ನಡ ಸಾಮರಸ್ಯದ ಜೀವನವನ್ನು ಎದುರು ನೋಡುತ್ತಿದೆ. ಇದರಿಂದ ನಮ್ಮ ಜಿಲ್ಲೆಯಲ್ಲೇ ಉದ್ಯೋಗ ಸೃಷ್ಟಿ ಸಾಧ್ಯ ಎಂದು ದ.ಕ. ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ ಹೇಳಿದರು.
ಬಲ್ಮಠದ ದಕ್ಷಿಣ ಕನ್ನಡ ಫುಲ್ ಗಾಸ್ಪೆಲ್ ಪಾಸ್ಟರ್ಸ್ ಫೆಲೋಶಿಪ್ ನಲ್ಲಿ ಅವರು ಮಾತನಾಡಿದರು.


ದಕ್ಷಿಣ ಕನ್ನಡದಲ್ಲಿ ಪ್ರೀತಿ ಹಂಚುವ ಕಾಯಕ ಕಡಿಮೆಯಾಗಿದೆ. ದ್ವೇಷಮಯ ವಾತಾವರಣವನ್ನು ಸೃಷ್ಟಿಸಲಾಗಿದೆ. ಇದರಿಂದ ಜಿಲ್ಲೆಗೆ ಕೋಮುವಾದಿ ಹಣೆಪಟ್ಟಿ ಬಂದಿದೆ. ಇದನ್ನು ತೊಡೆದು ಹಾಕದೇ, ಉದ್ಯೋಗ ಸೃಷ್ಟಿ ಅಸಾಧ್ಯ. ಆದರೆ ಇಲ್ಲೇ ಉದ್ಯೋಗ ಸೃಷ್ಟಿಯಾಗಬೇಕು ಎನ್ನುವುದು ಎಷ್ಟೋ ಹೆತ್ತವರ, ಪೋಷಕರ ಕನಸು. ನಮ್ಮ ಮನೆಯ ಮಕ್ಕಳು ಉದ್ಯೋಗವನ್ನರಸಿ, ಬೇರೆ ಊರುಗಳಿಗೆ ಹೋಗುವಂತಾಗಬಾರದು. ತಮ್ಮ ತಂದೆ – ತಾಯಿಯ ಜೊತೆ ನಮ್ಮ ಊರಿನಲ್ಲೇ ಉಳಿಯಬೇಕು ಎಂದರು.
ಇದೇ ಸಂದರ್ಭ ಪದ್ಮರಾಜ್ ಆರ್. ಪೂಜಾರಿ ಅವರ ಗೆಲುವಿಗಾಗಿ ವಿಶೇಷ ಪ್ರಾರ್ಥನೆ ಸಲ್ಲಿಸಲಾಯಿತು. ಸಂಸ್ಥೆಯ ಮುಖ್ಯಸ್ಥ ಐವನ್ ಮೊಂತೆರೋ ಪ್ರಾರ್ಥಿಸಿದರು.
ಸಂಸ್ಥೆಯ ಅಧ್ಯಕ್ಷ ಡೊನಾಲ್ಡ್ ಪಿ. ಮಿನೇಜಸ್, ಮಾಜಿ ಮೇಯರ್ ಶಶಿಧರ್ ಹೆಗ್ಡೆ, ಗಿರೀಶ್ ಆಳ್ವ ಮೊದಲಾದವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು