5:30 PM Wednesday29 - April 2026
ಬ್ರೇಕಿಂಗ್ ನ್ಯೂಸ್
ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ತರಲು ಯತ್ನ: ಸಂಡೂರಿನಲ್ಲಿ ಕಾರ್ಮಿಕ ಸಚಿವ… ಬಿಜೆಪಿ ಪಕ್ಷದಿಂದಲೇ ಮಹಿಳೆಯರಿಗೆ ಶೇ. 30ರಷ್ಟು ಮೀಸಲಾತಿ ಪ್ರಕಟಿಸಲಿ: ಸಚಿವ ಸಂತೋಷ್ ಲಾಡ್… Mangaluru | ಕುಕ್ಕರ್‌ ಬಾಂಬ್‌ ಸ್ಫೋಟದ ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಬೇಕಿತ್ತು: ಸಂತ್ರಸ್ತ… ಗಾದಿ ಪೈಪೋಟಿ | ದೆಹಲಿಗೆ ಹೋಗಲು 50 ಶಾಸಕರ ಟಿಕೆಟ್‌ ಬುಕ್ಕಿಂಗ್‌: ಕೇಂದ್ರ… Koppala | ಕುಷ್ಟಗಿಯಲ್ಲಿ ಗುಡುಗು ಸಹಿತ ಮಳೆ: ಸಿಡಿಲು ಬಡಿದು ವ್ಯಕ್ತಿ ಬಲಿ ಕೊಡಗು-ಮೈಸೂರು ರಾಜ್ಯ ಹೆದ್ದಾರಿ ಬಳಿ ಹುಲಿ ದಾಳಿಗೆ ಹಸು ಬಲಿ: ರೊಚ್ಚಿಗೆದ್ದ ಗ್ರಾಮಸ್ಥರಿಂದ… New Delhi | 228 ಪ್ರಯಾಣಿಕರಿದ್ದ ವಿಮಾನದಲ್ಲಿ ಬೆಂಕಿ: ಸ್ವಲ್ಪದರಲ್ಲೇ ತಪ್ಪಿತು ಮತ್ತೊಂದು… ಶಿಕ್ಷಕರೇ ಇಲ್ಲದ ಶಾಲೆಗಳಿಗೆ ಶೇ. 94 ಬಂದಿದ್ದು ಹೇಗೆ? ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ದೊಡ್ಡ… ತಂದೆ ಬೈದ ಕ್ಷುಲ್ಲಕ ಕಾರಣಕ್ಕೆ ಯುವತಿ ಆತ್ಮಹತ್ಯೆಗೆ ಶರಣು ಬಳ್ಳಾರಿ | ಪೊಲೀಸ್ ಶ್ವಾನಗಳ ಬಗ್ಗೆ ವಿಶೇಷ ಕಾಳಜಿ: ತಂಪಿಗಾಗಿ ಕೂಲರ್; ಕುಡಿಯಲು…

ಇತ್ತೀಚಿನ ಸುದ್ದಿ

ಫುಲ್ ಗಾಸ್ಪೆಲ್ ಪಾಸ್ಟರ್ಸ್ ಫೆಲೋಶಿಪ್’ನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಗೆಲುವಿಗಾಗಿ ವಿಶೇಷ ಪ್ರಾರ್ಥನೆ

11/04/2024, 16:12

ಮಂಗಳೂರು(reporterkarnataka.com): ದಕ್ಷಿಣ ಕನ್ನಡ ಸಾಮರಸ್ಯದ ಜೀವನವನ್ನು ಎದುರು ನೋಡುತ್ತಿದೆ. ಇದರಿಂದ ನಮ್ಮ ಜಿಲ್ಲೆಯಲ್ಲೇ ಉದ್ಯೋಗ ಸೃಷ್ಟಿ ಸಾಧ್ಯ ಎಂದು ದ.ಕ. ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ ಹೇಳಿದರು.
ಬಲ್ಮಠದ ದಕ್ಷಿಣ ಕನ್ನಡ ಫುಲ್ ಗಾಸ್ಪೆಲ್ ಪಾಸ್ಟರ್ಸ್ ಫೆಲೋಶಿಪ್ ನಲ್ಲಿ ಅವರು ಮಾತನಾಡಿದರು.


ದಕ್ಷಿಣ ಕನ್ನಡದಲ್ಲಿ ಪ್ರೀತಿ ಹಂಚುವ ಕಾಯಕ ಕಡಿಮೆಯಾಗಿದೆ. ದ್ವೇಷಮಯ ವಾತಾವರಣವನ್ನು ಸೃಷ್ಟಿಸಲಾಗಿದೆ. ಇದರಿಂದ ಜಿಲ್ಲೆಗೆ ಕೋಮುವಾದಿ ಹಣೆಪಟ್ಟಿ ಬಂದಿದೆ. ಇದನ್ನು ತೊಡೆದು ಹಾಕದೇ, ಉದ್ಯೋಗ ಸೃಷ್ಟಿ ಅಸಾಧ್ಯ. ಆದರೆ ಇಲ್ಲೇ ಉದ್ಯೋಗ ಸೃಷ್ಟಿಯಾಗಬೇಕು ಎನ್ನುವುದು ಎಷ್ಟೋ ಹೆತ್ತವರ, ಪೋಷಕರ ಕನಸು. ನಮ್ಮ ಮನೆಯ ಮಕ್ಕಳು ಉದ್ಯೋಗವನ್ನರಸಿ, ಬೇರೆ ಊರುಗಳಿಗೆ ಹೋಗುವಂತಾಗಬಾರದು. ತಮ್ಮ ತಂದೆ – ತಾಯಿಯ ಜೊತೆ ನಮ್ಮ ಊರಿನಲ್ಲೇ ಉಳಿಯಬೇಕು ಎಂದರು.
ಇದೇ ಸಂದರ್ಭ ಪದ್ಮರಾಜ್ ಆರ್. ಪೂಜಾರಿ ಅವರ ಗೆಲುವಿಗಾಗಿ ವಿಶೇಷ ಪ್ರಾರ್ಥನೆ ಸಲ್ಲಿಸಲಾಯಿತು. ಸಂಸ್ಥೆಯ ಮುಖ್ಯಸ್ಥ ಐವನ್ ಮೊಂತೆರೋ ಪ್ರಾರ್ಥಿಸಿದರು.
ಸಂಸ್ಥೆಯ ಅಧ್ಯಕ್ಷ ಡೊನಾಲ್ಡ್ ಪಿ. ಮಿನೇಜಸ್, ಮಾಜಿ ಮೇಯರ್ ಶಶಿಧರ್ ಹೆಗ್ಡೆ, ಗಿರೀಶ್ ಆಳ್ವ ಮೊದಲಾದವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು