3:52 PM Friday6 - March 2026
ಬ್ರೇಕಿಂಗ್ ನ್ಯೂಸ್
ಕೋರ್ಟು ಅಲೆದಾಟ ತಪ್ಪಿಸಲು 10 ಕೋಟಿ ವೆಚ್ಚದಲ್ಲಿ ಇ ಕೋರ್ಟ್‌ ಸ್ಥಾಪನೆ 1,000 ಕೋಟಿ ವೆಚ್ಚದ ‘ಕಲ್ಯಾಣ ಪಥ’ ಯೋಜನೆಡಿ ರಸ್ತೆ ಅಭಿವೃದ್ಧಿ:ಮುಖ್ಯಮಂತ್ರಿ ರಾಜ್ಯ ಬಜೆಟ್ | ಮೈಸೂರು ರಾಜ್ಯದ 2ನೇ ಐಟಿ ಸಿಟಿಯಾಗಿ ರೂಪಿಸುವ ಯೋಜನೆ ರಾಜ್ಯದಲ್ಲಿ ‘ವಿದ್ಯಾರ್ಥಿ ಇಂದಿರಾ ಕ್ಯಾಂಟೀನ್’ ಆರಂಭ : ಬಜೆಟ್ ನಲ್ಲಿ ಘೋಷಣೆ ಜಿಎಸ್​ಟಿ ತರ್ಕಬದ್ಧಗೊಳಿಸಿದ್ದರಿಂದ ರಾಜ್ಯಕ್ಕೆ ರಾಜಸ್ವ ಸಂಗ್ರಹಣೆ ಕಡಿಮೆ: ಸಿಎಂ ಸಿದ್ದರಾಮಯ್ಯ ರಾಜ್ಯ ಬಜೆಟ್ | ದಕ್ಷಿಣ ಕನ್ನಡದ ಮಾಣಿ ಹಾಗೂ ಸಜಿಪನಡು ಸೇರಿದಂತೆ ರಾಜ್ಯದ… ರಾಜ್ಯ ಸರ್ಕಾರಿ ಉದ್ಯೋಗ ನೇಮಕಾತಿಗೆ 5 ವರ್ಷಗಳ ಸಡಿಲಿಕೆ : ಸಿಎಂ ಸಿದ್ದರಾಮಯ್ಯ… ರಾಜ್ಯ ಬಜೆಟ್ 2026-27: ಸರ್ವರ ಸಬಲೀಕರಣ, ಅವಕಾಶಗಳ ಅನಾವರಣ, ನವ ಕರ್ನಾಟಕದ ನಿರ್ಮಾಣ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ನವೀಕೃತ, ವಿಸ್ತೃತ, ಹವಾನಿಯಂತ್ರಿತ ಬಿ.ಸಿ. ರೋಡ್ ಶಾಖೆ… ವಿಜಯ್ ದೇವರಕೊಂಡ ಹಾಗೂ ರಶ್ಮಿಕಾ ಮಂದಣ್ಣ ಆರತಕ್ಷತೆ: ಶುಭ ಹಾರೈಸಿದ ಡಿಕೆಶಿ- ಪೊನ್ನಣ್ಣ

ಇತ್ತೀಚಿನ ಸುದ್ದಿ

ಫುಲ್ ಗಾಸ್ಪೆಲ್ ಪಾಸ್ಟರ್ಸ್ ಫೆಲೋಶಿಪ್’ನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಗೆಲುವಿಗಾಗಿ ವಿಶೇಷ ಪ್ರಾರ್ಥನೆ

11/04/2024, 16:12

ಮಂಗಳೂರು(reporterkarnataka.com): ದಕ್ಷಿಣ ಕನ್ನಡ ಸಾಮರಸ್ಯದ ಜೀವನವನ್ನು ಎದುರು ನೋಡುತ್ತಿದೆ. ಇದರಿಂದ ನಮ್ಮ ಜಿಲ್ಲೆಯಲ್ಲೇ ಉದ್ಯೋಗ ಸೃಷ್ಟಿ ಸಾಧ್ಯ ಎಂದು ದ.ಕ. ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ ಹೇಳಿದರು.
ಬಲ್ಮಠದ ದಕ್ಷಿಣ ಕನ್ನಡ ಫುಲ್ ಗಾಸ್ಪೆಲ್ ಪಾಸ್ಟರ್ಸ್ ಫೆಲೋಶಿಪ್ ನಲ್ಲಿ ಅವರು ಮಾತನಾಡಿದರು.


ದಕ್ಷಿಣ ಕನ್ನಡದಲ್ಲಿ ಪ್ರೀತಿ ಹಂಚುವ ಕಾಯಕ ಕಡಿಮೆಯಾಗಿದೆ. ದ್ವೇಷಮಯ ವಾತಾವರಣವನ್ನು ಸೃಷ್ಟಿಸಲಾಗಿದೆ. ಇದರಿಂದ ಜಿಲ್ಲೆಗೆ ಕೋಮುವಾದಿ ಹಣೆಪಟ್ಟಿ ಬಂದಿದೆ. ಇದನ್ನು ತೊಡೆದು ಹಾಕದೇ, ಉದ್ಯೋಗ ಸೃಷ್ಟಿ ಅಸಾಧ್ಯ. ಆದರೆ ಇಲ್ಲೇ ಉದ್ಯೋಗ ಸೃಷ್ಟಿಯಾಗಬೇಕು ಎನ್ನುವುದು ಎಷ್ಟೋ ಹೆತ್ತವರ, ಪೋಷಕರ ಕನಸು. ನಮ್ಮ ಮನೆಯ ಮಕ್ಕಳು ಉದ್ಯೋಗವನ್ನರಸಿ, ಬೇರೆ ಊರುಗಳಿಗೆ ಹೋಗುವಂತಾಗಬಾರದು. ತಮ್ಮ ತಂದೆ – ತಾಯಿಯ ಜೊತೆ ನಮ್ಮ ಊರಿನಲ್ಲೇ ಉಳಿಯಬೇಕು ಎಂದರು.
ಇದೇ ಸಂದರ್ಭ ಪದ್ಮರಾಜ್ ಆರ್. ಪೂಜಾರಿ ಅವರ ಗೆಲುವಿಗಾಗಿ ವಿಶೇಷ ಪ್ರಾರ್ಥನೆ ಸಲ್ಲಿಸಲಾಯಿತು. ಸಂಸ್ಥೆಯ ಮುಖ್ಯಸ್ಥ ಐವನ್ ಮೊಂತೆರೋ ಪ್ರಾರ್ಥಿಸಿದರು.
ಸಂಸ್ಥೆಯ ಅಧ್ಯಕ್ಷ ಡೊನಾಲ್ಡ್ ಪಿ. ಮಿನೇಜಸ್, ಮಾಜಿ ಮೇಯರ್ ಶಶಿಧರ್ ಹೆಗ್ಡೆ, ಗಿರೀಶ್ ಆಳ್ವ ಮೊದಲಾದವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು