7:50 PM Wednesday29 - April 2026
ಬ್ರೇಕಿಂಗ್ ನ್ಯೂಸ್
ಉದ್ಯೋಗ ಖಾತ್ರಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿ ಸಾವು: ಬಿಸಿಲಿನ ತಾಪಮಾನಕ್ಕೆ… ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ತರಲು ಯತ್ನ: ಸಂಡೂರಿನಲ್ಲಿ ಕಾರ್ಮಿಕ ಸಚಿವ… ಬಿಜೆಪಿ ಪಕ್ಷದಿಂದಲೇ ಮಹಿಳೆಯರಿಗೆ ಶೇ. 30ರಷ್ಟು ಮೀಸಲಾತಿ ಪ್ರಕಟಿಸಲಿ: ಸಚಿವ ಸಂತೋಷ್ ಲಾಡ್… Mangaluru | ಕುಕ್ಕರ್‌ ಬಾಂಬ್‌ ಸ್ಫೋಟದ ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಬೇಕಿತ್ತು: ಸಂತ್ರಸ್ತ… ಗಾದಿ ಪೈಪೋಟಿ | ದೆಹಲಿಗೆ ಹೋಗಲು 50 ಶಾಸಕರ ಟಿಕೆಟ್‌ ಬುಕ್ಕಿಂಗ್‌: ಕೇಂದ್ರ… Koppala | ಕುಷ್ಟಗಿಯಲ್ಲಿ ಗುಡುಗು ಸಹಿತ ಮಳೆ: ಸಿಡಿಲು ಬಡಿದು ವ್ಯಕ್ತಿ ಬಲಿ ಕೊಡಗು-ಮೈಸೂರು ರಾಜ್ಯ ಹೆದ್ದಾರಿ ಬಳಿ ಹುಲಿ ದಾಳಿಗೆ ಹಸು ಬಲಿ: ರೊಚ್ಚಿಗೆದ್ದ ಗ್ರಾಮಸ್ಥರಿಂದ… New Delhi | 228 ಪ್ರಯಾಣಿಕರಿದ್ದ ವಿಮಾನದಲ್ಲಿ ಬೆಂಕಿ: ಸ್ವಲ್ಪದರಲ್ಲೇ ತಪ್ಪಿತು ಮತ್ತೊಂದು… ಶಿಕ್ಷಕರೇ ಇಲ್ಲದ ಶಾಲೆಗಳಿಗೆ ಶೇ. 94 ಬಂದಿದ್ದು ಹೇಗೆ? ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ದೊಡ್ಡ… ತಂದೆ ಬೈದ ಕ್ಷುಲ್ಲಕ ಕಾರಣಕ್ಕೆ ಯುವತಿ ಆತ್ಮಹತ್ಯೆಗೆ ಶರಣು

ಇತ್ತೀಚಿನ ಸುದ್ದಿ

ಬಿಜೆಪಿ ದೀನ ದಲಿತರ ಪಕ್ಷ: ಮಾಜಿ ಶಾಸಕ ಕುಮಾರಸ್ವಾಮಿ ಹೇಳಿಕೆಗೆ ವಿನಯ್ ಹಳೆಕೋಟೆ ತಿರುಗೇಟು

11/04/2024, 18:05

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಸಂವಿಧಾನ ಶಿಲ್ಪಿ, ಭಾರತ ರತ್ನ ಡಾ. ಅಂಬೇಡ್ಕರ್ ಬದುಕಿದ್ದಾಗ ಅವರನ್ನು ಕಾಂಗ್ರೆಸ್ ಅವಮಾನಿಸಿದ್ದು. ಜನಸಂಘ, ಬಿಜೆಪಿ ಅವರ ತತ್ವ ಸಿದ್ಧಾಂತ ಮತ್ತು ಪಾಂಡಿತ್ಯವನ್ನು ವಿಶ್ವಕ್ಕೆ ಸಾರಿವೆ. ಬಿಜೆಪಿ ಪಕ್ಷವು ವಿಕಸಿತ ಭಾರತದಲ್ಲಿ ದಲಿತರ ಎಳಿಗೆ ಹಾಗೂ ನಾಯಕತ್ವಕ್ಕಾಗಿ ಶ್ರಮಿಸುತ್ತಿದೆ. ರಾಷ್ಟ್ರಪತಿ ಸೇರಿದಂತೆ ಅನೇಕ ಸ್ಥಾನಮಾನಗಳನ್ನು ದಲಿತರಿಗೆ ನೀಡಿದ್ದು, ಮಾಜಿ ಶಾಸಕ ಕುಮಾರಸ್ವಾಮಿ ಹೇಳಿಕೆಯನ್ನು ಖಂಡಿಸುತ್ತಿರುವುದಾಗಿ ಪಕ್ಷದ ವಕ್ತಾರ ವಿನಯ್ ಹಳೆಕೋಟೆ ಹೇಳಿದರು.
ಮಾಜಿ ಶಾಸಕ ಎಂ.ಪಿ. ಕುಮಾರಸ್ವಾಮಿ ಇತ್ತೀಚೆಗೆ ಕಳಸದಲ್ಲಿ ದಲಿತರು ಬಿಜೆಪಿ ಕಚೇರಿಯನ್ನು ತುಳಿಯುವಂತೆ ನಾನೇ ಮಾಡಿದ್ದು ಎಂದು ಹೇಳಿಕೆ ನೀಡಿರುವುದು ಹಾಸ್ಯಾಸ್ಪದವಾಗಿದ್ದು. ನೀವುಗಳು ಈ ಹಿಂದೆ ಪಕ್ಷಕ್ಕೆ ಬರುವ ಮುಂಚೆ ನಮ್ಮಲ್ಲಿ ಸಾವಿರಾರು ದಲಿತ ನಾಯಕರು ನಿಮಗಿಂತಲು ಹೆಚ್ಚು ಬುದ್ದಿವಂತರಿದ್ದರು. ಪಕ್ಷವನ್ನು ಸಂಘಟಿಸಿದ್ದರು. ಗೆದ್ದಲು ಹುಳುವಿನ ರೀತಿ ನೀವು ಬಿಜೆಪಿ ಪಕ್ಷಕ್ಕೆ ಆಗಮಿಸಿದ್ದು ಏನು ಇಲ್ಲದ ನಿಮ್ಮನ್ನು ಜಿಲ್ಲಾ ಪಂಚಾಯಿತಿ ಸದಸ್ಯನಾಗಿ ಐದು ಬಾರಿ ವಿಧಾನಸಭೆ ಟಿಕೆಟ್ ನೀಡಿ ಮೂರು ಬಾರಿ ಶಾಸಕನನ್ನಾಗಿ ಮಾಡಿದ್ದು ಬಿಜೆಪಿ ಪಕ್ಷವಾಗಿದೆ. ನಿಮ್ಮ ವೈಯಕ್ತಿಕ ದಂಧೆಗಳು ಮತ್ತು ಭ್ರಷ್ಟಾಚಾರದಿಂದ ಈ ಬಾರಿ ಟಿಕೆಟ್ ಅನ್ನು ನಿರಾಕರಿಸಿದ್ದು, ಇತ್ತೀಚಿಗೆ ನೀವು ಭ್ರಷ್ಟ ರಾಜಕೀಯ ಪಕ್ಷವೊಂದನ್ನು ಸೇರುವಾಗ ಈ ಹಿಂದೆಯೇ ನನ್ನದು ಕಾಂಗ್ರೆಸ್‌ ಮನಸ್ಥಿತಿ ಎಂದಿದ್ದೀರಿ. ದೇಶ ಒಡೆದ ಕೋಮುವಾದಿಗಳು ಭ್ರಷ್ಟಾಚಾರಿಗಳು ಆ ಪಕ್ಷದಲ್ಲೇ ಇರುವುದು ಸೂಕ್ತ. ನೀವೀಗ ರಾಜಕೀಯ ರಂಗಕ್ಕೆ ತಿರಸ್ಕೃತರಾಗಿದ್ದು. ಬೇರೆ ಪಕ್ಷದಲ್ಲಿ ಒಂದು ಬಾರಿ ಶಾಸಕನಾಗುವ ಶಕ್ತಿಯು ನಿಮ್ಮಲ್ಲಿಲ್ಲ. ನಿಮ್ಮ ಹಳಸಲು ಹೇಳಿಕೆಗಳು ಎಲ್ಲಿಯೂ ಈಗ ಸಲ್ಲುವುದಿಲ್ಲ ಎಂದು ಅವರು ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಕಾಂಗ್ರೆಸ್ ಪಕ್ಷ ಸುಳ್ಳು ಗ್ಯಾರಂಟಿಗಳ ಹೆಸರಲ್ಲಿ ಜನರನ್ನು ಒಂದು ಬಾರಿ ಮೋಸ ಮಾಡಬಹುದು. ಎರಡನೇ ಬಾರಿ ಸಾಧ್ಯವಿಲ್ಲ. ಈ ಬಾರಿಯ ಲೋಕಸಭಾ ಚುನಾವಣಾ ಸೇರಿದಂತೆ ಮುಂದಿನ ಎಲ್ಲಾ ಚುನಾವಣೆಗಳಲ್ಲೂ ಬಿಜೆಪಿ ಗೆಲುವು ತಾಲೂಕಿನಲ್ಲಿ ಶತಸಿದ್ಧ ಎಂದು ವಿನಯ್ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು