9:43 AM Saturday27 - June 2026
ಬ್ರೇಕಿಂಗ್ ನ್ಯೂಸ್
ಮಂಗಳೂರಿನಲ್ಲೇ ಇದ್ದಿದ್ದರೆ ಶಿಕ್ಷಕನಾಗಿರುತ್ತಿದ್ದೆ: ಬಾಲಿವುಡ್ ಬಾದ್ ಶಾ ಶಾರುಖ್‌ ಖಾನ್ ಎಐ ತಂತ್ರಜ್ಞಾನದಲ್ಲಿ ಗೃಹಿಣಿಯ ಫೋಟೋ ಎಡಿಟ್; 30 ಲಕ್ಷಕ್ಕೆ ಬೇಡಿಕೆ; ಮಹಿಳೆ ಆತ್ಮಹತ್ಯೆಗೆ… ಟ್ರಾಫಿಕ್ ಸಮಸ್ಯೆಯಾಗಿದ್ದು ನಿಜ, ನೀಟ್ ವಿದ್ಯಾರ್ಥಿಗಳಿಗೆ ತೊಂದರೆಯಾಗಿದ್ದರೆ ಸಹಾಯ ಮಾಡ್ತೀವಿ: ಕೆಪಿಸಿಸಿ ಅಧ್ಯಕ್ಷ… ಚನ್ನಪಟ್ಟಣ | ಎಕ್ಸ್​ಪ್ರೆಸ್​ ರಸ್ತೆಯಲ್ಲಿ ಭೀಕರ ಅಪಘಾತ: ಕಾರಿನ ಚಕ್ರ ಸ್ಫೋಟಗೊಂಡು ಚಾಲಕ… ಹಸೆಮಣೆ ಏರಬೇಕಿದ್ದಾಕೆಗೆ ಪಾಪಿ ಯುವಕನಿಂದ ಬೆದರಿಕೆ: ಮಾನಕ್ಕೆ ಅಂಜಿ ಒಂದೇ ಕುಟುಂಬದ ಮೂವರು… ಚುನಾವಣೆಗಷ್ಟೇ ಅಲ್ಲ, ಸಿದ್ಧಾಂತದ ಬಲವರ್ಧನೆಗೆ ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಆಯ್ಕೆ: ಮಾಜಿ ಸಿಎಂ… ತೀರ್ಥಹಳ್ಳಿ | ಶಿವರಾಜಪುರ ಬಳಿ ಎರಡು ಕಾರುಗಳ ನಡುವೆ ಭೀಕರ ಅಪಘಾತ: ಸಂಪೂರ್ಣ… Bangalore | ಬಿಡದಿ ಟೌನ್‌ಶಿಪ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಪಾದಯಾತ್ರೆಗೆ ಗ್ರಾಮಸ್ಥರ ತಡೆ:… ಬೆಂಗಳೂರು ಅರಮನೆ ಮೈದಾನದಲ್ಲಿ ಬೃಹತ್ ಸಮಾರಂಭ: ಕೆಪಿಸಿಸಿ ಅಧ್ಯಕ್ಷ ಗದ್ದುಗೆ ಏರಿದ ಖಡಕ್… Bangalore | ನಾಗಸಂದ್ರ ಮೆಟ್ರೋ ನಿಲ್ದಾಣದ ತುರ್ತು ನಿರ್ಗಮನ ದ್ವಾರದಲ್ಲಿ ಶಾರ್ಟ್ ಸಕ್ಯೂಟ್;…

ಇತ್ತೀಚಿನ ಸುದ್ದಿ

ಕೊಟ್ಟಿಗೆಹಾರದ ದೇವನಗೂಲ್ ಗ್ರಾಮದಲ್ಲಿ ಕಾಡಾನೆ ದಾಳಿ: ಬಾಳೆ ಬೆಳೆ ನಾಶ; ಸಲಗ ಸ್ಥಳಾಂತರಕ್ಕೆ ಗ್ರಾಮಸ್ಥರ ಆಗ್ರಹ

11/04/2024, 22:09

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಬಣಕಲ್ ಹೋಬಳಿಯ ಕೊಟ್ಟಿಗೆಹಾರದ ದೇವನಗೂಲ್ ಗ್ರಾಮದಲ್ಲಿ ಬುಧವಾರ ರಾತ್ರಿ ಕಾಡಾನೆ ದಾಳಿ ನಡೆಸಿ ಬಾಳೆ ಬೆಳೆ ನಾಶ ಮಾಡಿದೆ.


ಒಂಟಿ ಸಲಗವು ಕಳೆದ ಬಾರಿ ಚಾರ್ಮಾಡಿ ಭಾಗದಿಂದ ಬಂದು ದೇವನಗೂಲ್ ಗ್ರಾಮಕ್ಕೆ ಲಗ್ಗೆಯಿಟ್ಟು ವಾಸದ ಮನೆಯ ಹಿಂಭಾಗದಲ್ಲಿ ಬೈನೇಮರ, ಬಾಳೆ ಎಳೆದು ನಾಶ ಮಾಡಿತ್ತು. ಈ ಬಾರಿಯು ದೇವನಗೂಲ್ ಗ್ರಾಮದ ಗ್ರಾಮಸ್ಥರಾದ ಡಿ.ಟಿ.ಮಂಜುನಾಥ್ ಆಚಾರ್ಯ, ಎಂ.ವೀರಪ್ಪಗೌಡ ಎಂಬವರ ಮನೆಯ ಬಳಿ ರಾತ್ರಿ ದಾಳಿ ಮಾಡಿ ಬೃಹತ್ ಬೈನೇಮರ ಹಾಗೂ ಸುತ್ತಮುತ್ತ ಇರುವ ಬಾಳೆ ಬೆಳೆ ನಾಶ ಮಾಡಿ ಸಾಗಿದೆ. ಇದರಿಂದ ಬೆಳೆ ನಾಶವಾಗಿ ನಷ್ಟ ಸಂಭವಿಸಿದೆ. ಕಾಫಿ ತೋಟಗಳಲ್ಲಿ ಸಾಗುತ್ತಿರುವ ಕಾಡಾನೆ ಕಾಫಿ ಗಿಡಗಳನ್ನು ಕೂಡ ತುಳಿದು ರೈತರ ಬೆಳೆ ಹಾನಿ ಮಾಡುತ್ತಿರುವುದರಿಂದ ಗ್ರಾಮಸ್ಥರು ಕಾಡಾನೆ ಕಾಟದಿಂದ ಬೇಸತ್ತಿದ್ದಾರೆ. ಆದರೆ ಪ್ರಾಣ ಹಾನಿ ಸಂಭವಿಸಿಲ್ಲ. ಹೀಗೆ ಕಾಡಾನೆ ಕಾಟ ಮುಂದುವರೆದರೆ ಜನರ ಪ್ರಾಣಕ್ಕೂ ಕುತ್ತು ಬರಲಿದೆ ಎಂದು ಗ್ರಾಮಸ್ಥ ಎಂ.ವೀರಪ್ಪಗೌಡ ಅಭಿಪ್ರಾಯ ವ್ಯಕ್ತ ಪಡಿಸಿದ್ದಾರೆ. ಆನೆ ಕಾರ್ಯಪಡೆಯ ಬಸವರಾಜ್ ಮಾತನಾಡಿ’ ಕಾಡಾನೆ ಯಾವ ಭಾಗದಿಂದ ಬಂದಿದೆ ಎಂದು ಹೆಜ್ಜೆ ಗುರುತು ಪತ್ತೆಯಾಗುತ್ತಿಲ್ಲ. ಕಾಡಾನೆ ಬಗ್ಗೆ ಮಾಹಿತಿ ಕಲೆ ಹಾಕಲಾಗುತ್ತಿದೆ. ಬಾಳೆ ಬೆಳೆ ಹಾನಿಯಾದವರು ಸೂಕ್ತ ದಾಖಲೆಯೊಂದಿಗೆ ಅರ್ಜಿ ನೀಡಿದರೆ ಪರಿಹಾರ ನೀಡಲು ಹಿರಿಯ ಅಧಿಕಾರಿಗಳಿಗೆ ಮನವಿ ಸಲ್ಲಿಸಿ ಪರಿಹಾರಕ್ಕೆ ಆಗ್ರಹಿಸಲಾಗುವುದು.ಸದ್ಯಕ್ಕೆ ಗ್ರಾಮಸ್ಥರು ರಾತ್ರಿ ವೇಳೆ ಎಚ್ಚರಿಕೆಯಿಂದ ಇರಬೇಕು’ ಎಂದು ಗ್ರಾಮಸ್ಥರಿಗೆ ತಿಳಿಸಿದ್ದಾರೆ.ಸ್ಥಳಕ್ಕೆ ಉಪ ವಲಯ ಅರಣ್ಯಾಧಿಕಾರಿ ಕಿರಣ್,ಗಸ್ತು ಅರಣ್ಯ ಪಾಲಕ ಉಮೇಶ್,ಕಾರ್ಯಪಡೆ ಸಿಬ್ಬಂದಿ ಹೇಮಂತ್, ಮುರಳಿ,ಶಿವಕುಮಾರ್,ಸುರೇಶ್ ಬೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. *ಕಾಡಾನೆ ಸ್ಥಳಕ್ಕೆ ಒತ್ತಾಯ:* ದೇವನಗೂಲ್ ಗ್ರಾಮದ ಭಾಗದಲ್ಲಿ ಪದೇ ಪದೇ ಕಾಡಾನೆ ದಾಳಿ ಮಾಡುತ್ತಿದೆ.ಪರಿಹಾರ ನೀಡುವುದರ ಬದಲು ಕಾಡಾನೆ ಸ್ಥಳಾಂತರ ಮಾಡಬೇಕು ಗ್ರಾಮಸ್ಥ ಡಿ.ಎಂ.ರಾಜು ಆಚಾರ್ಯ ಒತ್ತಾಯಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು