9:26 AM Saturday14 - February 2026
ಬ್ರೇಕಿಂಗ್ ನ್ಯೂಸ್
ಒಟಿಪಿ ಸೋರಿಕೆ: ವಂಚನೆ ತಡೆಗಟ್ಟಲು ಏರ್‌ ಟೆಲ್‌ ನಿಂದ ಹೊಸ ಎಐ ಚಾಲಿತ… ಮಾಜಿ ಪ್ರಧಾನಿ ಎಚ್ಡಿಡಿ ಮಧ್ಯಪ್ರವೇಶ: ಕಾಫಿ ತೋಟಗಳ ಆನ್-ಲೈನ್ ಹರಾಜು ತಕ್ಷಣವೇ ಸ್ಥತಿತಗೊಳಿಸುವಂತೆ… ಕಾಲವೇ ಉತ್ತರ ಕೊಡುತ್ತೆ: ಸೋನಿಯಾ, ರಾಹುಲ್, ಪ್ರಿಯಾಂಕ ಭೇಟಿ ಬಳಿಕ ಡಿಸಿಎಂ ಡಿಕೆಶಿ… ಶಿವಣ್ಣನ ಶಿವಭಕ್ತಿ: ಶಿವರಾತ್ರಿಯ ಅಂಗವಾಗಿ 37 ವರ್ಷಗಳಿಂದ ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ! ದಕ್ಷಿಣ ಕೊಡಗಿನಲ್ಲಿ ಆತಂಕದ ಸೃಷ್ಟಿಸಿದ್ದ ವ್ಯಾಘ್ರ ಕೊನೆಗೂ ಸೆರೆ: ಬಲೆಗೆ ಬಿದ್ದ ಗಂಡು… ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ…

ಇತ್ತೀಚಿನ ಸುದ್ದಿ

ಕೊಟ್ಟಿಗೆಹಾರದ ದೇವನಗೂಲ್ ಗ್ರಾಮದಲ್ಲಿ ಕಾಡಾನೆ ದಾಳಿ: ಬಾಳೆ ಬೆಳೆ ನಾಶ; ಸಲಗ ಸ್ಥಳಾಂತರಕ್ಕೆ ಗ್ರಾಮಸ್ಥರ ಆಗ್ರಹ

11/04/2024, 22:09

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಬಣಕಲ್ ಹೋಬಳಿಯ ಕೊಟ್ಟಿಗೆಹಾರದ ದೇವನಗೂಲ್ ಗ್ರಾಮದಲ್ಲಿ ಬುಧವಾರ ರಾತ್ರಿ ಕಾಡಾನೆ ದಾಳಿ ನಡೆಸಿ ಬಾಳೆ ಬೆಳೆ ನಾಶ ಮಾಡಿದೆ.


ಒಂಟಿ ಸಲಗವು ಕಳೆದ ಬಾರಿ ಚಾರ್ಮಾಡಿ ಭಾಗದಿಂದ ಬಂದು ದೇವನಗೂಲ್ ಗ್ರಾಮಕ್ಕೆ ಲಗ್ಗೆಯಿಟ್ಟು ವಾಸದ ಮನೆಯ ಹಿಂಭಾಗದಲ್ಲಿ ಬೈನೇಮರ, ಬಾಳೆ ಎಳೆದು ನಾಶ ಮಾಡಿತ್ತು. ಈ ಬಾರಿಯು ದೇವನಗೂಲ್ ಗ್ರಾಮದ ಗ್ರಾಮಸ್ಥರಾದ ಡಿ.ಟಿ.ಮಂಜುನಾಥ್ ಆಚಾರ್ಯ, ಎಂ.ವೀರಪ್ಪಗೌಡ ಎಂಬವರ ಮನೆಯ ಬಳಿ ರಾತ್ರಿ ದಾಳಿ ಮಾಡಿ ಬೃಹತ್ ಬೈನೇಮರ ಹಾಗೂ ಸುತ್ತಮುತ್ತ ಇರುವ ಬಾಳೆ ಬೆಳೆ ನಾಶ ಮಾಡಿ ಸಾಗಿದೆ. ಇದರಿಂದ ಬೆಳೆ ನಾಶವಾಗಿ ನಷ್ಟ ಸಂಭವಿಸಿದೆ. ಕಾಫಿ ತೋಟಗಳಲ್ಲಿ ಸಾಗುತ್ತಿರುವ ಕಾಡಾನೆ ಕಾಫಿ ಗಿಡಗಳನ್ನು ಕೂಡ ತುಳಿದು ರೈತರ ಬೆಳೆ ಹಾನಿ ಮಾಡುತ್ತಿರುವುದರಿಂದ ಗ್ರಾಮಸ್ಥರು ಕಾಡಾನೆ ಕಾಟದಿಂದ ಬೇಸತ್ತಿದ್ದಾರೆ. ಆದರೆ ಪ್ರಾಣ ಹಾನಿ ಸಂಭವಿಸಿಲ್ಲ. ಹೀಗೆ ಕಾಡಾನೆ ಕಾಟ ಮುಂದುವರೆದರೆ ಜನರ ಪ್ರಾಣಕ್ಕೂ ಕುತ್ತು ಬರಲಿದೆ ಎಂದು ಗ್ರಾಮಸ್ಥ ಎಂ.ವೀರಪ್ಪಗೌಡ ಅಭಿಪ್ರಾಯ ವ್ಯಕ್ತ ಪಡಿಸಿದ್ದಾರೆ. ಆನೆ ಕಾರ್ಯಪಡೆಯ ಬಸವರಾಜ್ ಮಾತನಾಡಿ’ ಕಾಡಾನೆ ಯಾವ ಭಾಗದಿಂದ ಬಂದಿದೆ ಎಂದು ಹೆಜ್ಜೆ ಗುರುತು ಪತ್ತೆಯಾಗುತ್ತಿಲ್ಲ. ಕಾಡಾನೆ ಬಗ್ಗೆ ಮಾಹಿತಿ ಕಲೆ ಹಾಕಲಾಗುತ್ತಿದೆ. ಬಾಳೆ ಬೆಳೆ ಹಾನಿಯಾದವರು ಸೂಕ್ತ ದಾಖಲೆಯೊಂದಿಗೆ ಅರ್ಜಿ ನೀಡಿದರೆ ಪರಿಹಾರ ನೀಡಲು ಹಿರಿಯ ಅಧಿಕಾರಿಗಳಿಗೆ ಮನವಿ ಸಲ್ಲಿಸಿ ಪರಿಹಾರಕ್ಕೆ ಆಗ್ರಹಿಸಲಾಗುವುದು.ಸದ್ಯಕ್ಕೆ ಗ್ರಾಮಸ್ಥರು ರಾತ್ರಿ ವೇಳೆ ಎಚ್ಚರಿಕೆಯಿಂದ ಇರಬೇಕು’ ಎಂದು ಗ್ರಾಮಸ್ಥರಿಗೆ ತಿಳಿಸಿದ್ದಾರೆ.ಸ್ಥಳಕ್ಕೆ ಉಪ ವಲಯ ಅರಣ್ಯಾಧಿಕಾರಿ ಕಿರಣ್,ಗಸ್ತು ಅರಣ್ಯ ಪಾಲಕ ಉಮೇಶ್,ಕಾರ್ಯಪಡೆ ಸಿಬ್ಬಂದಿ ಹೇಮಂತ್, ಮುರಳಿ,ಶಿವಕುಮಾರ್,ಸುರೇಶ್ ಬೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. *ಕಾಡಾನೆ ಸ್ಥಳಕ್ಕೆ ಒತ್ತಾಯ:* ದೇವನಗೂಲ್ ಗ್ರಾಮದ ಭಾಗದಲ್ಲಿ ಪದೇ ಪದೇ ಕಾಡಾನೆ ದಾಳಿ ಮಾಡುತ್ತಿದೆ.ಪರಿಹಾರ ನೀಡುವುದರ ಬದಲು ಕಾಡಾನೆ ಸ್ಥಳಾಂತರ ಮಾಡಬೇಕು ಗ್ರಾಮಸ್ಥ ಡಿ.ಎಂ.ರಾಜು ಆಚಾರ್ಯ ಒತ್ತಾಯಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು