7:30 AM Monday24 - August 2026
ಬ್ರೇಕಿಂಗ್ ನ್ಯೂಸ್
*ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ… ಹನೂರು ಶೂಟೌಟ್ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​​: ಅಚ್ಚರಿಯ ಮಾಹಿತಿ ಬಹಿರಂಗ ತಾಕತ್ತಿದ್ರೆ ಸಂಘದ ಕಚೇರಿಯಲ್ಲಿ ರಾಷ್ಟ್ರಗೀತೆ ಹಾಡಲಿ: ಆರ್‌ಎಸ್‌ಎಸ್, ಬಿಜೆಪಿಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್

ಇತ್ತೀಚಿನ ಸುದ್ದಿ

ಕೊಟ್ಟಿಗೆಹಾರದ ದೇವನಗೂಲ್ ಗ್ರಾಮದಲ್ಲಿ ಕಾಡಾನೆ ದಾಳಿ: ಬಾಳೆ ಬೆಳೆ ನಾಶ; ಸಲಗ ಸ್ಥಳಾಂತರಕ್ಕೆ ಗ್ರಾಮಸ್ಥರ ಆಗ್ರಹ

11/04/2024, 22:09

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಬಣಕಲ್ ಹೋಬಳಿಯ ಕೊಟ್ಟಿಗೆಹಾರದ ದೇವನಗೂಲ್ ಗ್ರಾಮದಲ್ಲಿ ಬುಧವಾರ ರಾತ್ರಿ ಕಾಡಾನೆ ದಾಳಿ ನಡೆಸಿ ಬಾಳೆ ಬೆಳೆ ನಾಶ ಮಾಡಿದೆ.


ಒಂಟಿ ಸಲಗವು ಕಳೆದ ಬಾರಿ ಚಾರ್ಮಾಡಿ ಭಾಗದಿಂದ ಬಂದು ದೇವನಗೂಲ್ ಗ್ರಾಮಕ್ಕೆ ಲಗ್ಗೆಯಿಟ್ಟು ವಾಸದ ಮನೆಯ ಹಿಂಭಾಗದಲ್ಲಿ ಬೈನೇಮರ, ಬಾಳೆ ಎಳೆದು ನಾಶ ಮಾಡಿತ್ತು. ಈ ಬಾರಿಯು ದೇವನಗೂಲ್ ಗ್ರಾಮದ ಗ್ರಾಮಸ್ಥರಾದ ಡಿ.ಟಿ.ಮಂಜುನಾಥ್ ಆಚಾರ್ಯ, ಎಂ.ವೀರಪ್ಪಗೌಡ ಎಂಬವರ ಮನೆಯ ಬಳಿ ರಾತ್ರಿ ದಾಳಿ ಮಾಡಿ ಬೃಹತ್ ಬೈನೇಮರ ಹಾಗೂ ಸುತ್ತಮುತ್ತ ಇರುವ ಬಾಳೆ ಬೆಳೆ ನಾಶ ಮಾಡಿ ಸಾಗಿದೆ. ಇದರಿಂದ ಬೆಳೆ ನಾಶವಾಗಿ ನಷ್ಟ ಸಂಭವಿಸಿದೆ. ಕಾಫಿ ತೋಟಗಳಲ್ಲಿ ಸಾಗುತ್ತಿರುವ ಕಾಡಾನೆ ಕಾಫಿ ಗಿಡಗಳನ್ನು ಕೂಡ ತುಳಿದು ರೈತರ ಬೆಳೆ ಹಾನಿ ಮಾಡುತ್ತಿರುವುದರಿಂದ ಗ್ರಾಮಸ್ಥರು ಕಾಡಾನೆ ಕಾಟದಿಂದ ಬೇಸತ್ತಿದ್ದಾರೆ. ಆದರೆ ಪ್ರಾಣ ಹಾನಿ ಸಂಭವಿಸಿಲ್ಲ. ಹೀಗೆ ಕಾಡಾನೆ ಕಾಟ ಮುಂದುವರೆದರೆ ಜನರ ಪ್ರಾಣಕ್ಕೂ ಕುತ್ತು ಬರಲಿದೆ ಎಂದು ಗ್ರಾಮಸ್ಥ ಎಂ.ವೀರಪ್ಪಗೌಡ ಅಭಿಪ್ರಾಯ ವ್ಯಕ್ತ ಪಡಿಸಿದ್ದಾರೆ. ಆನೆ ಕಾರ್ಯಪಡೆಯ ಬಸವರಾಜ್ ಮಾತನಾಡಿ’ ಕಾಡಾನೆ ಯಾವ ಭಾಗದಿಂದ ಬಂದಿದೆ ಎಂದು ಹೆಜ್ಜೆ ಗುರುತು ಪತ್ತೆಯಾಗುತ್ತಿಲ್ಲ. ಕಾಡಾನೆ ಬಗ್ಗೆ ಮಾಹಿತಿ ಕಲೆ ಹಾಕಲಾಗುತ್ತಿದೆ. ಬಾಳೆ ಬೆಳೆ ಹಾನಿಯಾದವರು ಸೂಕ್ತ ದಾಖಲೆಯೊಂದಿಗೆ ಅರ್ಜಿ ನೀಡಿದರೆ ಪರಿಹಾರ ನೀಡಲು ಹಿರಿಯ ಅಧಿಕಾರಿಗಳಿಗೆ ಮನವಿ ಸಲ್ಲಿಸಿ ಪರಿಹಾರಕ್ಕೆ ಆಗ್ರಹಿಸಲಾಗುವುದು.ಸದ್ಯಕ್ಕೆ ಗ್ರಾಮಸ್ಥರು ರಾತ್ರಿ ವೇಳೆ ಎಚ್ಚರಿಕೆಯಿಂದ ಇರಬೇಕು’ ಎಂದು ಗ್ರಾಮಸ್ಥರಿಗೆ ತಿಳಿಸಿದ್ದಾರೆ.ಸ್ಥಳಕ್ಕೆ ಉಪ ವಲಯ ಅರಣ್ಯಾಧಿಕಾರಿ ಕಿರಣ್,ಗಸ್ತು ಅರಣ್ಯ ಪಾಲಕ ಉಮೇಶ್,ಕಾರ್ಯಪಡೆ ಸಿಬ್ಬಂದಿ ಹೇಮಂತ್, ಮುರಳಿ,ಶಿವಕುಮಾರ್,ಸುರೇಶ್ ಬೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. *ಕಾಡಾನೆ ಸ್ಥಳಕ್ಕೆ ಒತ್ತಾಯ:* ದೇವನಗೂಲ್ ಗ್ರಾಮದ ಭಾಗದಲ್ಲಿ ಪದೇ ಪದೇ ಕಾಡಾನೆ ದಾಳಿ ಮಾಡುತ್ತಿದೆ.ಪರಿಹಾರ ನೀಡುವುದರ ಬದಲು ಕಾಡಾನೆ ಸ್ಥಳಾಂತರ ಮಾಡಬೇಕು ಗ್ರಾಮಸ್ಥ ಡಿ.ಎಂ.ರಾಜು ಆಚಾರ್ಯ ಒತ್ತಾಯಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು