8:33 AM Wednesday1 - April 2026
ಬ್ರೇಕಿಂಗ್ ನ್ಯೂಸ್
ತಮಿಳುನಾಡಿನಿಂದ ರೈಲಿನಲ್ಲಿ ಬಂದು ಕೆಂಜಾರು ದೇಗುಲದ ಹುಂಡಿ ಕಳ್ಳತನ: ಅಂತಾರಾಜ್ಯ ಕಳ್ಳನ ಬಂಧನ ಯಡಿಯೂರಪ್ಪ, ಬೊಮ್ಮಾಯಿ ಸರ್ಕಾರ ಬರೀ ಲೂಟಿ ಮಾಡಿದ್ದು ಬಿಟ್ಟರೆ ಅಭಿವೃದ್ಧಿ ಮಾಡಲಿಲ್ಲ: ಸಿಎಂ… ಸಿದ್ದರಾಮಯ್ಯ ಕಳ್ಳಮತಗಳಿಂದ ನನ್ನ ವಿರುದ್ಧ ಬಾದಾಮಿಯಲ್ಲಿ ಗೆದ್ದರು: ಶ್ರೀರಾಮುಲು ಆರೋಪ ಯತ್ನಾಳ್‌ ಬಂದರೆ ಸ್ವಾಗತ: ರಾಜ್ಯ ಬಿಜೆಪಿಯಲ್ಲಿ ಕುತೂಹಲ ಮೂಡಿಸಿದ ಮಾಜಿ ಸಿಎಂ ಯಡಿಯೂರಪ್ಪ… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ… ಬಾಗಲಕೋಟೆ ಉಪ ಚುನಾವಣೆ: ಆಲಮಟ್ಟಿ ಬಳಿ ರಾತೋರಾತ್ರಿ ಸಿಎಂ ಭೇಟಿಯಾದ ಮುಸ್ಲಿಂ​ ಮುಖಂಡರು;… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ… ರಂಗೇರಿದ ಉಪ ಚುನಾವಣಾ ಕಣ: ಅಖಾಡಕ್ಕಿಳಿದ ಸಿಎಂ ಸಿದ್ದರಾಮಯ್ಯ, ವಿಜಯೇಂದ್ರ; ಕೈ, ಕಮಲ… ಕೌಟುಂಬಿಕ ಕಲಹ: ಭದ್ರಾ ಬಲದಂಡೆ ನಾಲೆ ಬ್ರಿಡ್ಜ್ ನಿಂದ ಹಾರಿ ಸೂಪರ್ ವೈಸರ್… ಗ್ಯಾಸ್ ಸಿಲಿಂಡರ್ ಗೆ ರೆಗ್ಯುಲೇಟರಿ ಅಳವಡಿಸುವಾಗ ಏಕಾಏಕಿ ಸ್ಫೋಟ: ಮನೆ ಛಿದ್ರಛಿದ್ರ; 4…

ಇತ್ತೀಚಿನ ಸುದ್ದಿ

ಕೊಟ್ಟಿಗೆಹಾರದ ದೇವನಗೂಲ್ ಗ್ರಾಮದಲ್ಲಿ ಕಾಡಾನೆ ದಾಳಿ: ಬಾಳೆ ಬೆಳೆ ನಾಶ; ಸಲಗ ಸ್ಥಳಾಂತರಕ್ಕೆ ಗ್ರಾಮಸ್ಥರ ಆಗ್ರಹ

11/04/2024, 22:09

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಬಣಕಲ್ ಹೋಬಳಿಯ ಕೊಟ್ಟಿಗೆಹಾರದ ದೇವನಗೂಲ್ ಗ್ರಾಮದಲ್ಲಿ ಬುಧವಾರ ರಾತ್ರಿ ಕಾಡಾನೆ ದಾಳಿ ನಡೆಸಿ ಬಾಳೆ ಬೆಳೆ ನಾಶ ಮಾಡಿದೆ.


ಒಂಟಿ ಸಲಗವು ಕಳೆದ ಬಾರಿ ಚಾರ್ಮಾಡಿ ಭಾಗದಿಂದ ಬಂದು ದೇವನಗೂಲ್ ಗ್ರಾಮಕ್ಕೆ ಲಗ್ಗೆಯಿಟ್ಟು ವಾಸದ ಮನೆಯ ಹಿಂಭಾಗದಲ್ಲಿ ಬೈನೇಮರ, ಬಾಳೆ ಎಳೆದು ನಾಶ ಮಾಡಿತ್ತು. ಈ ಬಾರಿಯು ದೇವನಗೂಲ್ ಗ್ರಾಮದ ಗ್ರಾಮಸ್ಥರಾದ ಡಿ.ಟಿ.ಮಂಜುನಾಥ್ ಆಚಾರ್ಯ, ಎಂ.ವೀರಪ್ಪಗೌಡ ಎಂಬವರ ಮನೆಯ ಬಳಿ ರಾತ್ರಿ ದಾಳಿ ಮಾಡಿ ಬೃಹತ್ ಬೈನೇಮರ ಹಾಗೂ ಸುತ್ತಮುತ್ತ ಇರುವ ಬಾಳೆ ಬೆಳೆ ನಾಶ ಮಾಡಿ ಸಾಗಿದೆ. ಇದರಿಂದ ಬೆಳೆ ನಾಶವಾಗಿ ನಷ್ಟ ಸಂಭವಿಸಿದೆ. ಕಾಫಿ ತೋಟಗಳಲ್ಲಿ ಸಾಗುತ್ತಿರುವ ಕಾಡಾನೆ ಕಾಫಿ ಗಿಡಗಳನ್ನು ಕೂಡ ತುಳಿದು ರೈತರ ಬೆಳೆ ಹಾನಿ ಮಾಡುತ್ತಿರುವುದರಿಂದ ಗ್ರಾಮಸ್ಥರು ಕಾಡಾನೆ ಕಾಟದಿಂದ ಬೇಸತ್ತಿದ್ದಾರೆ. ಆದರೆ ಪ್ರಾಣ ಹಾನಿ ಸಂಭವಿಸಿಲ್ಲ. ಹೀಗೆ ಕಾಡಾನೆ ಕಾಟ ಮುಂದುವರೆದರೆ ಜನರ ಪ್ರಾಣಕ್ಕೂ ಕುತ್ತು ಬರಲಿದೆ ಎಂದು ಗ್ರಾಮಸ್ಥ ಎಂ.ವೀರಪ್ಪಗೌಡ ಅಭಿಪ್ರಾಯ ವ್ಯಕ್ತ ಪಡಿಸಿದ್ದಾರೆ. ಆನೆ ಕಾರ್ಯಪಡೆಯ ಬಸವರಾಜ್ ಮಾತನಾಡಿ’ ಕಾಡಾನೆ ಯಾವ ಭಾಗದಿಂದ ಬಂದಿದೆ ಎಂದು ಹೆಜ್ಜೆ ಗುರುತು ಪತ್ತೆಯಾಗುತ್ತಿಲ್ಲ. ಕಾಡಾನೆ ಬಗ್ಗೆ ಮಾಹಿತಿ ಕಲೆ ಹಾಕಲಾಗುತ್ತಿದೆ. ಬಾಳೆ ಬೆಳೆ ಹಾನಿಯಾದವರು ಸೂಕ್ತ ದಾಖಲೆಯೊಂದಿಗೆ ಅರ್ಜಿ ನೀಡಿದರೆ ಪರಿಹಾರ ನೀಡಲು ಹಿರಿಯ ಅಧಿಕಾರಿಗಳಿಗೆ ಮನವಿ ಸಲ್ಲಿಸಿ ಪರಿಹಾರಕ್ಕೆ ಆಗ್ರಹಿಸಲಾಗುವುದು.ಸದ್ಯಕ್ಕೆ ಗ್ರಾಮಸ್ಥರು ರಾತ್ರಿ ವೇಳೆ ಎಚ್ಚರಿಕೆಯಿಂದ ಇರಬೇಕು’ ಎಂದು ಗ್ರಾಮಸ್ಥರಿಗೆ ತಿಳಿಸಿದ್ದಾರೆ.ಸ್ಥಳಕ್ಕೆ ಉಪ ವಲಯ ಅರಣ್ಯಾಧಿಕಾರಿ ಕಿರಣ್,ಗಸ್ತು ಅರಣ್ಯ ಪಾಲಕ ಉಮೇಶ್,ಕಾರ್ಯಪಡೆ ಸಿಬ್ಬಂದಿ ಹೇಮಂತ್, ಮುರಳಿ,ಶಿವಕುಮಾರ್,ಸುರೇಶ್ ಬೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. *ಕಾಡಾನೆ ಸ್ಥಳಕ್ಕೆ ಒತ್ತಾಯ:* ದೇವನಗೂಲ್ ಗ್ರಾಮದ ಭಾಗದಲ್ಲಿ ಪದೇ ಪದೇ ಕಾಡಾನೆ ದಾಳಿ ಮಾಡುತ್ತಿದೆ.ಪರಿಹಾರ ನೀಡುವುದರ ಬದಲು ಕಾಡಾನೆ ಸ್ಥಳಾಂತರ ಮಾಡಬೇಕು ಗ್ರಾಮಸ್ಥ ಡಿ.ಎಂ.ರಾಜು ಆಚಾರ್ಯ ಒತ್ತಾಯಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು