6:36 AM Wednesday1 - April 2026
ಬ್ರೇಕಿಂಗ್ ನ್ಯೂಸ್
ತಮಿಳುನಾಡಿನಿಂದ ರೈಲಿನಲ್ಲಿ ಬಂದು ಕೆಂಜಾರು ದೇಗುಲದ ಹುಂಡಿ ಕಳ್ಳತನ: ಅಂತಾರಾಜ್ಯ ಕಳ್ಳನ ಬಂಧನ ಯಡಿಯೂರಪ್ಪ, ಬೊಮ್ಮಾಯಿ ಸರ್ಕಾರ ಬರೀ ಲೂಟಿ ಮಾಡಿದ್ದು ಬಿಟ್ಟರೆ ಅಭಿವೃದ್ಧಿ ಮಾಡಲಿಲ್ಲ: ಸಿಎಂ… ಸಿದ್ದರಾಮಯ್ಯ ಕಳ್ಳಮತಗಳಿಂದ ನನ್ನ ವಿರುದ್ಧ ಬಾದಾಮಿಯಲ್ಲಿ ಗೆದ್ದರು: ಶ್ರೀರಾಮುಲು ಆರೋಪ ಯತ್ನಾಳ್‌ ಬಂದರೆ ಸ್ವಾಗತ: ರಾಜ್ಯ ಬಿಜೆಪಿಯಲ್ಲಿ ಕುತೂಹಲ ಮೂಡಿಸಿದ ಮಾಜಿ ಸಿಎಂ ಯಡಿಯೂರಪ್ಪ… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ… ಬಾಗಲಕೋಟೆ ಉಪ ಚುನಾವಣೆ: ಆಲಮಟ್ಟಿ ಬಳಿ ರಾತೋರಾತ್ರಿ ಸಿಎಂ ಭೇಟಿಯಾದ ಮುಸ್ಲಿಂ​ ಮುಖಂಡರು;… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ… ರಂಗೇರಿದ ಉಪ ಚುನಾವಣಾ ಕಣ: ಅಖಾಡಕ್ಕಿಳಿದ ಸಿಎಂ ಸಿದ್ದರಾಮಯ್ಯ, ವಿಜಯೇಂದ್ರ; ಕೈ, ಕಮಲ… ಕೌಟುಂಬಿಕ ಕಲಹ: ಭದ್ರಾ ಬಲದಂಡೆ ನಾಲೆ ಬ್ರಿಡ್ಜ್ ನಿಂದ ಹಾರಿ ಸೂಪರ್ ವೈಸರ್… ಗ್ಯಾಸ್ ಸಿಲಿಂಡರ್ ಗೆ ರೆಗ್ಯುಲೇಟರಿ ಅಳವಡಿಸುವಾಗ ಏಕಾಏಕಿ ಸ್ಫೋಟ: ಮನೆ ಛಿದ್ರಛಿದ್ರ; 4…

ಇತ್ತೀಚಿನ ಸುದ್ದಿ

ಬಿರುಬಿಸಿಲಿನಲ್ಲೂ ಕುಗ್ಗದ ಉತ್ಸಾಹ: ಬಜಪೆಯಲ್ಲಿ ಕಾಂಗ್ರೆಸ್ ರೋಡ್ ಶೋ; ಅಭಿವೃದ್ಧಿ ಕಾರ್ಯದ ಭರವಸೆ ನೀಡಿದ ಪದ್ಮರಾಜ್ ಆರ್. ಪೂಜಾರಿ

12/04/2024, 15:13

ಬಜಪೆ(reporterkarnataka.com): ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಬೂತ್ ಅಧ್ಯಕ್ಷರ, ಕಾರ್ಯಕರ್ತರ ರೋಡ್ ಶೋ ಹಾಗೂ ಪ್ರಚಾರ ಸಭೆ ಶುಕ್ರವಾರ ಬಜಪೆಯಲ್ಲಿ ನಡೆಯಿತು.
ಬಿರುಬಿಸಿಲನ್ನು ಲೆಕ್ಕಿಸದೇ ಅಭ್ಯರ್ಥಿ, ಮುಖಂಡರು, ಕಾರ್ಯಕರ್ತರು ಹೆಜ್ಜೆ ಹಾಕಿದರು. ರೋಡ್ ಶೋ ನಡುವೆ ಬಜ್ಪೆಯ ಅಂಗಡಿ – ಮಳಿಗೆಗಳಿಗೆ ತೆರಳಿ ಮತ ಯಾಚನೆ ನಡೆಯಿತು.
ರೋಡ್ ಶೋಗೆ ಮೊದಲು ಬಜ್ಪೆ ಚರ್ಚ್ ಹಾಲಿನಲ್ಲಿ 62ನೇ ತೋಕೂರು ಜಿಲ್ಲಾ ಪಂಚಾಯತ್ ಕ್ಷೇತ್ರ ಹಾಗೂ ಬಜ್ಪೆ ಪಟ್ಟಣ ಪಂಚಾಯತ್ ಕ್ಷೇತ್ರದ ಬೂತ್ ಅಧ್ಯಕ್ಷರು ಹಾಗೂ ಸಕ್ರೀಯ ಕಾರ್ಯಕರ್ತರ ಸಮಾವೇಶ ನಡೆಯಿತು.
ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ ಮಾತನಾಡಿ, ಜಿಲ್ಲೆಯ ಬೇರೆ ಬೇರೆ ವಿಧಾನಸಭಾ ಕ್ಷೇತ್ರಗಳಿಗೆ ಭೇಟಿ ನೀಡುವಾಗ ಕಾಂಗ್ರೆಸ್ ಗೆಲ್ಲುವುದು ಖಾತ್ರಿಯಾಗಿದೆ. ಜನರು ಬದಲಾವಣೆ ಬಯಸಿದ್ದಾರೆ. ಸಾಮರಸ್ಯದ ಅಭಿವೃದ್ಧಿಯನ್ನು ಎದುರು ನೋಡುತ್ತಿದ್ದಾರೆ. ಜನರ ನಿರೀಕ್ಷೆ ಸುಳ್ಳಾಗದಂತೆ, ಕಾರ್ಯಕರ್ತರ ಶ್ರಮ ವ್ಯರ್ಥವಾಗದಂತೆ ಅಭಿವೃದ್ಧಿ ಪರ ಕೆಲಸ ಮಾಡುತ್ತೇನೆ ಎಂದು ಭರವಸೆ ನೀಡಿದರು.
ನಾರಾಯಣಗುರುಗಳ ಪ್ರೇರಣೆ ಎಂಬಂತೆ ಸಮಾಜ ಸೇವೆಯಲ್ಲಿ ತೊಡಗಿಸಿಕೊಳ್ಳುವ ಸುಯೋಗ ಒದಗಿ ಬಂದಿತು. ಲಾಕ್ ಡೌನ್ ಸಂದರ್ಭ ಆಹಾರ್ ಕಿಟ್ ಪೂರೈಕೆ, ಹಲವರಿಗೆ ಮನೆ ಕಟ್ಟಿ ನೀಡಿರುವ ಮೊದಲಾದ ಕೆಲಸ ಮಾಡಿಕೊಂಡು ಬಂದೆ. ಆದರೆ ರಾಜಕೀಯಕ್ಕೆ ಬರುತ್ತೇನೆ ಎಂಬ ಕಾರಣಕ್ಕೆ ಸಮಾಜ ಸೇವೆಯಲ್ಲಿ ತೊಡಗಿಸಿಕೊಂಡಿಲ್ಲ. ತಾನು ಚಿಕ್ಕಂದಿನಿಂದ ಅನುಭವಿಸಿಕೊಂಡು ಬಂದ ಬಡತನದ ನೋವು ನನ್ನಲ್ಲಿ ಇದ್ದರಿಂದ ಬಡವರ, ನೊಂದವರ ನೋವಿಗೆ ಸ್ಪಂದಿಸುವ ಗುಣ ಬೆಳೆಯಿತು. ಈಗ ರಾಜಕೀಯಕ್ಕೆ ಬಂದರೂ, ಸಮಾಜ ಸೇವೆ ನಿತ್ಯ ನಿರಂತರ ಕಾಯಕ ಎಂದರು.
ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮಿಥುನ್ ರೈ ಮಾತನಾಡಿ, ನಮ್ಮ ಅಧಿಕೃತ ಅಭ್ಯರ್ಥಿ ಪದ್ಮರಾಜ್. ಆದರೆ ನಾವೆಲ್ಲರೂ ಅಭ್ಯರ್ಥಿಗಳೇ ಎನ್ನುವುದನ್ನು ಮರೆಯದಿರಿ. ಅತ್ಯಂತ ಹೆಚ್ಚಿನ ಲೀಡ್ ನೊಂದಿಗೆ ಪದ್ಮರಾಜ್ ಆರ್. ಪೂಜಾರಿ ಅವರನ್ನು ಗೆಲ್ಲಿಸುವ ಜವಾಬ್ದಾರಿ ನಮ್ಮ ಮೇಲಿದೆ ಎಂದರು.
ಬಿಲ್ಲವ ಮಹಾಮಂಡಲ ಅಧ್ಯಕ್ಷ ರಾಜಶೇಖರ್ ಕೋಟ್ಯಾನ್, ಮೂಲ್ಕಿ ಬ್ಲಾಕ್ ಅಧ್ಯಕ್ಷ ಮೋಹನ್ ಕೋಟ್ಯಾನ್, ವಸಂತ್ ಪೆರ್ನಾಡ್, ಬಿ.ಜೆ. ರಹೀಂ, ಗುರುರಾಜ್ ಮೊದಲಾದವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು