2:46 AM Monday1 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ಬಿರುಬಿಸಿಲಿನಲ್ಲೂ ಕುಗ್ಗದ ಉತ್ಸಾಹ: ಬಜಪೆಯಲ್ಲಿ ಕಾಂಗ್ರೆಸ್ ರೋಡ್ ಶೋ; ಅಭಿವೃದ್ಧಿ ಕಾರ್ಯದ ಭರವಸೆ ನೀಡಿದ ಪದ್ಮರಾಜ್ ಆರ್. ಪೂಜಾರಿ

12/04/2024, 15:13

ಬಜಪೆ(reporterkarnataka.com): ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಬೂತ್ ಅಧ್ಯಕ್ಷರ, ಕಾರ್ಯಕರ್ತರ ರೋಡ್ ಶೋ ಹಾಗೂ ಪ್ರಚಾರ ಸಭೆ ಶುಕ್ರವಾರ ಬಜಪೆಯಲ್ಲಿ ನಡೆಯಿತು.
ಬಿರುಬಿಸಿಲನ್ನು ಲೆಕ್ಕಿಸದೇ ಅಭ್ಯರ್ಥಿ, ಮುಖಂಡರು, ಕಾರ್ಯಕರ್ತರು ಹೆಜ್ಜೆ ಹಾಕಿದರು. ರೋಡ್ ಶೋ ನಡುವೆ ಬಜ್ಪೆಯ ಅಂಗಡಿ – ಮಳಿಗೆಗಳಿಗೆ ತೆರಳಿ ಮತ ಯಾಚನೆ ನಡೆಯಿತು.
ರೋಡ್ ಶೋಗೆ ಮೊದಲು ಬಜ್ಪೆ ಚರ್ಚ್ ಹಾಲಿನಲ್ಲಿ 62ನೇ ತೋಕೂರು ಜಿಲ್ಲಾ ಪಂಚಾಯತ್ ಕ್ಷೇತ್ರ ಹಾಗೂ ಬಜ್ಪೆ ಪಟ್ಟಣ ಪಂಚಾಯತ್ ಕ್ಷೇತ್ರದ ಬೂತ್ ಅಧ್ಯಕ್ಷರು ಹಾಗೂ ಸಕ್ರೀಯ ಕಾರ್ಯಕರ್ತರ ಸಮಾವೇಶ ನಡೆಯಿತು.
ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ ಮಾತನಾಡಿ, ಜಿಲ್ಲೆಯ ಬೇರೆ ಬೇರೆ ವಿಧಾನಸಭಾ ಕ್ಷೇತ್ರಗಳಿಗೆ ಭೇಟಿ ನೀಡುವಾಗ ಕಾಂಗ್ರೆಸ್ ಗೆಲ್ಲುವುದು ಖಾತ್ರಿಯಾಗಿದೆ. ಜನರು ಬದಲಾವಣೆ ಬಯಸಿದ್ದಾರೆ. ಸಾಮರಸ್ಯದ ಅಭಿವೃದ್ಧಿಯನ್ನು ಎದುರು ನೋಡುತ್ತಿದ್ದಾರೆ. ಜನರ ನಿರೀಕ್ಷೆ ಸುಳ್ಳಾಗದಂತೆ, ಕಾರ್ಯಕರ್ತರ ಶ್ರಮ ವ್ಯರ್ಥವಾಗದಂತೆ ಅಭಿವೃದ್ಧಿ ಪರ ಕೆಲಸ ಮಾಡುತ್ತೇನೆ ಎಂದು ಭರವಸೆ ನೀಡಿದರು.
ನಾರಾಯಣಗುರುಗಳ ಪ್ರೇರಣೆ ಎಂಬಂತೆ ಸಮಾಜ ಸೇವೆಯಲ್ಲಿ ತೊಡಗಿಸಿಕೊಳ್ಳುವ ಸುಯೋಗ ಒದಗಿ ಬಂದಿತು. ಲಾಕ್ ಡೌನ್ ಸಂದರ್ಭ ಆಹಾರ್ ಕಿಟ್ ಪೂರೈಕೆ, ಹಲವರಿಗೆ ಮನೆ ಕಟ್ಟಿ ನೀಡಿರುವ ಮೊದಲಾದ ಕೆಲಸ ಮಾಡಿಕೊಂಡು ಬಂದೆ. ಆದರೆ ರಾಜಕೀಯಕ್ಕೆ ಬರುತ್ತೇನೆ ಎಂಬ ಕಾರಣಕ್ಕೆ ಸಮಾಜ ಸೇವೆಯಲ್ಲಿ ತೊಡಗಿಸಿಕೊಂಡಿಲ್ಲ. ತಾನು ಚಿಕ್ಕಂದಿನಿಂದ ಅನುಭವಿಸಿಕೊಂಡು ಬಂದ ಬಡತನದ ನೋವು ನನ್ನಲ್ಲಿ ಇದ್ದರಿಂದ ಬಡವರ, ನೊಂದವರ ನೋವಿಗೆ ಸ್ಪಂದಿಸುವ ಗುಣ ಬೆಳೆಯಿತು. ಈಗ ರಾಜಕೀಯಕ್ಕೆ ಬಂದರೂ, ಸಮಾಜ ಸೇವೆ ನಿತ್ಯ ನಿರಂತರ ಕಾಯಕ ಎಂದರು.
ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮಿಥುನ್ ರೈ ಮಾತನಾಡಿ, ನಮ್ಮ ಅಧಿಕೃತ ಅಭ್ಯರ್ಥಿ ಪದ್ಮರಾಜ್. ಆದರೆ ನಾವೆಲ್ಲರೂ ಅಭ್ಯರ್ಥಿಗಳೇ ಎನ್ನುವುದನ್ನು ಮರೆಯದಿರಿ. ಅತ್ಯಂತ ಹೆಚ್ಚಿನ ಲೀಡ್ ನೊಂದಿಗೆ ಪದ್ಮರಾಜ್ ಆರ್. ಪೂಜಾರಿ ಅವರನ್ನು ಗೆಲ್ಲಿಸುವ ಜವಾಬ್ದಾರಿ ನಮ್ಮ ಮೇಲಿದೆ ಎಂದರು.
ಬಿಲ್ಲವ ಮಹಾಮಂಡಲ ಅಧ್ಯಕ್ಷ ರಾಜಶೇಖರ್ ಕೋಟ್ಯಾನ್, ಮೂಲ್ಕಿ ಬ್ಲಾಕ್ ಅಧ್ಯಕ್ಷ ಮೋಹನ್ ಕೋಟ್ಯಾನ್, ವಸಂತ್ ಪೆರ್ನಾಡ್, ಬಿ.ಜೆ. ರಹೀಂ, ಗುರುರಾಜ್ ಮೊದಲಾದವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು