3:45 AM Tuesday16 - September 2025
ಬ್ರೇಕಿಂಗ್ ನ್ಯೂಸ್
Belagavi | ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಬಡ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೂ ಸ್ವಾಧೀನ ಪ್ರಕ್ರಿಯೆ ಅಕ್ರಮ ಕೂಡಲೇ ಕೈಬಿಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹ ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.… ಮತಗಳ್ಳತನಕ್ಕೆ ಅವಕಾಶ ನೀಡಬೇಡಿ: ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಸಿಕ್ಕಿಬಿದ್ದ ಪತ್ನಿ;… Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ 2026ರ ಮಾರ್ಚ್‌ಗೆ PM KUSUM 2ನೇ ಹಂತ ಅನುಷ್ಠಾನ: ಕೇಂದ್ರ ಸಚಿವ ಪ್ರಹ್ಲಾದ್… ವಿಧಾನ ಪರಿಷತ್ ಸದಸ್ಯರಾಗಿ ಡಾ. ಆರತಿಕೃಷ್ಣ, ರಮೇಶ್ ಬಾಬು ಸಹಿತ ನಾಲ್ವರು ಪ್ರಮಾಣ… ಅಸ್ಸಾಂ ಕಾರ್ಮಿಕರು ಕೊಡಗಿನಿಂದ ಹಾಸನ ಕಡೆಗೆ ವಲಸೆ: ಕುಶಾಲನಗರ ಬಸ್ ನಿಲ್ದಾಣದಲ್ಲಿ ಹಿಂಡು… Kodagu | ಕಾಲೇಜಿನಲ್ಲಿ ಮಚ್ಚು ಹಿಡಿದು ರೀಲ್ಸ್: ವಿದ್ಯಾರ್ಥಿ ವಿರುದ್ದ ಪ್ರಕರಣ ದಾಖಲು;…

ಇತ್ತೀಚಿನ ಸುದ್ದಿ

ಕೊರೊನಾ ಅರ್ಭಟ: 1250 ಕೋಟಿ ರೂ.ಗಳ ಪ್ಯಾಕೇಜ್ ಘೋಷಣೆ; 3 ತಿಂಗಳು ಸಾಲ ಕಂತು ವಿನಾಯಿತಿ

19/05/2021, 14:01

ಬೆಂಗಳೂರು(reporterkarnataka news): ರಾಜ್ಯದಲ್ಲಿ ಕೊರೊನಾ ವೈರಸ್ ಆರ್ಭಟದ ಹಿನ್ನೆಲೆಯಲ್ಲಿ ಜನರ ಅನುಕೂಲಕ್ಕಾಗಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು 1250 ಕೋಟಿ ರೂ.ಗಳ ಪ್ಯಾಕೇಜ್ ಘೋಷಣೆ ಮಾಡಿದ್ದಾರೆ.

ಸಂಪುಟದ ಸದಸ್ಯರು ಹಾಗೂ ಅಧಿಕಾರಿಗಳ ಜತೆಗೆ ಸಭೆ ನಡೆಸಿದ ಬಳಿಕ ಯಡಿಯೂರಪ್ಪ ಅವರು 

ಸುದ್ದಿಗೋಷ್ಠಿಯಲ್ಲಿ ಈ ವಿಷಯ ಪ್ರಕಟಿಸಿದರು. 

ಜನರು ಆಹಾರವಿಲ್ಲದೆ ಸಂಕಷ್ಟಕ್ಕೆ ಸಿಲುಕ ಬಾರದೆಂಬ ನಿಟ್ಟಿನಲ್ಲಿ ಕೊರೊನಾ ವೈರಸ್ ಸೋಂಕಿನ ಹಿನ್ನೆಲೆಯಲ್ಲಿ ಈ ಹಿಂದೆ ಆರ್ಥಿಕ ಫ್ಯಾಕೇಜ್ ಘೋಷಣೆ ಮಾಡಿದೆ. ಇದೀಗ ಮತ್ತೆ ಸರಕಾರ 1250 ಕೋಟಿಗೂ ಅಧಿಕ ವೆಚ್ಚದಲ್ಲಿ ಆರ್ಥಿಕ ಪ್ಯಾಕೇಜ್ ಘೋಷಣೆ ಮಾಡಿದ್ದಾರೆ.

ಹೂವು ಬೆಳೆಗಾರರಿಗೆ ಪ್ರತೀ ಹೆಕ್ಟೇರ್ ಗೆ 10 ಸಾವಿರ ಸಹಾಯಧನ ನೀಡಲಾಗುತ್ತಿದ್ದು, 20 ಸಾವಿರ ರೈತರಿಗೆ ಸಹಾಯವಾಗಲಿದೆ. ಹಣ್ಣು, ತರಕಾರಿ ಬೆಳೆಗಾರರಿಗೆ ಆದ ನಷ್ಟಕ್ಕೆ ಸಂಬಂಧಿಸಿದಂತೆ ಪ್ರತೀ ಹೆಕ್ಟೇರ್ ಗೆ 10 ಸಾವಿರ ರೂಪಾಯಿ, ಆಟೋ, ಟ್ಯಾಕ್ಸಿ ಮತ್ತು ಮ್ಯಾಕ್ಸಿ ಕ್ಯಾಬ್ ಚಾಲಕರಿಗೆ 3000 ರೂಪಾಯಿ ಸಹಾಯಧನ ಘೋಷಣೆ ಮಾಡಿದ್ದಾರೆ.

ಕಟ್ಟಡ ಕಾರ್ಮಿಕರಿಗೆ 3 ಸಾವಿರ ರೂಪಾಯಿ, ಅಸಂಘಟಿತ ಕಾರ್ಮಿಕ ರಿಗೆ ತಲಾ 2000 ರೂಪಾಯಿ, ರಸ್ತೆ ಬದಿ ವ್ಯಾಪಾರಿಗಳಿಗೆ 2 ಸಾವಿರ ರೂಪಾಯಿ ಸಹಾಯಧನ, ಕಲಾವಿದರು, ತಲಾತಂಡಗಳಿಗೆ 3 ಸಾವಿರ ರೂಪಾಯಿ, ರೈತರಿಗೆ ಸಾಲ ಹಾಗೂ ಸ್ವಸಹಾಯ ಸಂಘಗಳಿಂದ ಪಡೆದ ಸಾಲಗಳ ಮರುಪಾವತಿ ಕಂತುಗಳ ಪಾವತಿಯನ್ನು ಜುಲೈ ಅಂತ್ಯದ ವರೆಗೆ ವಿನಾಯಿತಿ ನೀಡಲಾಗಿದೆ. ಅಲ್ಲದೇ ಮೂರು ತಿಂಗಳ ಸಾಲದ ಅವಧಿಯ ಬಡ್ಡಿಯನ್ನು ಸರಕಾರವೇ ಭರಿಸಲಿದೆ. ಬಿಪಿಎಲ್ ಹಾಗೂ ಅಂತ್ಯೋದಯ ಕಾರ್ಡುದಾರರಿಗೆ ಉಚಿತವಾಗಿ ಆಹಾರ ಸಾಮಗ್ರಿ ಗಳನ್ನು ವಿತರಿಸಲಾಗುತ್ತಿದೆ. ಆಹಾರದ ಕೊರತೆಯಿಂದ ಬಳಲ ಬಾರದೆಂಬ ನಿಟ್ಟಿನಲ್ಲಿ 6 ಲಕ್ಷ ಜನರಿಗೆ ಇಂದಿರಾ ಕ್ಯಾಂಟೀನ್ ಮೂಲಕ ಆಹಾಯ ಒದಗಿಸುವ ಕಾರ್ಯ ನಡೆಯುತ್ತಿದೆ. ಗ್ರಾಮ ಪಂಚಾಯತಿ ಮಟ್ಟದ ಟಾಸ್ಕ್ ಪೋರ್ಸ್ ಗೆ ಸ್ಥಳೀಯ ಸಂಘ ಸಂಸ್ಥೆಗಳ ನೆರವು ಪಡೆಯಲಾಗುತ್ತದೆ.

ಇತ್ತೀಚಿನ ಸುದ್ದಿ

ಜಾಹೀರಾತು