8:33 PM Wednesday6 - May 2026
ಬ್ರೇಕಿಂಗ್ ನ್ಯೂಸ್
ಸಚಿವ ಜಮೀರ್ ಅಹ್ಮದ್ ಖಾನ್ ಮನೆಯಲ್ಲಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳು… ಪಶ್ಚಿಮ ಬಂಗಾಳ: ರಾಜೀನಾಮೆ ನೀಡಲು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನಿರಾಕರಣೆ ಧಾರವಾಡದಲ್ಲಿ ಬೌದ್ಧ ಸನ್ಯಾಸಿ ಕೊಲೆ ಪ್ರಕರಣ: ಮಹಾರಾಷ್ಟ್ರದಲ್ಲಿ 3 ಮಂದಿ ಆರೋಪಿಗಳ ಅರೆಸ್ಟ್ ಸಿದ್ದಾಪುರ: ಕಾವೇರಿ ನದಿಯಲ್ಲಿ ಮುಳುಗಿ ವ್ಯಕ್ತಿ ದಾರುಣ ಸಾವು ಕೇವಲ 1 ಮತದಿಂದ ಡಿಎಂಕೆ ಅಭ್ಯರ್ಥಿ ವಿರುದ್ಧ ರೋಚಕ ಗೆಲುವು ಕಂಡ ಟಿವಿಕೆ… ಕೇರಳದಲ್ಲಿ ಯುಡಿಎಫ್‌ ಶತಕ: ಸಿಎಂ ರೇಸ್​ನಲ್ಲಿ ಮೂವರ ಹೆಸರು ಪಶ್ಚಿಮ ಬಂಗಾಳ: ಚುನಾವಣೆ ಫಲಿತಾಂಶ ಬಳಿಕ ಗಲಾಟೆ, ಪೊಲೀಸರಿಂದ ಲಾಠಿಚಾರ್ಜ್ ಪಶ್ಚಿಮ ಬಂಗಾಳ: ಸಿಎಂ ಮಮತಾ ಬ್ಯಾನರ್ಜಿ ನಿವಾಸದ ಎದುರು ‘ಜೈ ಶ್ರೀರಾಮ್’ ಘೋಷಣೆ… ಮಗ ಸಿಎಂ ಆಗೋ ಖುಷಿಯಲ್ಲಿ ದೇವಸ್ಥಾನಕ್ಕೆ ಹೋಗಿ ಪ್ರಾರ್ಥನೆ ಸಲ್ಲಿಸಿದ ವಿಜಯ್‌ ತಂದೆ-ತಾಯಿ ಕೊಡವರಿಗೆ ಪ್ರತ್ಯೇಕ ಲೋಕಸಭೆ, ವಿಧಾನಸಭಾ ಕ್ಷೇತ್ರಕ್ಕೆ ಆಗ್ರಹ: ಸಿಎನ್‍ಸಿಯಿಂದ ಅಭಿಯಾನ ಆರಂಭ

ಇತ್ತೀಚಿನ ಸುದ್ದಿ

ಕೊರೊನಾ ಅರ್ಭಟ: 1250 ಕೋಟಿ ರೂ.ಗಳ ಪ್ಯಾಕೇಜ್ ಘೋಷಣೆ; 3 ತಿಂಗಳು ಸಾಲ ಕಂತು ವಿನಾಯಿತಿ

19/05/2021, 14:01

ಬೆಂಗಳೂರು(reporterkarnataka news): ರಾಜ್ಯದಲ್ಲಿ ಕೊರೊನಾ ವೈರಸ್ ಆರ್ಭಟದ ಹಿನ್ನೆಲೆಯಲ್ಲಿ ಜನರ ಅನುಕೂಲಕ್ಕಾಗಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು 1250 ಕೋಟಿ ರೂ.ಗಳ ಪ್ಯಾಕೇಜ್ ಘೋಷಣೆ ಮಾಡಿದ್ದಾರೆ.

ಸಂಪುಟದ ಸದಸ್ಯರು ಹಾಗೂ ಅಧಿಕಾರಿಗಳ ಜತೆಗೆ ಸಭೆ ನಡೆಸಿದ ಬಳಿಕ ಯಡಿಯೂರಪ್ಪ ಅವರು 

ಸುದ್ದಿಗೋಷ್ಠಿಯಲ್ಲಿ ಈ ವಿಷಯ ಪ್ರಕಟಿಸಿದರು. 

ಜನರು ಆಹಾರವಿಲ್ಲದೆ ಸಂಕಷ್ಟಕ್ಕೆ ಸಿಲುಕ ಬಾರದೆಂಬ ನಿಟ್ಟಿನಲ್ಲಿ ಕೊರೊನಾ ವೈರಸ್ ಸೋಂಕಿನ ಹಿನ್ನೆಲೆಯಲ್ಲಿ ಈ ಹಿಂದೆ ಆರ್ಥಿಕ ಫ್ಯಾಕೇಜ್ ಘೋಷಣೆ ಮಾಡಿದೆ. ಇದೀಗ ಮತ್ತೆ ಸರಕಾರ 1250 ಕೋಟಿಗೂ ಅಧಿಕ ವೆಚ್ಚದಲ್ಲಿ ಆರ್ಥಿಕ ಪ್ಯಾಕೇಜ್ ಘೋಷಣೆ ಮಾಡಿದ್ದಾರೆ.

ಹೂವು ಬೆಳೆಗಾರರಿಗೆ ಪ್ರತೀ ಹೆಕ್ಟೇರ್ ಗೆ 10 ಸಾವಿರ ಸಹಾಯಧನ ನೀಡಲಾಗುತ್ತಿದ್ದು, 20 ಸಾವಿರ ರೈತರಿಗೆ ಸಹಾಯವಾಗಲಿದೆ. ಹಣ್ಣು, ತರಕಾರಿ ಬೆಳೆಗಾರರಿಗೆ ಆದ ನಷ್ಟಕ್ಕೆ ಸಂಬಂಧಿಸಿದಂತೆ ಪ್ರತೀ ಹೆಕ್ಟೇರ್ ಗೆ 10 ಸಾವಿರ ರೂಪಾಯಿ, ಆಟೋ, ಟ್ಯಾಕ್ಸಿ ಮತ್ತು ಮ್ಯಾಕ್ಸಿ ಕ್ಯಾಬ್ ಚಾಲಕರಿಗೆ 3000 ರೂಪಾಯಿ ಸಹಾಯಧನ ಘೋಷಣೆ ಮಾಡಿದ್ದಾರೆ.

ಕಟ್ಟಡ ಕಾರ್ಮಿಕರಿಗೆ 3 ಸಾವಿರ ರೂಪಾಯಿ, ಅಸಂಘಟಿತ ಕಾರ್ಮಿಕ ರಿಗೆ ತಲಾ 2000 ರೂಪಾಯಿ, ರಸ್ತೆ ಬದಿ ವ್ಯಾಪಾರಿಗಳಿಗೆ 2 ಸಾವಿರ ರೂಪಾಯಿ ಸಹಾಯಧನ, ಕಲಾವಿದರು, ತಲಾತಂಡಗಳಿಗೆ 3 ಸಾವಿರ ರೂಪಾಯಿ, ರೈತರಿಗೆ ಸಾಲ ಹಾಗೂ ಸ್ವಸಹಾಯ ಸಂಘಗಳಿಂದ ಪಡೆದ ಸಾಲಗಳ ಮರುಪಾವತಿ ಕಂತುಗಳ ಪಾವತಿಯನ್ನು ಜುಲೈ ಅಂತ್ಯದ ವರೆಗೆ ವಿನಾಯಿತಿ ನೀಡಲಾಗಿದೆ. ಅಲ್ಲದೇ ಮೂರು ತಿಂಗಳ ಸಾಲದ ಅವಧಿಯ ಬಡ್ಡಿಯನ್ನು ಸರಕಾರವೇ ಭರಿಸಲಿದೆ. ಬಿಪಿಎಲ್ ಹಾಗೂ ಅಂತ್ಯೋದಯ ಕಾರ್ಡುದಾರರಿಗೆ ಉಚಿತವಾಗಿ ಆಹಾರ ಸಾಮಗ್ರಿ ಗಳನ್ನು ವಿತರಿಸಲಾಗುತ್ತಿದೆ. ಆಹಾರದ ಕೊರತೆಯಿಂದ ಬಳಲ ಬಾರದೆಂಬ ನಿಟ್ಟಿನಲ್ಲಿ 6 ಲಕ್ಷ ಜನರಿಗೆ ಇಂದಿರಾ ಕ್ಯಾಂಟೀನ್ ಮೂಲಕ ಆಹಾಯ ಒದಗಿಸುವ ಕಾರ್ಯ ನಡೆಯುತ್ತಿದೆ. ಗ್ರಾಮ ಪಂಚಾಯತಿ ಮಟ್ಟದ ಟಾಸ್ಕ್ ಪೋರ್ಸ್ ಗೆ ಸ್ಥಳೀಯ ಸಂಘ ಸಂಸ್ಥೆಗಳ ನೆರವು ಪಡೆಯಲಾಗುತ್ತದೆ.

ಇತ್ತೀಚಿನ ಸುದ್ದಿ

ಜಾಹೀರಾತು