4:41 AM Tuesday21 - May 2024
ಬ್ರೇಕಿಂಗ್ ನ್ಯೂಸ್
ಪಡೀಲು ಸಮೀಪ ಬೈಕಿಗೆ ಡಿಕ್ಕಿ ಹೊಡೆದು ಸವಾರ ಸಹಿತ ದೂರಕ್ಕೆ ಎಳೆದೊಯ್ದ ಕಾರು:… ವಿಜಯಪುರ: ಚಾಕುವಿನಿಂದ ಇರಿದು, ಕಲ್ಲಿನಿಂದ ಜಜ್ಜಿ ಯುವಕನ ಅಮಾನುಷ ಹತ್ಯೆ; ಹಣಕಾಸಿನ ವ್ಯವಹಾರ… ವಿಧಾನ ಪರಿಷತ್ ಚುನಾವಣೆ: ಮೇ 20ರಂದು ನಾಮಪತ್ರ ಹಿಂಪಡೆಯಲು ಕೊನೆಯ ದಿನ ನಟಿ ಪವಿತ್ರಾ ಜಯರಾಂ ಸ್ನೇಹಿತ ಚಂದ್ರಕಾಂತ್ ಆತ್ಮಹತ್ಯೆ: ಸ್ನೇಹಿತೆ ಸಾವನ್ನಪ್ಪಿ ವಾರದೊಳಗೆ ಚಂದ್ರು… ವಿದ್ಯುತ್ ವೈರ್ ಗೆ ತಗಲಿದ ಅಲ್ಯುಮಿನಿಯಂ ಏಣಿ: ಕರೆಂಟ್ ಶಾಕ್ ನಿಂದ ಹಲಸಿನಹಣ್ಣು… ಸಿಸಿಬಿ ಪೊಲೀಸರ ಕಾರ್ಯಾಚರಣೆ: ಎಂಡಿಎಂಎ ಸಾಗಾಟ ಮಾಡುತ್ತಿದ್ದ 4 ಮಂದಿಯ ಬಂಧನ; 14.85… ನೈಋತ್ಯ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿಯಾಗಿ ಡಾ. ಎಸ್.ಆರ್. ಹರೀಶ್ ಆಚಾರ್ಯ ನಾಮಪತ್ರ ಸಲ್ಲಿಕೆ ವಾರಣಾಸಿ ಲೋಕಸಭಾ ಕ್ಷೇತ್ರದಿಂದ ಪ್ರಧಾನಿ ಮೋದಿ ನಾಮಪತ್ರ ಸಲ್ಲಿಕೆ: ಜೂನ್ 1ರಂದು ಮತದಾನ ಲೋಕಸಭೆ ಚುನಾವಣೆಯ ಬಳಿಕ ರಾಜ್ಯ ಬಿಜೆಪಿಯಲ್ಲಿ ಭಿನ್ನಮತದ ಮಹಾಸ್ಫೋಟ: ಸಿಎಂ ಸಿದ್ದರಾಮಯ್ಯ ಭವಿಷ್ಯ ಜಾಗತಿಕ ತಾಪಮಾನ: ಕೆಟ್ಟರೂ ಬಾರದ ಬುದ್ದಿ; ಕಾರ್ಕಳ ಹೆದ್ದಾರಿ ಕಾಮಗಾರಿಗೆ ಸಾವಿರಾರು ಮರ ಬಲಿ;…

ಇತ್ತೀಚಿನ ಸುದ್ದಿ

ಪ್ರಧಾನಿ ಮೋದಿ ರೋಡ್ ಶೋ: ಏರ್ ಪೋರ್ಟ್ ನಿಂದ ಲೇಡಿಹಿಲ್ ವರೆಗೆ ಎಸ್ ಪಿಜಿ ತಂಡದಿಂದ ರಿಹರ್ಸಲ್, ಭದ್ರತಾ ಪರಿಶೀಲನೆ

13/04/2024, 23:25

ಚಿತ್ರ :ಅನುಷ್ ಪಂಡಿತ್ ಮಂಗಳೂರು
ಮಂಗಳೂರು(reporterkarnataka.com):ಪ್ರಧಾನಿ ನರೇಂದ್ರ ಮೋದಿ ಅವರ ಭೇಟಿ ಹಿನ್ನೆಲೆಯಲ್ಲಿ ಕಡಲನಗರಿ ಮಂಗಳೂರಿನಲ್ಲಿ ಶನಿವಾರ ರಾತ್ರಿ ರಿಹರ್ಸಲ್ ಮೂಲಕ ಎಸ್ ಪಿಜಿ ತಂಡ ಭದ್ರತಾ ಪರಿಶೀಲನೆ ನಡೆಸಿತು.





ಮಂಗಳೂರು ವಿಮಾನ ನಿಲ್ದಾಣದಿಂದಲೇ ಎಸ್ ಪಿಜಿ ತಂಡದ ಮುಖ್ಯಸ್ಥ ಹಾಗೂ ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್ ಅವರು ಭದ್ರತಾ ಸಿಬ್ಬಂದಿಗಳ ಜತೆ ಲೇಡಿಹಿಲ್ ನ ಶ್ರೀ ನಾರಾಯಣ ಗುರು ವೃತ್ತದವರೆಗೆ ರಿಹರ್ಸಲ್ ನಡೆಸಿ ಭದ್ರತಾ ಪರಿಶೀಲನೆ ನಡೆಸಿದರು. ನಂತರ ನಾರಾಯಣ ಗುರು ವೃತ್ತದಿಂದ ನವಭಾರತ್ ಸರ್ಕಲ್ ವರೆಗೆ ತೆರೆದ ಜೀಪಿನಲ್ಲಿ ಎಸ್ ಪಿಜಿ ತಂಡ ತೆರಳಿತು.
ನಗರದ ಆಯಕಟ್ಟಿನ ಪ್ರದೇಶವನ್ನು ಎಸ್ ಪಿಜಿ ತಂಡ ಈಗಾಗಲೇ ತನ್ನ ಸುಪರ್ದಿಗೆ ತೆಗೆದುಕೊಂಡಿದ್ದು, ಶನಿವಾರ ರಾತ್ರಿ ಎಸ್ ಪಿಜಿ ತಂಡವು ಪ್ರಧಾನಿ ಮೋದಿ ಅವರ ರೋಡ್ ಶೋ ಸಾಗಲಿರುವ ಎಂ.ಜಿ. ರೋಡ್ ಸೇರಿದಂತೆ ಆಯಕಟ್ಟಿನ ಎಲ್ಲ ಕಡೆಗಳಲ್ಲಿ ಅಂತಿಮ ಸಿದ್ದತೆಯ ಪರಿಶೀಲನೆ ನಡೆಸಿತು.ಎಸ್ ಪಿಜಿ ತಂಡ ಈಗಾಲೇ ಹಲವು ಸುತ್ತಿನ ಭದ್ರತಾ ಪರಿಶೀಲನೆ ನಡೆಸಿದೆ.
ನಗರದಲ್ಲಿ ಏ.29ರಂದು ಪ್ರಧಾನಿ ಮೋದಿ ಅವರ ರೋಡ್ ಶೋ ಆಯೋಜಿಸಲಾಗಿದೆ. ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ದ.ಕ. ಲೋಕಸಭೆ ಕ್ಷೇತ್ರ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಜೇಶ್ ಚೌಟ ಅವರ ಪರ ಪ್ರಧಾನಿ ಪ್ರಚಾರ ನಡೆಸಲಿದ್ದಾರೆ.


ಪ್ರಧಾನಿ ಮೋದಿ ಅವರ ರೋಡ್ ಶೋ ನಡೆಯಲಿರುವ ನಗರದ ಲೇಡಿಹಿಲ್ ಸಮೀಪದ ಶ್ರೀ ನಾರಾಯಣ ಗುರು ವೃತ್ತದಿಂದ ನವಭಾರತ ಸರ್ಕಲ್ ವರೆಗೆ ರಸ್ತೆ ಮಧ್ಯದಲ್ಲಿ ಬ್ಯಾರಿಕೇಡ್ ನಿರ್ಮಿಸಲಾಗಿದೆ. ಡಿವೈಡರ್ ಹಾರಿ ಯಾರೂ ರಸ್ತೆ ದಾಟದಂತೆ ಈ ವ್ಯವಸ್ಥೆ ಮಾಡಲಾಗಿದೆ. ಶ್ವಾನ ಹಾಗೂ ಬಾಂಬ್ ಸ್ಕ್ವಾಡ್ ನಿಂದ ಹಲವು ಸುತ್ತಿನ ಪರಿಶೀಲನೆ ನಡೆಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು