ಇತ್ತೀಚಿನ ಸುದ್ದಿ
ಚಿಕ್ಕಮಗಳೂರು ಜಿಲ್ಲೆಯಲ್ಲಿ ಗುಡುಗು ಸಹಿತ ಭಾರೀ ಮಳೆ: ಸಿಡಿಲು ಬಡಿದು ಓರ್ವ ಸಾವು; ಮಳೆಗೆ ಮೊದಲ ಬಲಿ
14/04/2024, 01:16
ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು
info.reporterkarnataka@gmail.com
ಕಾಫಿನಾಡಲ್ಲಿ ಭಾರೀ ಮಳೆಯಾಗಿದ್ದು, ತೋಟಕ್ಕೆ ಹೋಗಿದ್ದ ರೈತ
ಸಿಡಿಲು ಬಡಿದು ಸಾವನ್ನಪ್ಪಿದ ಘಟನೆ ಎನ್.ಆರ್.ಪುರ ತಾಲೂಕಿನ ಅರಳಿಕೊಪ್ಪದಲ್ಲಿ ನಡೆದಿದೆ. ಇದರೊಂದಿಗೆ ಜಿಲ್ಲೆಯಲ್ಲಿ ಈ ವರ್ಷದ ಮಳೆಗೆ ಮೊದಲ ಬಲಿಯಾಗಿದೆ.
ಅರಳಿಕೊಪ್ಪದ ಶಂಕರ್ (48) ಸಿಡಿಲು ಬಡಿದು ಸಾವು ಕಂಡ ದುರ್ಧೈವಿ.
ಸಂಜೆಯಿಂದ ಗುಡುಗು ಮಿಂಚು ಸಹಿತ ಧಾರಾಕಾರವಾಗಿ ಮಳೆಯಾಗಿದೆ. ಚಿಕ್ಕಮಗಳೂರು ಜಿಲ್ಲೆಯಾದ್ಯಂತ ಧಾರಾಕಾರವಾಗಿ ಸುರಿದಿದೆ.