7:08 AM Saturday28 - March 2026
ಬ್ರೇಕಿಂಗ್ ನ್ಯೂಸ್
ಕೇಂದ್ರ ಸರಕಾರವನ್ನು ಟೀಕೆ ಮಾಡುವುದರಲ್ಲೇ 3 ವರ್ಷಗಳ ಕಾಲಹರಣ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ… ಕೈ ನಾಯಕರ ಸಂಧಾನ ಯಶಸ್ವಿ: ದಾವಣಗೆರೆ ದಕ್ಷಿಣ ಬಂಡಾಯ ಅಭ್ಯರ್ಥಿ ಪೈಲ್ವಾನ್ ಸ್ಪರ್ಧೆಯಿಂದ… ಚಿಕ್ಕಮಗಳೂರು: ಬಿಸಿಲ ಧಗೆಗೆ ಹೊತ್ತಿ ಉರಿಯುತ್ತಿರುವ ಮೀಸಲು ಅರಣ್ಯ; ಅಪಾಯದಲ್ಲಿ ಜೀವ ಸಂಕುಲ 1ನೇ ತರಗತಿ ದಾಖಲಾತಿ ವಯೋಮಿತಿಯಲ್ಲಿ 60 ದಿನಗಳ ಸಡಿಲಿಕೆ: ಸಚಿವ ಮಧು ಬಂಗಾರಪ್ಪ… ತುಮಕೂರು | ಮಧ್ಯರಾತ್ರಿ ಕುಡುಕ ಪುಂಡರ ಅಟ್ಟಹಾಸ: 10ಕ್ಕೂ ಅಧಿಕ ವಾಹನಗಳ ಗ್ಲಾಸ್… ರಾಜ್ಯ ಸರ್ಕಾರಕ್ಕೆ ಪ್ರತಿಷ್ಠೆಯಾದ ಉಪ ಚುನಾವಣೆ: ಪೈಲ್ವಾನ್ ಮನವೊಲಿಸಲು ಜಮೀರ್‌ಗೆ ಮುಖ್ಯಮಂತ್ರಿ ಸೂಚನೆ ಮಾಜಿ ಶಾಸಕರ ಪುತ್ರನ ಕೊಲೆ ಪ್ರಕರಣ: ಮಹಿಳೆ ಸೇರಿ ಮೂವರು ಪೊಲೀಸ್ ವಶಕ್ಕೆ ಹೈಕಮಾಂಡ್ ಹೇಳಿದಾಗ ಡಿಕೆಶಿ ಸಿಎಂ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ ಕಾಂಗ್ರೆಸ್ ಮೋಸ ಮಾಡಿದೆ; ನಾಮಪತ್ರ ಹಿಂತೆಗೆಯುವ ಮಾತೇ ಇಲ್ಲ: ತೊಡೆ ತಟ್ಟಿದ ಪೈಲ್ವಾನ್‌ ದಾವಣಗೆರೆ ದಕ್ಷಿಣ: ಬಿಜೆಪಿ ಅಭ್ಯರ್ಥಿಯ ಪತ್ನಿಗೆ ಮುಸ್ಲಿಂ ಮಹಿಳೆಯರಿಂದ ಭವ್ಯ ಸ್ವಾಗತ, ಉಡಿ…

ಇತ್ತೀಚಿನ ಸುದ್ದಿ

ಮಂಗಳೂರಿನಲ್ಲಿ ನಾಳೆ ‘ಇಂಡಿಯಾ’ ಘಟಕ ಪಕ್ಷಗಳು ಹಾಗೂ ಸಮಾನ ಮನಸ್ಕ ಸಂಘಟನೆಗಳಿಂದ ‘ಬಿಜೆಪಿ ಸೋಲಿಸಿ’ ಜನ ಸಮಾವೇಶ

14/04/2024, 16:41

ಮಂಗಳೂರು(reporterkarnataka.com):ಕಾಂಗ್ರೆಸ್ ಹೊರತು ಪಡಿಸಿದ “ಇಂಡಿಯಾ” ಕೂಟದ ಘಟಕ ಪಕ್ಷಗಳು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಕಾರ್ಮಿಕ, ರೈತ, ದಲಿತ, ಯುವಜನ, ಅಲ್ಪಸಂಖ್ಯಾತ ಸಂಘಟನೆಗಳು ಸೇರಿದಂತೆ ಸಮಾನ ಮನಸ್ಕ ಜನಪರ ಸಾಮಾಜಿಕ ಸಂಘಟನೆಗಳು ನಗರದ ಪುರಭವನದಲ್ಲಿ ಏಪ್ರಿಲ್ 15 ರಂದು “ಬಿಜೆಪಿ ಸೋಲಿಸಿ, ಭಾರತ ಉಳಿಸಿ” ಘೋಷಣೆಯಡಿ ಬೃಹತ್ “ಜನ ಸಮಾವೇಶ” ಹಮ್ಮಿಕೊಂಡಿವೆ. ಬೆಳಿಗ್ಗೆ 10ರಿಂದ ಮಧ್ಯಾಹ್ನ 1:00 ಗಂಟೆಯವರಗೆ ನಡೆಯಲಿರುವ ಈ ಸಮಾವೇಶದಲ್ಲಿ ಸುಮಾರು 40 ಸಂಘಟನೆಗಳು ಪಾಲ್ಗೊಳ್ಳಲಿವೆ ಎಂದು ಸಮಾವೇಶ ಆಯೋಜಿಸಿರುವ ಜಂಟಿ ಸಮಿತಿ ತಿಳಿಸಿದೆ.

10 ವರ್ಷಗಳ ನರೇಂದ್ರ ಮೋದಿ ಕೂಟದ ಆಡಳಿತ ದೇಶದ ಜನಸಾಮಾನ್ಯರನ್ನು ಅತೀವ ಸಂಕಷ್ಟಕ್ಕೆ ತಳ್ಳಿದೆ. ರೈತರು, ಕಾರ್ಮಿಕರು ತಮ್ಮ ಹಕ್ಕುಗಳನ್ನು ಕಳೆದು ಕೊಂಡು ಬೀದಿಗೆ ಬಂದಿದ್ದಾರೆ. ನಿರುದ್ಯೋಗ, ಭ್ರಷ್ಟಾಚಾರ ಎಂದೂ ಕಾಣದ ಮಟ್ಟಕ್ಕೆ ಏರಿಕೆಯಾಗಿದೆ. ಮತೀಯವಾದಿ ಕಾರ್ಪೊರೇಟ್ ಸರ್ವಾಧಿಕಾರದ ಈ ಸರಕಾರ ದೇಶದ ಮೇಲೆ ಅಘೋಷಿತ ತುರ್ತು ಪರಿಸ್ಥಿತಿಯನ್ನು ಹೇರಿದೆ. ದಕ್ಷಿಣ ಕನ್ನಡ ಜಿಲ್ಲೆಯಂತೂ ಕಳೆದ 33 ವರ್ಷಗಳ ಬಿಜೆಪಿ ಸತತ ಗೆಲುವಿನಿಂದ ದಕ್ಷಿಣ ಕನ್ನಡ ಜಿಲ್ಲೆ ನಲುಗಿಹೋಗಿದೆ. ಆರೋಗ್ಯ, ಶಿಕ್ಷಣ, ಉದ್ಯೋಗ ಸೃಷ್ಟಿ ಜಿಲ್ಲೆಯಲ್ಲಿ ಮರೀಚಿಕೆಯಾಗಿದ್ದು ಅಭಿವೃದ್ದಿ ಕೆಲವೆ ವರ್ಗಕ್ಕೆ ಸೀಮಿತಗೊಂಡಿದೆ. ಸದಾ ಕೋಮು ಉದ್ವಿಗ್ನತೆಯಿಂದಾಗಿ ಜಿಲ್ಲೆಯಲ್ಲಿ ಜನ ಸಾಮಾನ್ಯರ ಸಮಸ್ಯೆಗಳು ಚರ್ಚೆಗೇ ಬರದ ಸ್ಥಿತಿ ಉದ್ಭವವಾಗಿದೆ. ಬಿಜೆಪಿ ಶಾಸಕ, ಸಂಸದರು ಉದ್ರೇಕಕಾರಿ ಭಾಷಣಕ್ಕಷ್ಟೆ ಸೀಮಿತಗೊಂಡಿದ್ದಾರೆ.
ದೇಶ ಹಾಗೂ ದ‌.ಕ. ಜಿಲ್ಲೆ ಇಂದು ಅತ್ಯಂತ ಸಂಕಷ್ಟದ ಸ್ಥಿತಿಯನ್ನು ಹಾದು ಹೋಗುತ್ತಿದ್ದು, ಬಿಜೆಪಿಯನ್ನು ಈ ಚುನಾವಣೆಯಲ್ಲಿ ಸೋಲಿಸುವುದು ದೇಶದ ಮೇಲೆ ಕಾಳಜಿ ಇರುವ ಪ್ರತಿಯೊಬ್ಬರ ಆದ್ಯತೆಯಾಗಿದೆ. ಈ ಹಿನ್ನಲೆಯಲ್ಲಿ ಜಿಲ್ಲೆಯ ಎಡ ಪಕ್ಷಗಳು, ಆಮ್ ಆದ್ಮಿ ಪಕ್ಷ ಸೇರಿದಂತೆ ರೈತ, ಕಾರ್ಮಿಕ, ಯುವಜನ, ದಲಿತ ಸಂಘಟನೆಗಳು, ಸಮಾನ ಮನಸ್ಕ ಜನಪರ ಸಾಮಾಜಿಕ ಸಂಘಟನೆಗಳು ಜಂಟಿ ಸಮಿತಿಯನ್ನು ರಚಿಸಿಕೊಂಡು ಬಿಜೆಪಿ ಸೋಲಿಸಲು ಒಂದಾಗಿ ದುಡಿಯುವ ನಿಟ್ಟಿನಲ್ಲಿ ಈ ರಾಜಕೀಯ ಸಮಾವೇಶ ಹಮ್ಮಿಕೊಂಡಿದ್ದು, “ಇಂಡಿಯಾ” ಕೂಟದ ಅಭ್ಯರ್ಥಿಗೆ ಬೆಂಬಲ ಘೋಷಿಸಲು ನಿರ್ಧರಿಸಿವೆ ಎಂದು ಎಡ ಹಾಗೂ ಜಾತ್ಯತೀತ ಪಕ್ಷಗಳು ಹಾಗೂ ಸಮಾನ ಮನಸ್ಕ ಸಂಘಟನೆಗಳ ಜಂಟಿ ಸಮಿತಿಯ ಸಂಚಾಲಕ ಮುನೀರ್ ಕಾಟಿಪಳ್ಳ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು