6:13 PM Monday19 - January 2026
ಬ್ರೇಕಿಂಗ್ ನ್ಯೂಸ್
ಹುಣಸೂರಿನ ಜುವೆಲ್ಲರಿ ದರೋಡೆ ಪ್ರಕರಣ: ಇಬ್ಬರು ಆರೋಪಿಗಳ ಬಿಹಾರದಲ್ಲಿ ಬಂಧನ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ಅನುಷ್ಠಾನದಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ: ಕೃಷಿ… ಜನಾರ್ದನ ರೆಡ್ಡಿ, ಶ್ರೀರಾಮುಲು ಶಕ್ತಿ ಅಡಗಿಸಲು ಯಾರಿಂದಲೂ ಸಾಧ್ಯವಿಲ್ಲ: ಮಾಜಿ ಸಿಎಂ ಬಸವರಾಜ… ಕಾರು ಚಾಲಕನ ನಿರ್ಲಕ್ಷ್ಯ ಚಾಲನೆ: ಶ್ರಮಜೀವಿ ಶಿವರಾಜಪುರ ರಮೇಶ್ ದಾರುಣ ಸಾವು ಉಡುಪಿ ಪರ್ಯಾಯ: ಸರ್ವಜ್ಞ ಪೀಠ ಅಲಂಕರಿಸಿದ ಶೀರೂರು ಮಠದ ವೇದ ವರ್ಧನ ತೀರ್ಥರು;… 88 ಪ್ರಕರಣಗಳಲ್ಲಿ ಪೊಲೀಸಿನವರೇ ಶಾಮೀಲು; ಬೇಲಿಯೇ ಎದ್ದು ಹೊಲ ಮೇಯುವುದು ಅಕ್ಷಮ್ಯ ಅಪರಾಧ:… ಬೆಂಗಳೂರಿನಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪನೆ: ಅಜೀಂ ಪ್ರೇಮ್‌ಜಿ ಫೌಂಡೇಷನ್ ಜತೆ ಕೈಜೋಡಿಸಿದ… ಕುಶಾಲನಗರ – ಮಡಿಕೇರಿ ಹೆದ್ದಾರಿಯ ಆನೆಕಾಡು ಬಳಿ ಅಪಘಾತ: ಕಾಡು ಕುರಿ ಸಾವು,… ಕೊಡಗಿನಲ್ಲಿ ಅಕ್ರಮ ವಲಸಿಗರ ಬಗ್ಗೆ ಹೈ ಅಲರ್ಟ್: ನೂತನ ಎಸ್ಪಿ ಬಿಂದುಮಣಿ ಮಂಗಳೂರಿನಲ್ಲಿ ಸ್ಕೂಲ್ ಆಫ್ ಇಂಜಿನಿಯರಿಂಗ್ ಮತ್ತು ಕಾನೂನು ಶಾಲೆಗೆ ರಾಜ್ಯಪಾಲ ಗೆಹ್ಲೋಟ್ ಚಾಲನೆ

ಇತ್ತೀಚಿನ ಸುದ್ದಿ

ಆತ್ಮಶಕ್ತಿ ಮಾಡೂರು ಶಾಖೆಯಲ್ಲಿ 65ನೇ ಉಚಿತ ವೈದ್ಯಕೀಯ ಹಾಗೂ ನೇತ್ರ ತಪಾಸಣಾ ಶಿಬಿರ

14/04/2024, 23:56

ಮಂಗಳೂರು(reporterkarnataka.com): ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಮಾಡೂರು ಶಾಖೆಯ ವಾರ್ಷಿಕೋತ್ಸವದ ಪ್ರಯುಕ್ತ
ಮಾಡೂರು ಶ್ರೀ ಶಿರಡಿ ಸಾಯಿಬಾಬಾ ಮಂದಿರದ ಜಂಟಿ ಸಹಯೋಗದೊಂದಿಗೆ ಮಾತೃಶ್ರೀ ಕಾಂಪ್ಲೆಕ್ಸ್ ನಲ್ಲಿರುವ
ಮಾಡೂರು ಶಾಖೆಯ ಆವರಣದಲ್ಲಿ ಸಂಘದ ಅಧ್ಯಕ್ಷ, ಸಹಕಾರ ರತ್ನ ಚಿತ್ತರಂಜನ್ ಬೋಳಾರ್ ಅವರ ಅಧ್ಯಕ್ಷತೆಯಲ್ಲಿ ಉಚಿತ ವೈದ್ಯಕೀಯ ಹಾಗೂ ನೇತ್ರ ತಪಾಸಣಾ ಶಿಬಿರ ಜರುಗಿತು.
ಸಮುದಾಯ ದಂತ ಆರೋಗ್ಯ ವಿಭಾಗ, ದೇರಳಕಟ್ಟೆಯ
ಯೆನೆಪೋಯ ದಂತ ಕಾಲೇಜು ಮತ್ತು ಆಸ್ಪತ್ರೆಯ ನುರಿತ ತಜ್ಞ ವೈದ್ಯ ತಂಡದಿಂದ ಉಚಿತ ದಂತ ತಪಾಸಣೆ ಮತ್ತು ಕೆಎಂಸಿ ಆಸ್ಪತ್ರೆ ಅತ್ತಾವರ, ಮಂಗಳೂರು ಇವರ ನುರಿತ ತಜ್ಞ ವೈದ್ಯರ ತಂಡದವರಿಂದ ಉಚಿತ ವೈದ್ಯಕೀಯ ಮತ್ತು ನೇತ್ರ ತಪಾಸಣಾ ಶಿಬಿರ
ಜರುಗಿತು.
ಕಾರ್ಯಕ್ರಮವನ್ನು ದೇರಳ ಕಟ್ಟೆಯ ಸಮುದಾಯ ದಂತ ಆರೋಗ್ಯ ವಿಭಾಗ , ಯೆನೆಪೋಯ ದಂತ ಕಾಲೇಜು ಮತ್ತು ಆಸ್ಪತ್ರೆಯ ವೈದ್ಯರಾದ ಡಾ. ಅಪೂರ್ವ ಕೋಟ್ಯಾನ್ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಸಮಾಜದ ಎಲ್ಲಾ ಜನರು ಉದ್ಯೋಗದ ಜೊತೆ ತಮ್ಮ ಆರೋಗ್ಯದ ಕಾಳಜಿಯನ್ನು ನೋಡಿಕೊಳ್ಳಬೇಕು ಮತ್ತು ಹೆಚ್ಚಿನ ಚಿಕಿತ್ಸೆಗಾಗಿ ಆಸ್ಪತ್ರೆಯ ಹಸಿರು ಕಾರ್ಡನ್ನು ವಿತರಿಸಲಾಗುವುದು. ಶಿಬಿರಾರ್ಥಿಗಳು ಇದರ ಸದುಪಯೋಗವನ್ನು ಪಡೆಡುಕೊಳ್ಳಬೇಕೆಂದು ತಿಳಿಸಿದರು.
ಅಧ್ಯಕ್ಷತೆ ವಹಿಸಿದ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ ಚಿತ್ತರಂಜನ್ ಬೋಳಾರ್ ಅವರು ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು ಕಳೆದ 12 ವರ್ಷಗಳಿಂದ ವೈದ್ಯಕೀಯ ಶಿಬಿರವನ್ನು ನಿರಂತರ ಏರ್ಪಡಿಸುತ್ತಿದ್ದು, ಸಾರ್ವಜನಿಕರು ಇದರ ಸಂಪೂರ್ಣ ಪ್ರಯೋಜನವನ್ನು ಪಡೆಯುತ್ತಿದ್ದಾರೆ. ಸಂಘದ 65ನೇ ಉಚಿತ ವೈದ್ಯಕೀಯ ಶಿಬಿರವು ಇದಾಗಿದ್ದು, ಮುಂದಿನ ದಿನಗಳಲ್ಲಿ ಉಳ್ಳಾಲದ ಪರಿಸರದಲ್ಲೂ ಶಿಬಿರವನ್ನು ಆರೋಜಿಸಲಾಗುವುದೆಂದು ತಿಳಿಸಿದರು.
ಸಂಘವು 2023-24 ನೇ ಸಾಲಿನಲ್ಲಿ 3.3 ಕೋಟಿ ಲಾಭ ಗಳಿಸಿರುವುದು ಸಂಘದ ಪ್ರಗತಿಗೆ ಕಾರಣವಾಗಿದೆ. ಸಂಘವು ಈ ಆರ್ಥಿಕ ಸಾಲಿನಲ್ಲಿ 5 ಶಾಖೆಗಳನ್ನು ಪಕ್ಷಿಕೆರೆ, ಎಲ್ಯಾರ್ ಪದವು, ಕೃಷ್ಣಾಪುರ, ಕಲ್ಲಾಪು ಮತ್ತು ಮೂಡಬಿದಿರೆಯಲ್ಲಿ ತೆರೆಯಲಾಗುವುದು.
ಸಂಘ ಲಾಭದಲ್ಲಿ ಸಂಘದ ಸದಸ್ಯರ ಆರೋಗ್ಯ ಕಾಳಜಿಯಿಂದ ಇಂತಹ ಆರೋಗ್ಯ ಶಿಬಿರವನ್ನು ಆಯೋಜಿಸಿದ್ದು, ಸಂಘದ ಸದಸ್ಯರಿಗೆ ಕೋರೋನ ಸಮಯದಲ್ಲಿ ಶೇ 4ರ ಬಡ್ಡಿದಲ್ಲಿ ಚಿನ್ನಾಭರಣ ಸಾಲ ಮತ್ತು ಮನ್ಸೂನ್ ಸಮಯದಲ್ಲಿಯೂ ಕೂಡ ಮನ್ಸೂನ್ ವಿಶೇಷ ಬಡ್ಡಿದರದಲ್ಲಿ ಸಾಲವನ್ನು ನೀಡಿ ಆರ್ಥಿಕವಾಗಿ ಸಹಕಾರಿಯಾಗಿರುವುದು ಸಮಾಜಿಕ ಕೈಗನ್ನಡಿಯಾಗಿದೆ ಎಂದರು.
ಈ ಕಾರ್ಯಕ್ರಮದಲ್ಲಿ ಸಂಘದ ಉಪಾಧ್ಯಕ್ಷ ನೇಮಿರಾಜ್, ನಿರ್ದೇಶಕರಾದ ಆನಂದ ಎಸ್. ಕೊಂಡಾಣ ಮತ್ತು ಗೋಪಾಲ್ ಎಂ, ಚಂದ್ರಹಾಸ್ ಮರೋಳಿ ಹಾಗೂ ಶಿರಡಿ ಸಾಯಿಬಾಬಾ ಮಂದಿರದ ಆಡಳಿತ ಮೋಕ್ತೇಸರರಾದ ಸುರೇಶ್ ಕೆ.ಪಿ. ಮತ್ತು ಯೆನೆಪೋಯ ದಂತ ಕಾಲೇಜು ಮತ್ತು ಆಸ್ಪತ್ರೆಯ ವೈದ್ಯರಾದ ಡಾ.
ಅಪೂರ್ವ ಕೋಟ್ಯಾನ್ ಹಾಗೂ ಪಿ.ಆರ್.ಓ ಭರತ್ ಕುಮಾರ್ ಮತ್ತು ಅತ್ತಾವರ ಕೆಎಂಸಿ ಆಸ್ಪತ್ರೆ ವೈದ್ಯರಾದ ಡಾ. ಸಂಜನಾ ಮತ್ತು ಡಾ. ರಾಹುಲ್ ಹಾಗೂ ಸಂಘದ ಮುಖ್ಯಕಾರ್ಯನಿರ್ವಹಣಾಧಿಕಾರಿಯಾದ ಸೌಮ್ಯ ವಿಜಯ್ ಅವರು ಉಪಸ್ಥಿತರಿದ್ದರು.
ಶಿಬಿರದಲ್ಲಿ ಸುಮಾರು 200ಕ್ಕೂ ಮಿಕ್ಕಿ ಶಿಬಿರಾರ್ಥಿಗಳು ವೈದ್ಯಕೀಯ ಶಿಬಿರದ ಪ್ರಯೋಜನವನ್ನು ಪಡೆದುಕೊಂಡರು.
ಸಖಘದ ಹಿರಿಯ ಶಾಖಾಧಿಕಾರಿಯಾದ ರವಿಕಲಾ ವಿಶ್ವನಾಥ್ ಸ್ವಾಗತಿಸಿದರು. ಉಳ್ಳಾಲ ಶಾಖೆಯ ಶಾಖಾಧಿಕಾರಿಯಾದ ಭವ್ಯ ಯೋಗೀಶ್ ವಂದಿಸಿದರು. ಮಾಡೂರು ಶಾಖೆಯ ಶಾಖಾಧಿಕಾರಿ ಸೌಮ್ಯಲತಾ
ಕಾರ್ಯಕ್ರಮ ನಿರೂಪಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು