5:20 PM Tuesday21 - May 2024
ಬ್ರೇಕಿಂಗ್ ನ್ಯೂಸ್
ಪಡೀಲು ಸಮೀಪ ಬೈಕಿಗೆ ಡಿಕ್ಕಿ ಹೊಡೆದು ಸವಾರ ಸಹಿತ ದೂರಕ್ಕೆ ಎಳೆದೊಯ್ದ ಕಾರು:… ವಿಜಯಪುರ: ಚಾಕುವಿನಿಂದ ಇರಿದು, ಕಲ್ಲಿನಿಂದ ಜಜ್ಜಿ ಯುವಕನ ಅಮಾನುಷ ಹತ್ಯೆ; ಹಣಕಾಸಿನ ವ್ಯವಹಾರ… ವಿಧಾನ ಪರಿಷತ್ ಚುನಾವಣೆ: ಮೇ 20ರಂದು ನಾಮಪತ್ರ ಹಿಂಪಡೆಯಲು ಕೊನೆಯ ದಿನ ನಟಿ ಪವಿತ್ರಾ ಜಯರಾಂ ಸ್ನೇಹಿತ ಚಂದ್ರಕಾಂತ್ ಆತ್ಮಹತ್ಯೆ: ಸ್ನೇಹಿತೆ ಸಾವನ್ನಪ್ಪಿ ವಾರದೊಳಗೆ ಚಂದ್ರು… ವಿದ್ಯುತ್ ವೈರ್ ಗೆ ತಗಲಿದ ಅಲ್ಯುಮಿನಿಯಂ ಏಣಿ: ಕರೆಂಟ್ ಶಾಕ್ ನಿಂದ ಹಲಸಿನಹಣ್ಣು… ಸಿಸಿಬಿ ಪೊಲೀಸರ ಕಾರ್ಯಾಚರಣೆ: ಎಂಡಿಎಂಎ ಸಾಗಾಟ ಮಾಡುತ್ತಿದ್ದ 4 ಮಂದಿಯ ಬಂಧನ; 14.85… ನೈಋತ್ಯ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿಯಾಗಿ ಡಾ. ಎಸ್.ಆರ್. ಹರೀಶ್ ಆಚಾರ್ಯ ನಾಮಪತ್ರ ಸಲ್ಲಿಕೆ ವಾರಣಾಸಿ ಲೋಕಸಭಾ ಕ್ಷೇತ್ರದಿಂದ ಪ್ರಧಾನಿ ಮೋದಿ ನಾಮಪತ್ರ ಸಲ್ಲಿಕೆ: ಜೂನ್ 1ರಂದು ಮತದಾನ ಲೋಕಸಭೆ ಚುನಾವಣೆಯ ಬಳಿಕ ರಾಜ್ಯ ಬಿಜೆಪಿಯಲ್ಲಿ ಭಿನ್ನಮತದ ಮಹಾಸ್ಫೋಟ: ಸಿಎಂ ಸಿದ್ದರಾಮಯ್ಯ ಭವಿಷ್ಯ ಜಾಗತಿಕ ತಾಪಮಾನ: ಕೆಟ್ಟರೂ ಬಾರದ ಬುದ್ದಿ; ಕಾರ್ಕಳ ಹೆದ್ದಾರಿ ಕಾಮಗಾರಿಗೆ ಸಾವಿರಾರು ಮರ ಬಲಿ;…

ಇತ್ತೀಚಿನ ಸುದ್ದಿ

ಸುರತ್ಕಲ್, ಕೂಳೂರಿನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಭರ್ಜರಿ ಪ್ರಚಾರ: ಬಿಸಿಲ ಬೇಗೆಗೆ ಕುಗ್ಗದೇ ಸಾಗಿದ ಪದ್ಮರಾಜ್ ಪೂಜಾರಿ ರೋಡ್ ಶೋ

15/04/2024, 21:15

ಸುರತ್ಕಲ್(reporterkarnataka.com): ಕಾಂಗ್ರೆಸ್ ರೋಡ್ ಶೋ ಸೋಮವಾರ ಸುರತ್ಕಲ್, ಮುಕ್ಕಾ, ಕೃಷ್ಣಾಪುರ, ಚಿತ್ರಾಪುರ, ಕಾಟಿಪಳ್ಳ, ಚೊಕ್ಕಬೆಟ್ಟು, ಪಣಂಬೂರು, ಕೂಳೂರು, ಕಾವೂರು, ಕುಂಜತ್ತಬೈಲ್ ಮೊದಲಾದ ಪ್ರದೇಶಗಳಲ್ಲಿ ನಡೆಯಿತು.


ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ ಅವರ ಪರವಾಗಿ ನಡೆದ ರೋಡ್ ಶೋನಲ್ಲಿ ಅಭ್ಯರ್ಥಿ ತೆರೆದ ವಾಹನದಲ್ಲಿ ಸಾಗಿದರು. ಕೆಲ ಪ್ರದೇಶಗಳಲ್ಲಿ ತೆರೆದ ವಾಹನದಿಂದ ಇಳಿದು, ನೇರವಾಗಿ ಮತದಾರರ ಬಳಿಗೆ ತೆರಳಿ ಮಾತನಾಡಿಸುತ್ತಿದ್ದರು. ಮತದಾರರು ಮಾತ್ರವಲ್ಲದೇ, ಮಕ್ಕಳು, ಯುವಕರನ್ನು ಮಾತನಾಡಿಸುತ್ತಾ ಸಾಗಿದರು. ಈ ಸಂದರ್ಭ ಮತದಾರರು, ಯುವಕ – ಯುವತಿಯರು ಕೈಕುಲುಕಿ ಶುಭಹಾರೈಸಿದರು. ಇನ್ನೂ ಕೆಲವರು ಸೆಲ್ಫಿ ಕ್ಲಿಕ್ಕಿಸಿಕೊಂಡು ಹರ್ಷಿಸಿದರು.
ಸೂರ್ಯ ನೆತ್ತಿ ಮೇಲೆ ಬರುತ್ತಿದ್ದಂತೆ ಸುಡುಸುಡುವ ಅನುಭವ. ಆದರೂ ಅಭ್ಯರ್ಥಿ ತಮ್ಮ ಊರಿಗೆ ಬಂದ ಸಂಭ್ರಮದಲ್ಲಿ ಕಾರ್ಯಕರ್ತರು ಬಿಸಿಲಿನ ಪ್ರಖರತೆಯನ್ನೇ ಮರೆತುಬಿಟ್ಟು, ರೋಡ್ ಶೋ ಜೊತೆ ಸೇರಿಕೊಂಡರು. ಹೆಚ್ಚಿನ ಪ್ರದೇಶಗಳಲ್ಲಿ ಅಭ್ಯರ್ಥಿಗೆ ಹೂ ಮಾಲೆ ಹಾಕಿ, ಪಟಾಕಿ ಸಿಡಿಸಿ ಸಂಭ್ರಮಿಸಿದರು.
*ಧಾರ್ಮಿಕ ಕ್ಷೇತ್ರಗಳ ಭೇಟಿ:*
ಮುಕ್ಕ ಶ್ರೀ ರಾಮ ಮಂದಿರ, ಪಡ್ರೆ ಶ್ರೀ ಧೂಮಾವತಿ ಬಂಟರ ದೈವಸ್ಥಾನ ಭಂಡಾರ ಮನೆ, ಮುಕ್ಕ ಶ್ರೀ ಸತ್ಯಧರ್ಮ ದೇವಿ ದೇವಸ್ಥಾನ, ಕಾಟಿಪಳ್ಳ ಶ್ರೀ ಕ್ಷೇತ್ರ ಗಣೇಶಪುರ ಶ್ರೀ ಮಹಾಗಣಪತಿ ದೇವಸ್ಥಾನ, ಚಿತ್ರಾಪುರ ಪಣಂಬೂರು ಶ್ರೀ ಮಹಾವಿಷ್ಣು ಭಜನಾ ಮಂದಿರ, ಕುಂಜತ್ತಬೈಲ್ ಶ್ರೀ ಆಂಜನೇಯ ಸ್ವಾಮಿ ದೇವಸ್ಥಾನ ಸದ್ಭಾವನಾ ಸಮಿತಿ ಹಾಗೂ ಮುಕ್ಕ ಜುಮ್ಮಾ ಮಸೀದಿ, ಚೊಕ್ಕಬೆಟ್ಟು ಮುಹಿಯುದ್ದೀನ್ ಜುಮಾ ಮಸೀದಿಗೆ ಭೇಟಿ ನೀಡಿ, ವಿಶೇಷ ಪ್ರಾರ್ಥನೆ ಸಲ್ಲಿಸಿದರು.
ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಇನಾಯತ್ ಅಲಿ, ಪ್ರತಿಭಾ ಕುಳಾಯಿ, ಪಡ್ರೆ ಶ್ರೀ ಧೂಮಾವತಿ ಬಂಟರ ದೈವಸ್ಥಾನ ಭಂಡಾರ ಮನೆಯ ಗುರಿಕಾರ ದೇವೇಂದ್ರ ಪೂಜಾರಿ, ರಮಾನಾಥ ಅಮೀನ್, ವರುಣ್ ಅಂಚನ್, ಮಹಮ್ಮದ್ ರಂಝಾ, ಸದಾಶಿವ ಜಿ. ಅಮೀನ್, ರಮೇಶ್ ಜಿ. ಅಮೀನ್, ಬೋಜ ಪಾಡಿ, ಮುಕ್ಕ ಶ್ರೀ ಸತ್ಯಧರ್ಮ ದೇವಿ ದೇವಸ್ಥಾನದ ಆಡಳಿತ ಸಮಿತಿ ಅಧ್ಯಕ್ಷ ರವಿರಾಜ್ ಸುವರ್ಣ, ಪುರುಷೋತ್ತಮ ದೇವಾಡಿಗ, ಪಿ.ಜಿ. ಕುಂದರ್, ಸತೀಶ್ ಭಟ್, ಕಾಟಿಪಳ್ಳ ಶ್ರೀ ಕ್ಷೇತ್ರ ಗಣೇಶಪುರ ಶ್ರೀ ಮಹಾಗಣಪತಿ ದೇವಸ್ಥಾನದ ಆಡಳಿತ ಸಮಿತಿ ಅಧ್ಯಕ್ಷ ಧರ್ಮೇಂದ್ರ ಗಣೇಶಪುರ, ಯಾದವ ಶೆಟ್ಟಿ, ಚಿತ್ರಾಪುರ ಪಣಂಬೂರು ಶ್ರೀ ಮಹಾವಿಷ್ಣು ಭಜನಾ ಮಂದಿರದಲ್ಲಿ ಪಣಂಬೂರು ಮೊಗವೀರ ಮಹಾಸಭಾ ಅಧ್ಯಕ್ಷ ಮಾಧವ ಸುವರ್ಣ ಪಿ. ದೇವೇಂದ್ರ, ಕೇಶವ ಕಾಂಚನ, ಅಮರನಾಥ ಗುರಿಕ್ಕಾರ, ಪುರುಷೋತ್ತಮ ಕೋಟ್ಯಾನ್, ಹರೀಶ್ ಪುತ್, ನಾಗೇಶ್ ಪುತ್ರನ್, ರಮೇಶ್ ಪುತ್ರನ್ ಹಾಗೂ ಮುಕ್ಕ ಜುಮ್ಮಾ ಮಸೀದಿಯ ರಝಾಕ್, ಎಂ.ಸಿ. ಉಮ್ಮರ್ ಫಾರೂಕ್ ಮೊದಲಾದವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು