ಇತ್ತೀಚಿನ ಸುದ್ದಿ
ನಂಜನಗೂಡಿನಲ್ಲಿ ರಂಗೇರಿದ ಚುನಾವಣಾ ಕಣ: ಕಾಂಗ್ರೆಸ್ ಅಭ್ಯರ್ಥಿ ಪರ ಗ್ರಾಮ ಗ್ರಾಮಗಳಲ್ಲಿ ಭಾರೀ ಪ್ರಚಾರ
16/04/2024, 15:51
ಮೋಹನ್ ನಂಜನಗೂಡು ಮೈಸೂರು
info.reporterarnataka@gmail.com
ಕಾಂಗ್ರೆಸ್ ಅಭ್ಯರ್ಥಿ ಸುನಿಲ್ ಬೋಸ್ ಪರ ನಂಜನಗೂಡು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ವಿವಿಧ ಗ್ರಾಮ ಪಂಚಾಯಿತಿ ಕೇಂದ್ರ ಸ್ಥಾನಗಳಲ್ಲಿ ಚುನಾವಣಾ ಮತ ಪ್ರಚಾರ ಹಮ್ಮಿಕೊಳ್ಳಲಾಯಿತು.
ದೇಬೂರು, ದೇವಿರಮ್ಮನಹಳ್ಳಿ, ನವಿಲೂರು, ಸಿಂಧುವಳ್ಳಿ ಸೇರಿದಂತೆ ಹಲವು ಗ್ರಾಮ ಪಂಚಾಯಿತಿ ಕೇಂದ್ರ ಸ್ಥಾನಗಳಲ್ಲಿ ಅಭ್ಯರ್ಥಿ ಸುನಿಲ್ ಬೋಸ್ ಪರ ಮತಯಾಚನೆಯನ್ನು ಕಾಂಗ್ರೆಸ್ ಮುಖಂಡರು ಮಾಡಿದರು.
ಶಾಸಕ ದರ್ಶನ್ ಧ್ರುವನಾರಾಯಣ್ ಹಾಗೂ ಮಾಜಿ ಶಾಸಕ ಕಳಲೆ ಕೇಶವಮೂರ್ತಿ ನೇತೃತ್ವದಲ್ಲಿ ಚುನಾವಣಾ ಪ್ರಚಾರ ನಡೆಯಿತು.
ಶಾಸಕ ದರ್ಶನ್ ಧ್ರುವನಾರಾಯಣ್ ಮಾತನಾಡಿ, ಕಳೆದ ಐದು ವರ್ಷಗಳಲ್ಲಿ ಬಿಜೆಪಿ ನಿಮ್ಮ ಗ್ರಾಮಗಳಿಗೆ ಏನು ಕೊಡುಗೆ ಕೊಟ್ಟಿದೆ ಎಂದು ಪ್ರಶ್ನಿಸಿದರು. ಕೋವಿಡ್ ನಂತಹ ಸಂಕಷ್ಟ ಕಾಲದಲ್ಲಿ ಆರೋಗ್ಯ ಹಸ್ತ ಎಂಬ ಜನಪರ ಕಾರ್ಯಕ್ರಮವನ್ನು ಹಮ್ಮಿಕೊಂಡು ರಾಜ್ಯಾದ್ಯಂತ ಜನರ ಸಂಕಷ್ಟಗಳಿಗೆ ಸ್ಪಂದಿಸಿದ್ದು ಕಾಂಗ್ರೆಸ್ ಪಕ್ಷ, ಹಲವು ಭಾಗ್ಯಗಳು ಹಾಗೂ ಗ್ಯಾರಂಟಿಗಳನ್ನು ನೀಡಿ ಜನರ ಕಷ್ಟಗಳಿಗೆ ಸ್ಪಂದಿಸಿ ನುಡಿದಂತೆ ನಡೆದ ಪಕ್ಷ ಕಾಂಗ್ರೆಸ್ ಪಕ್ಷ .ನುಡಿದಂತೆ ನಡೆದ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಕೈ ಬಲಪಡಿಸಲು ನಮ್ಮ ಪಕ್ಷದ ಅಭ್ಯರ್ಥಿ ಸುನಿಲ್ ಬೋಸ್ ಅವರನ್ನು ಲೋಕಸಭೆಗೆ ಆರಿಸಿ ಕಳಿಸುವಂತೆ ಮತದಾರರಲ್ಲಿ ಮನವಿ ಮಾಡಿಕೊಂಡರು.
ಮಾಜಿ ಶಾಸಕ ಕಳಲೆ ಕೇಶವಮೂರ್ತಿ ಹಾಗೂ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕುರಟ್ಟಿ ಮಹೇಶ್ ಮಾತನಾಡಿ, ಕಾಂಗ್ರೆಸ್ ಸರ್ಕಾರದ ಸಾಧನೆ ಹಾಗೂ ಗ್ಯಾರಂಟಿಗಳನ್ನು ಮತದಾರರಿಗೆ ತಿಳಿಸುವ ಮೂಲಕ ಹೆಚ್ಚಿನ ಮತಗಳ ಅಂತರದಿಂದ ನಮ್ಮ ಪಕ್ಷದ ಅಭ್ಯರ್ಥಿಯನ್ನು ಗೆಲ್ಲಿಸುವಂತೆ ಕಾರ್ಯಕರ್ತ ಮುಖಂಡರಲ್ಲಿ ಮನವಿ ಮಾಡಿಕೊಂಡರು.
ಕಾಂಗ್ರೆಸ್ ಯುವ ಘಟಕದ ಅಧ್ಯಕ್ಷ ಅಶೋಕ್, ಮುಖಂಡರಾದ ಇಂಧನ್ ಬಾಬು,ಕರುಳಪುರ ನಾಗರಾಜ್, ಬುಲೆಟ್ ಮಹದೇವಪ್ಪ, ಚಾಮರಾಜ್, ಶಶಿರೇಖಾ, ಹೇಮಂತ್, ಬಸವರಾಜ್, ಸೇರಿದಂತೆ ಹಲವಾರು ಮುಖಂಡರು ಉಪಸ್ಥಿತರಿದ್ದರು.