2:53 PM Thursday3 - July 2025
ಬ್ರೇಕಿಂಗ್ ನ್ಯೂಸ್
ಸೋರುತ್ತಿದೆ ಸೂರು; ಕೊಠಡಿ ತುಂಬಾ ನೀರು: ರಾಷ್ಟ್ರಕವಿ ಕುವೆಂಪು ಓದಿದೆ ಶಾಲೆಯ ಕೇಳುವವರೇ… ಮಲೆನಾಡಲ್ಲಿ ಮುಂದುವರಿದ ಮಳೆ: ಶೃಂಗೇರಿಯ ಗಾಂಧಿ ಮೈದಾನದ ರಸ್ತೆಗೆ ನುಗ್ಗಿ ನೆರೆ ನೀರು;… ಮುಖ್ಯಮಂತ್ರಿ ಸ್ಥಾನಕ್ಕೆ ಯಾವುದೇ ಪೈಪೋಟಿಯಿಲ್ಲ: ಸಿಎಂ ಕಾನೂನು ಸಲಹೆಗಾರ ಪೊನ್ನಣ್ಣ Accident | ಸುರತ್ಕಲ್ ಬಳಿ ಎರಡು ಖಾಸಗಿ ಬಸ್ಸುಗಳು ಮುಖಾಮುಖಿ ಡಿಕ್ಕಿ: 28… Chikkaballapura | ರಾಜ್ಯ ಸಚಿವ ಸಂಪುಟ ಸಭೆ: ಮುಖ್ಯಮಂತ್ರಿ ಘೋಷಿಸಿದ ಯೋಜನೆ, ತೀರ್ಮಾನಗಳೇನು? JDS Protest | ರಾಜ್ಯದಲ್ಲಿ ಆರ್ಥಿಕ ಅರಾಜಕತೆ: ಬೆಂಗಳೂರು ಪ್ರತಿಭಟನೆಯಲ್ಲಿ ಜೆಡಿಎಸ್ ಆರೋಪ Dharwad | ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ: ಕಾರ್ಮಿಕ… ಬೆಂಗಳೂರು ಕಾಲ್ತುಳಿತದ ಪ್ರಕರಣ; ಸಿಎಟಿ ಆದೇಶ ವಿರುದ್ಧ ಮೇಲ್ಮನವಿ ಸಲ್ಲಿಸಲು ಅವಕಾಶವಿದೆ: ಮುಖ್ಯಮಂತ್ರಿ Karnataka CM | ಮಾಧ್ಯಮಗಳು ನನ್ನನ್ನೂ ಸೇರಿ ಅಧಿಕಾರಸ್ಥರ ಓಲೈಕೆ ಮಾಡಬಾರದು: ಮುಖ್ಯಮಂತ್ರಿ… Kodagu | ಕುಶಾಲನಗರದ ಕೂಡಿಗೆಯಲ್ಲಿ ಚಿನ್ನದಂಗಡಿ ಮಾಲೀಕನ ಮನೆಗೆ ಕನ್ನ: 14 ಲಕ್ಷ…

ಇತ್ತೀಚಿನ ಸುದ್ದಿ

ಕ್ರೀಡೆಯಲ್ಲೂ ಸೈ, ಓದಿನಲ್ಲೂ ಸೈ; ಪಿಯುಸಿಯಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿನಿ ಡಿ.ಬಿ.ಶಬರಿ

18/04/2024, 16:36

ಸಂತೋಷ್ ಅತ್ತಿಗರೆ ಚಿಕ್ಕಮಗಳೂರು

info.reporterkarnataka@gmail.com

ಕ್ರೀಡೆಯಲ್ಲಿ ಸಾಧನೆ ಮಾಡಿ ಓದಿನಲ್ಲೂ ಸಾಧನೆ ಮಾಡುವ ವಿದ್ಯಾರ್ಥಿಗಳು ಬಹಳ ವಿರಳ.ಅದರಲ್ಲೂ ಕ್ರೀಡೆಯ ಬೆನ್ನೇರಿ ಸಾಧನೆ ಮಾಡಿ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲೂ ವಾಣಿಜ್ಯ ವಿಭಾಗದಲ್ಲಿ ಶೇ. 90.83 ಅಂಕ ಪಡೆದಿರುವ ದುರ್ಗದಹಳ್ಳಿಯ ಡಿ.ಬಿ.ಶಬರಿ ಕ್ರೀಡೆಯಲ್ಲೂ ಸೈ ಓದಿನಲ್ಲಿಯೂ ಸೈ ಎಂಬಂತೆ ಉತ್ತಮ ಅಂಕ ಪಡೆದು ಮಲೆನಾಡಿಗೆ ಕೀರ್ತಿ ತಂದಿದ್ದಾರೆ. ವಿದ್ಯಾರ್ಥಿನಿ ಡಿ.ಬಿ.ಶಬರಿ ಕಾಫಿನಾಡಿನ ಕ್ರೀಡಾಪಟುb4*100 ರಿಲೆಯಲ್ಲಿ ರಾಜ್ಯಮಟ್ಟದಲ್ಲಿ ದ್ವಿತೀಯ ಸ್ಥಾನ ಪಡೆದು ಬೆಳ್ಳಿ ಪದಕ ಪಡೆದಿರುವ ಪ್ರತಿಭಾವಂತೆ. ಇವರು ಬಾಳೂರು ಹೋಬಳಿ ದುರ್ಗದಹಳ್ಳಿಯ ಕೃಷಿಕರಾದ ಡಿ.ಪಿ.ಬಾಲಕೃಷ್ಣ ಹಾಗೂ ಎಂ.ಎಸ್.ಅಶ್ವಿನಿ ಅವರ ಪುತ್ರಿಯಾಗಿದ್ದಾರೆ.ಇವರು ಮೂಡಬಿದರೆಯ ಆಳ್ವಾಸ್ ಕಾಲೇಜಿನ ವಿದ್ಯಾರ್ಥಿನಿಯಾಗಿದ್ದು ಪ್ರಸ್ತುತ ಹರ್ಡಲ್ಸ್ ನಲ್ಲಿ ತರಬೇತಿ ಪಡೆಯುತ್ತಿದ್ದಾರೆ. ಇವರ ಕ್ರೀಡೆ ಹಾಗೂ ಶೈಕ್ಷಣಿಕ ಸಾಧನೆಗೆ ಪೋಷಕರು,ಗ್ರಾಮಸ್ಥರು ಪ್ರಶಂಸೆ ವ್ಯಕ್ತ ಪಡಿಸಿದ್ದಾರೆ. ‘ಪಿಯುಸಿ ನಂತರ ಬಿಬಿಎ, ಎಂಬಿಎ ವ್ಯಾಸಂಗ ಮಾಡಿ ಉತ್ತಮ ಕ್ರೀಡಾಪಟು ಆಗಿ ಸರ್ಕಾರಿ ಅಧಿಕಾರಿಯಾಗಬೇಕು’ ಎಂಬುದು ನನ್ನ ಮಹದಾಸೆ ಎಂದು ವಿದ್ಯಾರ್ಥಿನಿ ಡಿ.ಬಿ.ಶಬರಿ ಪತ್ರಿಕೆಗೆ ಮಾಹಿತಿ ನೀಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು