3:39 AM Friday27 - March 2026
ಬ್ರೇಕಿಂಗ್ ನ್ಯೂಸ್
ಕೇಂದ್ರ ಸರಕಾರವನ್ನು ಟೀಕೆ ಮಾಡುವುದರಲ್ಲೇ 3 ವರ್ಷಗಳ ಕಾಲಹರಣ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ… ಕೈ ನಾಯಕರ ಸಂಧಾನ ಯಶಸ್ವಿ: ದಾವಣಗೆರೆ ದಕ್ಷಿಣ ಬಂಡಾಯ ಅಭ್ಯರ್ಥಿ ಪೈಲ್ವಾನ್ ಸ್ಪರ್ಧೆಯಿಂದ… ಚಿಕ್ಕಮಗಳೂರು: ಬಿಸಿಲ ಧಗೆಗೆ ಹೊತ್ತಿ ಉರಿಯುತ್ತಿರುವ ಮೀಸಲು ಅರಣ್ಯ; ಅಪಾಯದಲ್ಲಿ ಜೀವ ಸಂಕುಲ 1ನೇ ತರಗತಿ ದಾಖಲಾತಿ ವಯೋಮಿತಿಯಲ್ಲಿ 60 ದಿನಗಳ ಸಡಿಲಿಕೆ: ಸಚಿವ ಮಧು ಬಂಗಾರಪ್ಪ… ತುಮಕೂರು | ಮಧ್ಯರಾತ್ರಿ ಕುಡುಕ ಪುಂಡರ ಅಟ್ಟಹಾಸ: 10ಕ್ಕೂ ಅಧಿಕ ವಾಹನಗಳ ಗ್ಲಾಸ್… ರಾಜ್ಯ ಸರ್ಕಾರಕ್ಕೆ ಪ್ರತಿಷ್ಠೆಯಾದ ಉಪ ಚುನಾವಣೆ: ಪೈಲ್ವಾನ್ ಮನವೊಲಿಸಲು ಜಮೀರ್‌ಗೆ ಮುಖ್ಯಮಂತ್ರಿ ಸೂಚನೆ ಮಾಜಿ ಶಾಸಕರ ಪುತ್ರನ ಕೊಲೆ ಪ್ರಕರಣ: ಮಹಿಳೆ ಸೇರಿ ಮೂವರು ಪೊಲೀಸ್ ವಶಕ್ಕೆ ಹೈಕಮಾಂಡ್ ಹೇಳಿದಾಗ ಡಿಕೆಶಿ ಸಿಎಂ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ ಕಾಂಗ್ರೆಸ್ ಮೋಸ ಮಾಡಿದೆ; ನಾಮಪತ್ರ ಹಿಂತೆಗೆಯುವ ಮಾತೇ ಇಲ್ಲ: ತೊಡೆ ತಟ್ಟಿದ ಪೈಲ್ವಾನ್‌ ದಾವಣಗೆರೆ ದಕ್ಷಿಣ: ಬಿಜೆಪಿ ಅಭ್ಯರ್ಥಿಯ ಪತ್ನಿಗೆ ಮುಸ್ಲಿಂ ಮಹಿಳೆಯರಿಂದ ಭವ್ಯ ಸ್ವಾಗತ, ಉಡಿ…

ಇತ್ತೀಚಿನ ಸುದ್ದಿ

ನಂಜನಗೂಡಿನಲ್ಲಿ ಸಂಭ್ರಮ- ಸಡಗರದ ಶ್ರೀ ರಾಮೇಶ್ವರ ರಥೋತ್ಸವ, ಜಾತ್ರಾ ಮಹೋತ್ಸವ

18/04/2024, 19:11

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ನಂಜನಗೂಡು ತಾಲೂಕು ದೇಬೂರು ಗ್ರಾಮದಲ್ಲಿ ಇಂದು ಶ್ರೀ ರಾಮೇಶ್ವರ ರಥೋತ್ಸವ ಹಾಗೂ ಜಾತ್ರಾ ಮಹೋತ್ಸವ ವಿಜೃಂಭಣೆ ಹಾಗೂ ಶ್ರದ್ಧಾಭಕ್ತಿಯಿಂದ ನೆರವೇರಿತು.
ಪ್ರತಿ ವರ್ಷ ಶ್ರೀ ರಾಮನವಮಿಯ ಮಾರನೇ ದಿನದಂದು ತಲೆತಲಾಂತರದಿಂದ ಶ್ರೀ ರಾಮೇಶ್ವರ ಜಾತ್ರಾ ಮಹೋತ್ಸವ ನಡೆಸಿಕೊಂಡು ಬರುತ್ತಿದೆ.
ಗ್ರಾಮದ ಎಲ್ಲಾ ವರ್ಗದ ಕೋಮಿನವರು ಜಾತ್ಯತೀತ ಹಾಗೂ ಧರ್ಮಾತೀತವಾಗಿ ಸೇರಿ ಒಗ್ಗಟ್ಟು ಮತ್ತು ಸೌಹಾರ್ದತೆಯಿಂದ ಜಾತ್ರಾ ಮಹೋತ್ಸವ ಹಾಗೂ ರಥೋತ್ಸವವನ್ನು ಆಚರಿಸಿ ಸಂಭ್ರಮಿಸುತ್ತಾರೆ.
ಜಾತ್ರಾ ಪ್ರಯುಕ್ತ ಬಗೆ ಬಗೆಯ ಹೂಗಳಿಂದ ಅಲಂಕರಿಸಲಾದ ಶ್ರೀ ಸೀತಾ ಸಮೇತ ಶ್ರೀರಾಮರ ಉತ್ಸವ ಮೂರ್ತಿಗಳನ್ನು ವಿವಿಧ ಬಗೆಯ ಹೂವು ಹಾಗೂ ಬಣ್ಣ ಬಣ್ಣದ ಬಂಟಿಂಗ್ಸ್ ಮತ್ತು ಬಾವುಟಗಳಿಂದ ಅಲಂಕರಿಸಲಾದ ಬೃಹತ್ ರಥದಲ್ಲಿರಿಸಿ ಪೂಜೆ ಸಲ್ಲಿಸಲಾಗುತ್ತದೆ.


ನಂತರ ಬೆಳಿಗ್ಗೆ 10.30ಕ್ಕೆ ರಥೋತ್ಸವಕ್ಕೆ ಚಾಲನೆ ನೀಡಲಾಯಿತು.
ತಮಟೆ ವಾದ್ಯ, ನಗಾರಿ ಮಂಗಳವಾದ್ಯ ಸೇರಿದಂತೆ ಸಾವಿರಾರು ಭಕ್ತರ ಹರ್ಷೋದ್ಗಾರದೊಂದಿಗೆ ಗ್ರಾಮದ ಕಿರಿದಾದ ರಥ ಬೀದಿಯಲ್ಲಿ ರಥೋತ್ಸವವು ಯಾವುದೇ ಅಡೆತಡೆ ಇಲ್ಲದೆ ವಿರಾಜಮಾನವಾಗಿ ಸಾಗಿ ಸ್ವಸ್ಥಾನ ಸೇರಿತು.
ಮೆರವಣಿಗೆಯುದ್ದಕ್ಕೂ ರಸ್ತೆಯ ಇಕ್ಕೆಲಗಳಲ್ಲಿ ಭಕ್ತರು ಪೂಜಾ ಸಾಮಗ್ರಿಗಳೊಂದಿಗೆ ಬಂದು ಶ್ರೀರಾಮನಿಗೆ ಪೂಜೆ ಸಲ್ಲಿಸುವ ಮೂಲಕ ತಮ್ಮ ಭಕ್ತಿ ಭಾವ ಮೆರೆದರು.
ಇದೇ ಸಂದರ್ಭ ನವ ದಂಪತಿಗಳು ಸೇರಿದಂತೆ ಜಾತ್ರೆಯಲ್ಲಿ ಪಾಲ್ಗೊಂಡ ಭಕ್ತರು ತೇರಿಗೆ ಹಣ್ಣು ದವನ ಎಸೆಯುವ ಮೂಲಕ ತಮ್ಮ ಭಕ್ತಿ ನಮನ ಸಲ್ಲಿಸಿದರು.
ಶಾಸಕ ದರ್ಶನ್ ದ್ರುವನಾರಾಯಣ್ , ಮಾಜಿ ಶಾಸಕ ಕಳಲೆ ಕೇಶವಮೂರ್ತಿ ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಮುಖಂಡರುಗಳು ಜಾತ್ರಾ ಮಹೋತ್ಸವದಲ್ಲಿ ಪಾಲ್ಗೊಂಡಿದ್ದರು.
ತಾಲೂಕಿನ ವಿವಿಧೆಡೆಯಿಂದ ಸಾವಿರಾರು ಭಕ್ತರು ಪಾಲ್ಗೊಂಡು ಜಾತ್ರೆ ಹಾಗೂ ರಥೋತ್ಸವದ ಸಂಭ್ರಮವನ್ನು ಕಣ್ತುಂಬಿಕೊಂಡರು.
ಪೂಜಾ ಸಾಮಗ್ರಿ ಸೇರಿದಂತೆ ವಿವಿಧ ಬಗೆಯ ಅಂಗಡಿ ಮುಂಗಟುಗಳು ಜಾತ್ರೆಗೆ ಕಳೆ ಕಟ್ಟಿದ್ದವು. ರಥೋತ್ಸವದ ವೇಳೆ ಬಂದ ಭಕ್ತರಿಗೆ ಗ್ರಾಮಸ್ಥರು ಅಲ್ಲಲ್ಲಿ ಮಜ್ಜಿಗೆ, ಪಾನಕ, ಕೋಸಂಬರಿ ಸೇರಿದಂತೆ ಪ್ರಸಾದ ವಿನಿಯೋಗ ಮಾಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು